'ಅಪ್ಪು' ಅಭಿಮಾನಿಗಳಿಗೆ ಸಿಹಿ ಸುದ್ದಿ: ಹೃದಯಾಘಾತ ತಡೆಗೆ ರಾಜ್ಯಾದ್ಯಂತ 'ಹೃದಯಜ್ಯೋತಿ' ಯೋಜನೆ ಜಾರಿಗೆ ಸಜ್ಜು
ಬೆಂಗಳೂರು, ಅಕ್ಟೋಬರ್ 30: ಕರ್ನಾಟಕದಲ್ಲಿ ಕೊರೊನಾ ನಂತರ ಹೃದಯಘಾತದ ಪ್ರಕರಣಗಳು ಹೆಚ್ಚು ವರದಿಯಾಗುತ್ತಿವೆ. ಅದರಲ್ಲೂ 40 ವರ್ಷ ವಯಸ್ಸಿನೊಳಗಿನ ಹದಿ ಹರೆಯದವರಲ್ಲಿಯೂ ಈ ಅನಾರೋಗ್ಯ ಕಂಡು ಬರುತ್ತಿದೆ. ಈ ನಿಮಿತ್ತ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಜನರ ಜೀವ ಉಳಿಸಲು 'ಹೃದಯಜ್ಯೋತಿ' ಯೋಜನೆ ಜಾರಿಗೊಳಿಸಲು ಸಜ್ಜಾಗಿದೆ. ಈ ಮೂಲಕ ದಿ. ಪುನೀತ್ ರಾಜಕುಮಾರ್ ಅವರ ಎರಡನೇ ಪುಣ್ಯ ಸ್ಮರಣೆ ಬೆನ್ನಲ್ಲೆ ಅವರ ಅಭಿಮಾನಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಈ ಸಂಬಂಧ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಅಧಿಕೃತಾಗಿ ಮಾಹಿತಿ ನೀಡಿದೆ.
ಕೋವಿಡ್ ನಂತರ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿದ್ದು, ಇದೊಂದು ಪಿಡುಗಿನಂತೆ ಕಾಡುತ್ತಿದೆ. ನಮ್ಮ ಸರ್ಕಾರ ಮಹತ್ವದ 'ಹೃದಯಜ್ಯೋತಿ' ಯೋಜನೆ ಜಾರಿಗೊಳಿಸಲಿದೆ.

ಮೊದಲ ಹಂತದಲ್ಲಿ ರಾಜ್ಯಾದ್ಯಂತ ಜಿಲ್ಲೆ ಮತ್ತು ತಾಲೂಕು ಆಸ್ಪತ್ರೆಗಳು ಸೇರಿದಂತೆ ಒಟ್ಟು 85 ಆಸ್ಪತ್ರೆಗಳಲ್ಲಿ ಈ 'ಹೃದಯಜ್ಯೋತಿ' ಜಾರಿ ಆಗಲಿದೆ. ಇಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಎಲ್ಲಾ ಬಗೆಯ ಉಚಿತ ಚಿಕಿತ್ಸೆ ನೀಡುವ ಮೂಲಕ ಹೃದಯಾಘಾತದಿಂದ ನಮ್ಮ ಜನರನ್ನು ರಕ್ಷಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಅಪ್ಪು ಸ್ಮರಣಾರ್ಥ ಯೋಜನೆ ಜಾರಿ
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಈ ಯೋಜನೆಯನ್ನು ಶೀಘ್ರದಲ್ಲಿ ಜಾರಿಗೊಳಿಸಲಿದೆ. ಯೋಜನೆಯಲ್ಲಿ 50 ಖಾಸಗಿ ಆಸ್ಪತ್ರೆಗಳು ಸೇರಿವೆ. ಈ ಯೋಜನೆಯನ್ನು ಸ್ಯಾಂಡಲ್ವುಡ್ ಪವರ್ ಸ್ಟಾರ್ ದಿ.ಪುನೀತ್ ರಾಜಕುಮಾರ್ ಸ್ಮರಣಾರ್ಥ ಜಾರಿ ಮಾಡಲಾಗುತ್ತಿದೆ. ಹೀಗಾಗಿ ಯೋಜನೆಗೆ ಅವರ ಹೆಸರನ್ನೇ ಸರ್ಕಾರ ಇಡಲ ನಿರ್ಧರಿಸಿದೆ. ಇನ್ಮುಂದೆ 'ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ' ಸೇವೆ ರಾಜ್ಯದ ಆಸ್ಪತ್ರೆಗಳಲ್ಲಿ ಸಿಗಲಿದೆ.
ಸದರಿ ಉದ್ದೇಶಿತ ಯೋಜನೆಯಲ್ಲಿ ಒಟ್ಟು 16 ಜಿಲ್ಲೆಗಳ ಆಸ್ಪತ್ರೆಗಳನ್ನು ಸರ್ಕಾರ ಗುರುತಿಸಿದೆ. ಯಾರಿಗಾದರೂ ಹೃದಯ ಸಂಬಂಧಿ ಖಾಯಿಲೆಗಳ ಚಿಕಿತ್ಸೆಗೆ ದೊಡ್ಡ ಆಸ್ಪತ್ರೆಗಳಿಗೆ ಭೇಟಿ ನೀಡಿದರೆ, ರೋಗಿಗೆ ಇಸಿಜಿ ಮಾಡಲಾಗುತ್ತದೆ. ರೋಗಿಯ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೆ, ವಿಶೇಷ ಇಂಜೆಕ್ಷನ್ (ಟೆನಕ್ಟ್ ಪ್ಲಸ್) ನೀಡಲಾಗುತ್ತದೆ. ಇದೆಕ್ಕೆಲ್ಲ ಸುಮಾರು 40 ಸಾವಿರ ರೂಪಾಯಿ ಖರ್ಚಾಗುತ್ತದೆ.

ರೋಗಿಗಳಿಗೆ ಉಚಿತ ಚಿಕಿತ್ಸೆ
ಸಾಲದೆಂಬಂತೆ ಇನ್ನಿತರ ಚಿಕಿತ್ಸೆಗಳನ್ನು ರೋಗಿಗೆ ನೀಡಬೇಕಾಗುತ್ತದೆ. ಆದರೆ ಈ ಯೋಜನೆಯಡಿ ನೀವಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಚಿಕಿತ್ಸೆ ಸಂಪೂರ್ಣವಾಗಿ ಉಚಿತವಾಗಿ ನೀಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಇನ್ನೂ ಯೋಜನೆ ಜಾರಿಗೆ ಗುರುತಿಸಲಾಗಿರುವ ಆಸ್ಪತ್ರೆಗಳಲ್ಲಿ ಎಐ ಆಧಾರಿತ ಚಿಕಿತ್ಸೆಯನ್ನು ಒದಗಿಸಲಾಗುತ್ತದೆ. ಈ ಸಂಬಂಧವೇ ನುರಿತ ಸಂಸ್ಥೆಯು ಕೈಜೋಡಿಸಿದೆ. ರೋಗಿಗೆ ಹೆಚ್ಚುವರಿ ಚಿಕಿತ್ಸೆ ಒದಗಿಸಲು ರಾಜ್ಯದ ಏಳು ಕಡೆ ಹಬ್ಸ್ ಎನ್ನುವ ಮಾದರಿ ಮಾಡಲಾಗುತ್ತಿದೆ.
ಈ ವ್ಯವಸ್ಥೆ ಅಡಿ ಬಡ ರೋಗಿಗಳಿಗೆ ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಹಾಗೂ ಬಿಪಿಎಲ್ ಪಡಿತರಿಗೆ, ಆಯುಷ್ಮಾನ್ ಯೋಜನೆ ಫಲಾನುಭವಿಗಳಿಗೆ ಯೋಜನೆಯಡಿ ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸರ್ಕಾರ ಪ್ಲಾನ್ ಮಾಡಿದೆ. ಆದಷ್ಟು ಶೀಘ್ರವೇ ಮೊದಲ ಹಂತದಲ್ಲಿ ಈ ಯೋಜನೆ ರಾಜ್ಯಾದ್ಯಂತ ಜಾರಿ ಆಗಲಿದೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್











Click it and Unblock the Notifications