Get Updates
Get notified of breaking news, exclusive insights, and must-see stories!

ಬುಡಕಟ್ಟು ಜನರಿಗೆ ಸರ್ಕಾರದಿಂದ ಪಡಿತರ ಹಂಚಿಕೆ

ಬೆಂಗಳೂರು, ಅ.7 : ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಗಿರಿಜನರು ಹಾಗೂ ಬುಡಕಟ್ಟು ಜನರಿಗೆ ಮಳೆಗಾಲ ಸೇರಿದಂತೆ ವರ್ಷದ ಆರು ತಿಂಗಳು ಪೌಷ್ಠಿಕ ಆಹಾರ ನೀಡುವ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. 30 ಕೋಟಿ ವೆಚ್ಚದಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಚಾಮರಾಜ ನಗರ ಜಿಲ್ಲೆಗಳ ಗಿರಿಜನರು ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು, ಈ ಯೋಜನೆಗಾಗಿ 30 ಕೋಟಿ ರೂ.ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಿದರು. ಅರಣ್ಯ ಪ್ರದೇಶಗಳಲ್ಲಿ ತೀವ್ರ ಮಳೆಗಾಲ ಸೇರಿದಂತೆ ವರ್ಷದ ಆರು ತಿಂಗಳು ಆಹಾರದ ಕೊರತೆ ನಿರ್ಮಾಣವಾಗುತ್ತದೆ. ಆದ್ದರಿಂದ ಈ ಸಂದರ್ಭದಲ್ಲಿ ಪೌಷ್ಠಿಕ ಆಹಾರ ನೀಡಲು ಯೋಜನೆ ಜಾರಿಗೊಳಿಸಲಾಗಿದೆ ಎಂದರು.

H. Anjaneya

ಈ ಯೋಜನೆಯ ಅನ್ವಯ ಅರಣ್ಯವಾಸಿಗಳಿಗೆ ಪ್ರತಿ ತಿಂಗಳು 30 ಕೆ.ಜಿ. ಅಕ್ಕಿ, 2 ಲೀಟರ್‌ ಎಣ್ಣೆ, 2 ಕೆ.ಜಿ. ಬೇಳೆ, 5 ಕೆ.ಜಿ. ಸಕ್ಕರೆ ವಿತರಣೆ ಮಾಡಲಾಗುತ್ತದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಚಾಮರಾಜ ನಗರ ಜಿಲ್ಲೆಗಳ ಗಿರಿಜನರು ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಇವುಗಳಲ್ಲದೇ ಅರಣ್ಯದಲ್ಲಿ ವಾಸಿಸುತ್ತಿರುವ ಹಾಗೂ ನಾಗರಿಕ ಬದುಕಿನಿಂದ ದೂರವಿರುವ ಈ ಜನರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಸಂಕಲ್ಪವನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ಸಚಿವರು ತಿಳಿಸಿದರು.

ವಿದ್ಯಾರ್ಥಿ ನಿಲಯ ಸ್ಥಾಪನೆ : ಪರಿಶಿಷ್ಟ ಪಂಗಡದವರ ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಈ ವರ್ಷ 4515 ಕೋಟಿ ರೂ. ಮೀಸಲಿಡಲಾಗಿದೆ. ಪಂಗಡದ ವಿದ್ಯಾರ್ಥಿಗಳಿಗೆ 28 ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯ ಹಾಗೂ 4 ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ನಿಲಯ ಆರಂಭಿಸಲಾಗುವುದು ಎಂದು ಸಚಿವ ಆಂಜನೇಯ ಅವರು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+