ಯೂನಿಕೋಡ್ ಶಿಷ್ಟತೆ ಫಲ, ಕನ್ನಡ ಎಸ್ಸೆಂಎಸ್ ಭಾಗ್ಯ
ಬೆಂಗಳೂರು, ಜ.22: ಯೂನಿಕೋಡ್ ಶಿಷ್ಟತೆ ಬೆಂಬಲಿಸುವ ತಂತ್ರಾಂಶಗಳು ಕನ್ನಡದಲ್ಲೂ ಲಭ್ಯವಾಗಿರುವುದರಿಂದ ಇನ್ಮುಂದೆ ಮೊಬೈಲ್ ಫೋನ್ ಬಳಕೆದಾರರು ಯಾವುದೇ ತೊಂದರೆ ಇಲ್ಲದೆ ಕನ್ನಡದಲ್ಲೇ ಎಸ್ ಎಂಎಸ್ ಸಂದೇಶ ಕಳಿಸಬಹುದಾಗಿದೆ. ದಶಕಗಳ ಕಾಲದ ಬೇಡಿಕೆಯನ್ನು ಸರ್ಕಾರ ಕೊನೆಗೂ ಈಡೇರಿಸಿದ್ದು, ಯೂನಿಕೋಡ್ ಶಿಷ್ಟತೆ ಅಳವಡಿಸಿಕೊಂಡಿರುವ ಕನ್ನಡ ತಂತ್ರಾಂಶಗಳು ಬಿಡುಗಡೆ ಭಾಗ್ಯ ಕಾಣುತ್ತಿದೆ.
ಕನ್ನಡ ಭಾಷೆ, ಉಳಿಕೆಗೆ ಕಂಪ್ಯೂಟರ್ ನಲ್ಲಿ ಕನ್ನಡ ಬಳಕೆ ಹೆಚ್ಚಾಗಬೇಕು ಎಂದು ದನಿ ಎತ್ತಿದ್ದ ದಿವಂಗತ ಪೂರ್ಣ ಚಂದ್ರ ತೇಜಸ್ವಿ ಅವರ ಆಶಯದಂತೆ ಇಂದು ಅನೇಕ ಕನ್ನಡ ತಂತ್ರಾಂಶಗಳು ಸಾರ್ವಜನಿಕರಿಗೆ ಲಭ್ಯವಾಗುತ್ತಿದೆ.[ಕುವೆಂಪು ತಂತ್ರಾಂಶ ಆವೃತ್ತಿ 2.0]
* 12 ಹೊಸ ಫಾಂಟ್ ಗಳು
* ಹೊಸ ಕೀಲಿ ಮಣೆ ಶೈಲಿ
* ಹಲವಾರು ಪರಿವರ್ತನಾ ಸಾಫ್ಟ್ ವೇರ್
* ಮೊಬೈಲ್ ನಿಂದ ಮೊಬೈಲ್ ಗೆ ಕನ್ನಡದಲ್ಲೇ ಸಂದೇಶ ಕಳಿಸಲು ತಂತ್ರಾಂಶ
* ಪರಿವರ್ತನಾ ತಂತ್ರಾಂಶ ಮೂಲಕ ಈ ಹಿಂದಿನ ಕಡತಗಳನ್ನು(ಶ್ರೀಲಿಪಿ, ನುಡಿ, ಬರಹ..ಇತ್ಯಾದಿ ಲಿಪಿ ಬಳಸಿರುವ ಕಡತ)ಯೂನಿಕೋಡ್ ಗೆ ಸುಲಭವಾಗಿ ಪರಿವರ್ತಿಸಬಹುದಾಗಿದೆ.
* ಅಂಧ ವಿದ್ಯಾರ್ಥಿಗಳ ನೆರವಿಗಾಗಿ ಬ್ರೈಲ್ ಲಿಪಿ
* ಕನ್ನಡದ್ದೇ ಕೀ ಬೋರ್ಡ್ [ಡೌನ್ ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ]

ಪೂರ್ಣ ಚಂದ್ರ ತೇಜಸ್ವಿ ಅವರ ಆಶಯದಂತೆ ಈ ಹಿಂದೆ ಹಂಪಿ ವಿಶ್ವವಿದ್ಯಾಲಯಕ್ಕೆ ಕುವೆಂಪು ತಂತ್ರಾಂಶ ಹಾಗೂ ಲಿಪಿಗಳನ್ನು ರೂಪಿಸಿಕೊಟ್ಟಿದ್ದ ಹಾಸನದ ಮಾರುತಿ ಸಾಫ್ಟ್ ವೇರ್ ಇನ್ಫಾರ್ಮೇಷನ್ ಸಿಸ್ಟಮ್ ಸಂಸ್ಥೆಯೇ ಈ ಮೇಲ್ಕಂಡ ತಂತ್ರಾಂಶಗಳನ್ನು ಅಭಿವೃದ್ಧಿ ಪಡಿಸಿದೆ. 12 ಫಾಂಟ್ ಗಳಿಗೆ 8 ಮಂದಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹೆಸರು ಹಾಗೂ ಡಿವಿ ಗುಂಡಪ್ಪ, ಕೆಎಸ್ ನರಸಿಂಹ ಸ್ವಾಮಿ ಅವರ ಹೆಸರನ್ನಿಡಲಾಗಿದೆ.
ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕನ್ನಡ ಬಳಕೆ ಮತ್ತು ಅಭಿವೃದ್ಧಿ ಕುರಿತಂತೆ ವರದಿ ನೀಡಲು 2008ರಲ್ಲಿ ಮಾಜಿ ಕುಲಪತಿ ಡಾ. ಚಿದಾನಂದ ಗೌಡ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಮಿತಿ 2011ರಲ್ಲಿ ತನ್ನ ವರದಿಯನ್ನು ನೀಡಿತ್ತು. 2011ರಲ್ಲಿ ಟೆಂಡರ್ ಕರೆದು 2012/13ರಲ್ಲಿ ತಂತ್ರಾಂಶ ತಯಾರಾದ ತಂತ್ರಾಂಶಗಳು 2014ರಲ್ಲಿ ಬಿಡುಗಡೆಗೊಳ್ಳುತ್ತಿದೆ ಎಂದು ಸಮಿತಿಯ ಸದಸ್ಯರಲ್ಲಿ ಒಬ್ಬರಾದ ತಂತ್ರಜ್ಞ, ಖ್ಯಾತ ಅಂಕಣಗಾರ ಯು.ಬಿ ಪವನಜ ಅವರು ಹೇಳಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications