Turkey earthquake: ಟರ್ಕಿ, ಸಿರಿಯಾದ ಭೂಕಂಪದಲ್ಲಿ ಸಿಲುಕಿರುವ ಕನ್ನಡಿಗರ ಮಾಹಿತಿಗಾಗಿ ಸಹಾಯವಾಣಿ; ಸಿಎಂ
ಭೂಕಂಪಕ್ಕೆ ತುತ್ತಾಗಿರುವ ಟರ್ಕಿ ಮತ್ತು ಸಿರಿಯಾದಲ್ಲಿರುವ ಕನ್ನಡಿಗರ ಮಾಹಿತಗಾಗಿ ಶೀಘ್ರದಲ್ಲೇ ವಿಶೇಷ ಸಹಾಯವಾಣಿ ಆರಂಭಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು, ಫೆಬ್ರವರಿ. 07: ಪ್ರಬಲ ಭೂಕಂಪಕ್ಕೆ ತುತ್ತಾಗಿರುವ ಟರ್ಕಿ ಮತ್ತು ಸಿರಿಯಾದಲ್ಲಿರುವ ರಾಜ್ಯದ ಜನರಿಗಾಗಿ ವಿಶೇಷ ಸಹಾಯವಾಣಿಯನ್ನು ಶೀಘ್ರದಲ್ಲೇ ಆರಂಭಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸೋಮವಾರ ತೀವ್ರ ಭೂಕಂಪಕ್ಕೆ ಒಳಗಾಗಿರುವ ಟರ್ಕಿ ಮತ್ತು ಸಿರಿಯಾದಲ್ಲಿ ಈವರೆಗೂ ಐದು ಸಾವಿರಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ. ಅಲ್ಲಿರುವ ರಾಜ್ಯದ ಜನರ ಬಗ್ಗೆ ಆತಂಕ ಹೆಚ್ಚಾಗಿದ್ದು, ಈ ಹಿನ್ನೆಲೆ ಕನ್ನಡಿಗರ ಮಾಹಿತಿಯನ್ನು ಪಡೆಯಲು ಸರ್ಕಾರ ಈಗಾಗಲೇ ಭಾರತೀಯ ರಾಯಭಾರಿ ಕಚೇರಿಗಳೊಂದಿಗೆ ಸಂಪರ್ಕದಲ್ಲಿದೆ. ಆದಷ್ಟು ಬೇಗ ಸಹಾಯವಾಣಿ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.
"ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದ ಕುರಿತು ರಾಜ್ಯಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆ ಸಂಪರ್ಕಲ್ಲಿದೆ. ಅಲ್ಲಿರುವ ಭಾರತೀಯರ ಹಾಗೂ ಕನ್ನಡಿಗರ ಕುರಿತು ಮಾಹಿತಿಗಾಗಿ ವಿಶೇಷ ಸಹಾಯ ವಾಣಿಯಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿದೆ.
— CM of Karnataka (@CMofKarnataka) February 7, 2023
1/2 pic.twitter.com/C1l92Or2nC
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದ ಕುರಿತು ರಾಜ್ಯಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆ ಸಂಪರ್ಕಲ್ಲಿದೆ. ಅಲ್ಲಿರುವ ಭಾರತೀಯರ ಹಾಗೂ ಕನ್ನಡಿಗರ ಕುರಿತು ಮಾಹಿತಿಗಾಗಿ ವಿಶೇಷ ಸಹಾಯ ವಾಣಿಯಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿದೆ" ಎಂದಿದ್ದಾರೆ.

ಮತ್ತೊಂದು ಟ್ವೀಟ್ನಲ್ಲಿ "ಅಲ್ಲಿರುವ ಕನ್ನಡಿಗರಿಗೆ ನೆರವಾಗಲು, ಅವರ ಕುರಿತು ಮಾಹಿತಿಯನ್ನು ಸರ್ಕಾರದ ಜೊತೆ ಹಂಚಿಕೊಳ್ಳುವಂತೆ ಅವರ ಸಂಬಂಧಿಕರ ಬಳಿ ಮನವಿ ಮಾಡುತ್ತೇನೆ" ಎಂದು ಮಾಹಿತಿ ಹಂಚಿಕೊಳ್ಳಲು ಮನವಿ ಮಾಡಿದ್ದಾರೆ.
ಟರ್ಕಿಯಲ್ಲಿ ಸೋಮವಾರ 7.8 ರ ತೀವ್ರತೆಯ ಭೂಕಂಪವು 4,000 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿತ್ತು. ಇದಾದ ನಂತರ 7.6 ರ ತೀವ್ರತೆಯ ಮತ್ತೊಂದು ಪ್ರಬಲ ಭೂಕಂಪ ಸಂಭವಿಸಿದ್ದು ಸಾವು ನೋವುಗಳು ಅಧಿಕವಾಗಿವೆ. ಬೆಳಗಿನ ಜಾವ ಟರ್ಕಿ ಮತ್ತು ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು 1300 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿವೆ.
ಟರ್ಕಿ ಮತ್ತು ನೆರೆಯ ಸಿರಿಯಾದಲ್ಲಿ ಸಾವಿರಾರು ಕಟ್ಟಡಗಳನ್ನು ನೆಲಸಮಗೊಂಡಿವೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಭಾರತ ಸೇರಿದಂತೆ ಅನೇಕ ದೇಶಗಳು ಸಹಾಯಹಸ್ತ ಚಾಚಿವೆ. ಭಾರತದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಂಡ ಮಂಗಳವಾರ ಟರ್ಕಿಗೆ ತೆರಳಿ ಅಲ್ಲಿನ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications