ದಕ್ಷ ಐಎಎಸ್ ಅಧಿಕಾರಿಯ ಎತ್ತಂಗಡಿ ಮಾಡಿದ ಸರಕಾರ
ಬೆಂಗಳೂರು, ಅ 8: ಸರಕಾರ ನೀಡುವ ಸವಲತ್ತುಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದ ನ್ಯಾಯಬೆಲೆ ಅಂಗಡಿಯವರಿಗೆ ಸಿಂಹಸ್ವಪ್ನವಾಗಿದ್ದ, ಆಹಾರ ಮತ್ತು ನಾಗರೀಕ ಇಲಾಖೆಯ ಆಯುಕ್ತ ಹರ್ಷ ಗುಪ್ತಾ ಅವರನ್ನು ಸಿದ್ದರಾಮಯ್ಯ ಸರಕಾರ ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಪ್ರಮುಖವಾಗಿ ಅಕ್ರಮ ಪಡಿತರ ಚೀಟಿದಾರರ ಮತ್ತು ನ್ಯಾಯಬೆಲೆ ಅಂಗಡಿಯ ಮಾಲೀಕರ ಮೇಲೆ ನಿರ್ದಾಕ್ಷ್ಯಿಣ್ಯ ಕ್ರಮಕ್ಕೆ ಮುಂದಾಗಿದ್ದ ಹರ್ಷ ಗುಪ್ತ ಅವರಿಗೆ ಮುಂದಿನ ಜವಾಬ್ದಾರಿ ಯಾವ ಇಲಾಖೆ ಎನ್ನುವುದನ್ನು ಸರಕಾರ ಇನ್ನೂ ಪ್ರಕಟಿಸಲಿಲ್ಲ. ಹರ್ಷ ಗುಪ್ತಾ ಜಾಗಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯಾಗಿದ್ದ ಡಾ.ವಿಶಾಲ್ ಅವರನ್ನು ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆಯ 'ಅನ್ನಭಾಗ್ಯ' ಯೋಜನೆ ಜಾರಿಗೆ ಬಂದಾಗ, ಹರ್ಷ ಗುಪ್ತಾ ಅವರನ್ನು ಆಹಾರ ಮತ್ತು ನಾಗರೀಕ ಇಲಾಖೆಗೆ ಆಯುಕ್ತರನ್ನಾಗಿ ನೇಮಕ ಮಾಡಲಾಗಿತ್ತು. ದಕ್ಷ ಅಧಿಕಾರಿಯೆಂದೇ ಹೆಸರಾಗಿರುವ ಹರ್ಷ ಗುಪ್ತಾ ಅವರನ್ನು ಆ ಸ್ಥಾನಕ್ಕೆ ನೇಮಿಸುವಂತೆ ಖುದ್ದು ಮುಖ್ಯಮಂತ್ರಿಗಳೇ ಆಸಕ್ತಿ ವಹಿಸಿ, ಆದೇಶಿಸಿದ್ದರು.
ಹರ್ಷ ಗುಪ್ತಾ ಜೊತೆ ಇತರ ಐದು ಅಧಿಕಾರಿಗಳನ್ನು ಈ ಕೆಳಗಂಡಂತೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
1. ಡಾ. ಎಂ ವಿ ವೆಂಕಟೇಶ್ - ಜಿಲ್ಲಾಧಿಕಾರಿ (ಚಿಕ್ಕಬಳ್ಳಾಪುರ)
2. ಗೌರವ್ ಗುಪ್ತಾ - ಆಯುಕ್ತರು (ಕೈಗಾರಿಕಾಭಿವೃದ್ದಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಬೆಂಗಳೂರು)
3. ರಾಜೇಂದ್ರ ಕುಮಾರ್ ಕಟಾರಿಯಾ - ವ್ಯವಸ್ಥಾಪಕ ನಿರ್ದೇಶಕ ( ರಾಜ್ಯ ಗಣಿ, ಪರಿಸರ ಪುನರ್ನಿಮಾಣ)
4. ಎಂ ಮಹೇಶ್ವರ್ ರಾವ್ - ವ್ಯವಸ್ಥಾಪಕ ನಿರ್ದೇಶಕ (ಕರ್ನಾಟಕ ವಿದ್ಯುತ್ ನಿಗಮ)
5. ರಿತೇಶ್ ಕುಮಾರ್ ಸಿಂಗ್ - ಪ್ರಾದೇಶಿಕ ಆಯುಕ್ತ (ಸಾರಿಗೆ, ಪ್ರಕೃತಿ ವಿಕೋಪ ಬೆಂಗಳೂರು ವಿಭಾಗ)
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ












Click it and Unblock the Notifications