Get Updates
Get notified of breaking news, exclusive insights, and must-see stories!

"ಸರ್ಕಾರದಿಂದ 2 ವರ್ಷದಲ್ಲಿ ಜನರಿಗೆ 1 ಲಕ್ಷ ಕೋಟಿ ರೂಪಾಯಿ!"

1,70,000 ಜನರಿಗೆ ಕುಡಿಯುವ ನೀರು ಒದಗಿಸುವ ಜೊತೆಗೆ ಕೂಡ್ಲಿಗಿಯ ಅಂತರ್ಜಲ ವೃದ್ಧಿಗೆ ಶ್ರಮಿಸಿ ಯಶಸ್ವಿಯಾದ ಶಾಸಕ ಶ್ರೀನಿವಾಸ್ ಅವರನ್ನು ಪಡೆದ ಕೂಡ್ಲಿಗಿ ಜನತೆ ಅತ್ಯಂತ ಅದೃಷ್ಟವಂತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅಲ್ಲದೇ ರಾಜ್ಯದ ಜನರ ಖಾತೆಗೆ ಎಷ್ಟು ಹಣ ಹಾಕಿದ್ದಾರೆ ಎನ್ನುವುದರ ಬಗ್ಗೆಯೂ ಮಾತನಾಡಿದ್ದಾರೆ.

ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ, ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಸಿ.ಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಬರಡು ನೆಲ ಕೂಡ್ಲಿಗಿಯನ್ನು ಹಸಿರಿನ ನೆಲವನ್ನಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿರುವ ಶಾಸಕ ಶ್ರೀನಿವಾಸ್ ಅವರು ಅತ್ಯಂತ ಕ್ರಿಯಾಶೀಲರು. ಇವರಿಂದ ಕ್ಷೇತ್ರದ ಅಭಿವೃದ್ಧಿ ಅತ್ಯಂತ ವೇಗ ಪಡೆದುಕೊಂಡಿದೆ. ನಮ್ಮದು ಅಭಿವೃದ್ಧಿ ಪರವಾದ ನುಡಿದಂತೆ ನಡೆಯುತ್ತಿರುವ ಸರ್ಕಾರ ಎಂದು ಹೇಳಿದ್ದಾರೆ.

Government to provide 1 lakh crore rupees to Karnataka people in 2 years

ಕಳೆದ ಎರಡು ವರ್ಷಗಳಲ್ಲಿ ಕೂಡ್ಲಿಗಿ‌ ಕ್ಷೇತ್ರಕ್ಕೆ ₹1,750 ಕೋಟಿಗೂ ಅಧಿಕ ಮೊತ್ತದ ಹಣದಲ್ಲಿ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳು ನಡೆದಿವೆ. ಜೊತೆಗೆ ಚುನಾವಣೆ ವೇಳೆ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಘೋಷಿಸಿ, ಐದಕ್ಕೆ ಐದನ್ನೂ ಜಾರಿ ಮಾಡಿದ್ದೇವೆ. ರಾಜ್ಯದ ಜನರ ಮನೆ ಬಾಗಿಲಿಗೆ ಪ್ರತೀ ತಿಂಗಳು ಸರ್ಕಾರದ ಗ್ಯಾರಂಟಿಗಳು ತಲುಪುತ್ತಿವೆ‌. 1.20 ಕೋಟಿ ಕುಟುಂಬಗಳ ಮನೆ ಯಜಮಾನಿಯರಿಗೆ ಗೃಹಲಕ್ಷ್ಮಿ ಹಣ ಮತ್ತು ಗೃಹಜ್ಯೋತಿಯ ಸವಲತ್ತು ತಲುಪುತ್ತಿದೆ ಎಂದಿದ್ದಾರೆ.

ಎರಡು ವರ್ಷದಲ್ಲಿ ನಮ್ಮ ಸರ್ಕಾರ ಒಂದು ಲಕ್ಷ ಕೋಟಿ ರೂಪಾಯಿಗಳನ್ನು ನೇರವಾಗಿ ರಾಜ್ಯದ ಜನರ ಜೇಬಿಗೆ ಹಾಕಿದೆ. ನಾವು ನುಡಿದಂತೆ ನಡೆದು ಜನರ ಜೇಬಿಗೆ ಹಣ ಹಂಚುತ್ತಿದ್ದರೆ, ಸುಳ್ಳನ್ನೇ ಮನೆ ದೇವರು ಮಾಡಿಕೊಂಡಿರುವ ಬಿಜೆಪಿಯವರು ಮಾನ ಮರ್ಯಾದೆ ಬಿಟ್ಟು ರಾಜ್ಯದ ಜನರಿಗೆ ಸುಳ್ಳುಗಳನ್ನು ಹಂಚುತ್ತಿದ್ದಾರೆ. ಸುಳ್ಳಿನ ಸರದಾರ ಬಿಜೆಪಿಯವರು ಈಗ ಸಾರ್ವಜನಿಕವಾಗಿ ಹರಾಜಾಗಿದ್ದಾರೆ. ಇವರು ಲಜ್ಜೆಗೆಟ್ಟು ಮತಗಳ್ಳತನಕ್ಕೆ ಇಳಿದು ಸಿಕ್ಕಿ ಬಿದ್ದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

FRP ಮತ್ತು MSP ಎರಡನ್ನೂ ನಿಗದಿ ಮಾಡೋದು ಕೇಂದ್ರದ ಬಿಜೆಪಿ ಸರ್ಕಾರ. ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಹ್ಲಾದ್ ಜೋಶಿ. ಆದರೆ, ವಿಜಯೇಂದ್ರ ತಮ್ಮದೇ ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ಮಾಡಿದ ದ್ರೋಹವನ್ನು ಮರೆಮಾಚಿ ಬೆಳಗಾವಿಗೆ ಹೋಗಿ ಪ್ರತಿಭಟನೆಯ ಡ್ರಾಮಾ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದರೂ ರಾಜ್ಯ ಸರ್ಕಾರ ಹೆಚ್ಚುವರಿ ಹಣ ನೀಡಿ ನಮ್ಮ ಕಬ್ಬು ಬೆಳೆಗಾರರನ್ನು ಕಾಪಾಡೊ ಕೆಲಸ ಮಾಡಿದೆ.

ಶಾಸಕ ಶ್ರೀನಿವಾಸ್, ಸಂಸದ ತುಕಾರಾಂ ಇಬ್ಬರೂ ಜನರ ಅಭಿವೃದ್ಧಿ ಹೊರತಾಗಿ ಬೇರೇನನ್ನೂ ಕೇಳುವವರಲ್ಲ. ಇವರಿಬ್ಬರನ್ನು ಗೆಲ್ಲಿಸಿದ ಜನತೆಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ಶಾಸಕರು ಮತ್ತು ಸಂಸದರು ನಿಮ್ಮ ಆಸ್ತಿ ಇದ್ದ ಹಾಗೆ. ಇವರನ್ನು ಕಾಪಾಡಿಕೊಳ್ಳಿ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+