ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಷಾಢ ಮಾಸ ಕಳೆಯುವವರೆಗೂ ಸಂಪುಟ ವಿಸ್ತರಣೆ ಇಲ್ಲ

|
Google Oneindia Kannada News

Recommended Video

ಆಷಾಡ ಮಾಸ ಕಳೆಯೋವರೆಗೂ ಸಚಿವ ಸಂಪುಟ ವಿಸ್ತರಣೆ ಇಲ್ಲ | Oneindia Kannada

ಬೆಂಗಳೂರು, ಜುಲೈ 9: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಂಪುಟ ಸೇರುವ ಆಕಾಂಕ್ಷಿಗಳ ಆಸೆಗೆ ತಣ್ಣೀರೆರಚಿದಂತಾಗಿದೆ.

ಆಷಾಢ ಮಾಸ ಮುಗಿಯುವವರೆಗೂ ಸಂಪುಟ ವಿಸ್ತರಣೆ ನಡೆಸುವುದಿಲ್ಲ ಎಂದು ಕಾಂಗ್ರೆಸ್ ತೀರ್ಮಾನಿಸಿದೆ.

ಆಷಾಢ ಕಳೆಯುವವರೆಗೂ ಸಂಪುಟ ವಿಸ್ತರಣೆ ಮಾಡುವುದು ಬೇಡ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಪಕ್ಷದ ಹೈಕಮಾಂಡ್‌ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ಬಜೆಟ್ ಬಳಿಕ ಸಂಪುಟ ವಿಸ್ತರಣೆ, ಸಂಪುಟ ಸೇರುವ ಕಾಂಗ್ರೆಸ್‌ ಶಾಸಕರ ಪಟ್ಟಿ!ಬಜೆಟ್ ಬಳಿಕ ಸಂಪುಟ ವಿಸ್ತರಣೆ, ಸಂಪುಟ ಸೇರುವ ಕಾಂಗ್ರೆಸ್‌ ಶಾಸಕರ ಪಟ್ಟಿ!

ಜುಲೈ 14ರಿಂದ ಆಗಸ್ಟ್ 11ರವರೆಗೆ ಆಷಾಢವಿದ್ದು, ಅಲ್ಲಿಯವರೆಗೂ ಸಂಪುಟ ವಿಸ್ತರಣೆ ಸಾಧ್ಯವಿಲ್ಲ. ಒಂದು ವೇಳೆ ನಾವು ಒಪ್ಪಿಕೊಂಡರೂ ಜೆಡಿಎಸ್ ವರಿಷ್ಠ ಎಚ್‌.ಡಿ. ದೇವೇಗೌಡ ಅವರು ಅದಕ್ಕೆ ಒಪ್ಪಿಗೆ ಸೂಚಿಸುವುದಿಲ್ಲ. ಅವರು ಇಂತಹ ವಿಚಾರಗಳಲ್ಲಿ ತುಂಬಾ ಕಟ್ಟುನಿಟ್ಟು ಎಂದು ಪರಮೇಶ್ವರ್ ಅವರು ಹೈಕಮಾಂಡ್‌ಗೆ ವಿವರಿಸಿದ್ದಾರೆ.

government will not expand cabinet till ashada

ಈ ಕಾರಣದಿಂದಾಗಿ ಸಂಪುಟ ವಿಸ್ತರಣೆ ಚಿಂತನೆಯನ್ನು ಸದ್ಯಕ್ಕೆ ಕೈಬಿಡಲಾಗಿದೆ. ಇದು ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಬೇಸರ ಮೂಡಿಸಿದೆ.

ಮೊದಲ ಸಂಪುಟ ವಿಸ್ತರಣೆ ವೇಳೆ ತಮಗೆ ಅವಕಾಶ ನೀಡದ ಕಾರಣ ಕಾಂಗ್ರೆಸ್‌ನ ಅನೇಕ ಹಿರಿಯ ಮುಖಂಡರು ಅಸಮಾಧಾನಗೊಂಡಿದ್ದರು.

ಸಚಿವ ಸ್ಥಾನ ಆಕಾಂಕ್ಷಿಗಳಿಂದ ಕೆ.ಸಿ.ವೇಣುಗೋಪಾಲ್‌ಗೆ ಪತ್ರಸಚಿವ ಸ್ಥಾನ ಆಕಾಂಕ್ಷಿಗಳಿಂದ ಕೆ.ಸಿ.ವೇಣುಗೋಪಾಲ್‌ಗೆ ಪತ್ರ

ಮುಂದಿನ ವಿಸ್ತರಣೆ ವೇಳೆ ಸಚಿವ ಸ್ಥಾನ ಕಲ್ಪಿಸೋಣ ಎಂದು ಕೆಲವು ಮುಖಂಡರಿಗೆ ಭರವಸೆ ನೀಡಿ ಸಮಾಧಾನಪಡಿಸಲಾಗಿತ್ತು. ಅಲ್ಲದೆ, ಬಜೆಟ್ ಮಂಡನೆಯಾದ ಬಳಿಕ ಕೂಡಲೇ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು.

ಆದರೆ, ಈಗ ಅದು ಮುಂದೆ ಹೋಗುತ್ತಿರುವುದು ಈ ಶಾಸಕರಲ್ಲಿ ಅತೃಪ್ತಿ ಹೆಚ್ಚಿಸಿದೆ ಎನ್ನಲಾಗಿದೆ.

English summary
State government decided to not to expand its cabinet till the ashada month is over.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X