Property: ಇಸಿ, ಆಸ್ತಿ ನೋಂದಣಿ ಸಮಸ್ಯೆಗೆ ಸರ್ಕಾರದಿಂದ ಅಪ್ಡೇಟ್
Property: ರಾಜ್ಯದಲ್ಲಿ ಆಸ್ತಿಗಳ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರವು ಹಲವು ಸುಧಾರಣೆಯ ಕ್ರಮಗಳನ್ನು ಜಾರಿ ಮಾಡುತ್ತಿದೆ. ಆದರೆ, ಅದರ ಅನುಷ್ಠಾನದಲ್ಲಿ ಭಾರೀ ಎಡವಟ್ಟುಗಳು ಆಗುತ್ತಿವೆ. ಋುಣಮುಕ್ತ ಪ್ರಮಾಣಪತ್ರ (ಇಸಿ) ಪಡೆಯಲು, ಆಸ್ತಿ ನೋಂದಣಿ ಹಾಗೂ ಇ - ಖಾತಾ ವಿಚಾರದಲ್ಲಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ಈ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಆಗದೆ ಆಸ್ತಿದಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಸಂಬಂಧ ಕೊನೆಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಇದಕ್ಕೆ ಪ್ರತಿಕ್ರಿಯಿಸಿದ್ದಾರೆ. ಕಂದಾಯ ವಿಭಾಗ ಹಾಗೂ ನೋಂದಣಿ ಮತ್ತು ಮುದ್ರಾಂಕದ ಬಗ್ಗೆ ಮಾತನಾಡಿದ್ದಾರೆ.
ಕರ್ನಾಟಕದಲ್ಲಿ ಆಸ್ತಿದಾರರು ಹಾಗೂ ಆಸ್ತಿ ಮಾರಾಟ ಮತ್ತು ಖರೀದಿ ಮಾಡಬೇಕು ಎನ್ನುವವರು ಕೆಲವೊಂದು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ಋುಣಮುಕ್ತ ಪ್ರಮಾಣಪತ್ರ (ಇಸಿ) ಪಡೆಯುವುದು ಹಾಗೂ ಆಸ್ತಿ ನೋಂದಣಿ ಮಾಡುವುದು.
ಸರ್ಕಾರ ಅಭಿವೃದ್ಧಿಪಡಿಸಿರುವ ವೆಬ್ಸೈಟ್ಗಳಲ್ಲಿನ ತಾಂತ್ರಿಕ ಸಮಸ್ಯೆ ಹಾಗೂ ಸರ್ವರ್ಡೌನ್ ಸಮಸ್ಯೆಗಳು ಸಾರ್ವಜನಿಕರನ್ನು ಇನ್ನಿಲ್ಲದಂತೆ ಹೈರಾಣಾಗಿಸಿದೆ. ಜನ ಇಸಿ ಹಾಗೂ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳಲು ಪರದಾಡುತ್ತಿದ್ದಾರೆ. ಇದನ್ನು ಪರಿಹರಿಸಲು ಕಂದಾಯ ಇಲಾಖೆ ಮುಂದಾಗಿರುವುದಾಗಿ ಹಾಗೂ ಇದಕ್ಕೆ ಶೀಘ್ರ ಸೂಕ್ತ ಪರಿಹಾರ ಕಂಡುಕೊಳ್ಳುವುದಾಗಿಯೂ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ಐಟಿ ರಾಜಧಾನಿಯಲ್ಲೇ ಸಮಸ್ಯೆ: ಬೆಂಗಳೂರು ಐಟಿ ರಾಜಧಾನಿ ಹಾಗೂ ಸಿಲಿಕಾನ್ ಸಿಟಿ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದರೆ, ಬೆಂಗಳೂರಿನಲ್ಲಿಯೇ ಈ ರೀತಿಯ ಸಮಸ್ಯೆಗಳು ಆದರೆ ಹೇಗೆ ಎಂದು ಸಾರ್ವಜನಿಕರು ಕೃಷ್ಣ ಬೈರೇಗೌಡ ಅವರನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡಿದ್ದಾರೆ. ತಾಂತ್ರಿಕವಾಗಿ ಸಾಕಷ್ಟು ಮುಂದುವರಿದಿರುವ ಬೆಂಗಳೂರಿನಲ್ಲೇ ಈ ರೀತಿಯ ಸಮಸ್ಯೆ ಎದುರಾದರೆ ಹೇಗೆ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ. ಇ - ಖಾತಾ ಕಡ್ಡಾಯ ಮಾಡಿರುವುದರಿಂದಲೂ ಸಮಸ್ಯೆ ಆಗಿದೆ ಎಂದು ಕೆಲವರು ಹೇಳಿದ್ದಾರೆ.
ಸಚಿವ ಕೃಷ್ಣ ಬೈರೇಗೌಡ ಹೇಳಿದ್ದೇನು ?
ಕರ್ನಾಟಕದಲ್ಲಿ ಋುಣಮುಕ್ತ ಪ್ರಮಾಣಪತ್ರ (ಇಸಿ) ಪಡೆಯಲು ಹಾಗೂ ಆಸ್ತಿ ನೋಂದಣಿ ಪ್ರಕ್ರಿಯೆಗಳಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳಿಗೆ ನಾವು ವಿಷಾದಿಸುತ್ತೇವೆ. ನಮ್ಮ ಇ - ಆಡಳಿತ ವಿಭಾಗವು ಸಮಸ್ಯೆಗಳನ್ನು ಪರಿಹರಿಸಲು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಐಟಿ ವ್ಯವಸ್ಥೆಯ ತಾಂತ್ರಿಕ ಸಮಸ್ಯೆಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ನಾವು ಪ್ರಯತ್ನಿಸುತ್ತಿದ್ದೇವೆ. ಈ ಸವಾಲಿನಲ್ಲಿ ಜಯಿಸಲು ಹೆಚ್ಚು ಸಮಯ ಕೆಲಸ ಮಾಡುತ್ತಿದ್ದೇವೆ ಎಂದೂ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.
ರಾಜ್ಯ ಸರ್ಕಾರವು ಆಸ್ತಿ ನೋಂದಣಿ ಹಾಗೂ ಇ - ಖಾತಾಗೆ ಸಂಬಂಧಿಸಿದಂತೆ ಹಲವು ಸುಧಾರಣಾ ಕ್ರಮಗಳನ್ನು ಜಾರಿ ಮಾಡುತ್ತಿದೆ. ಆದರೆ ಅದರ ಅನುಷ್ಠಾನದಲ್ಲಿ ಹಲವು ಗೊಂದಲಗಳು ಮುಂದುವರಿದಿವೆ. ಮೊದಲನೆಯದಾಗಿ ಬೆಂಗಳೂರಿನಲ್ಲಿ ಇ - ಖಾತಾ ಜಾರಿ ಮಾಡಲಾಯಿತು.
ಬೆಂಗಳೂರಿನ ಇ - ಖಾತಾ ಮಾದರಿಯನ್ನು ರಾಜ್ಯದಾದ್ಯಂತ ವಿಸ್ತರಿಸಲಾಗುತ್ತಿದೆ. ಆದರೆ, ಈ ರೀತಿ ವಿಸ್ತರಿಸುವಾಗ ಪ್ರಾಯೋಗಿಕವಾಗಿ ಇ ಖಾತಾ ಜಾರಿ ಮಾಡಿದ ಬೆಂಗಳೂರಿನಲ್ಲಿಯೇ ಇ - ಖಾತಾ ನೀಡುವುದು ಇನ್ನೂ ಮುಗಿದಿಲ್ಲ.
ಕಾವೇರಿ ತಂತ್ರಾಂಶದಲ್ಲಿ ಸಮಸ್ಯೆ: ಕಾವೇರಿ ತಂತ್ರಾಂಶದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು. ಆಸ್ತಿದಾರರು ಆಸ್ತಿ ನೋಂದಣಿ ಮಾಡುವುದಕ್ಕೆ ಪರದಾಡುವ ಪರಿಸ್ಥಿತಿ ಇದೆ. ಈ ಸಮಸ್ಯೆಯನ್ನು ಶೀಘ್ರ ಪರಿಹರಿಸುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದರೆ ಲಕ್ಷಾಂತರ ಜನ ಇದರಿಂದ ಸಮಸ್ಯೆ ಎದುರಿಸುತ್ತಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications