ಮಠಗಳಿಗೆ ನಾಳೆಯಿಂದಲೇ ಅಕ್ಕಿ-ಗೋಧಿ ಸರಬರಾಜು: ಯಡಿಯೂರಪ್ಪ
ಬೆಂಗಳೂರು, ಫೆಬ್ರವರಿ 04: ಸಿದ್ದಗಂಗಾ ಮಠ ಸೇರಿ ರಾಜ್ಯದ 454 ವಿವಿಧ ಸಂಸ್ಥೆಗಳು ಮಠಗಳಿಗೆ ಅಕ್ಕಿ-ಗೋಧಿ ಸರಬರಾಜು ನಿಲ್ಲಿಸಿರುವ ಕ್ರಮ ಬಹಿರಂಗವಾಗುತ್ತಿದ್ದಂತೆ ಸಿಎಂ ಯಡಿಯೂರಪ್ಪ ಅವರು ಎಚ್ಚೆತ್ತುಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ಯಡಿಯೂರಪ್ಪ, 'ನಾಳೆಯಿಂದಲೇ ಮಠಗಳಿಗೆ ತಡೆಹಿಡಿಯಲಾಗಿದ್ದ ಅಕ್ಕಿ-ಗೋಧಿ ಸರಬರಾಜು ಮುಂದುವರೆಸಲಾಗುವುದು' ಎಂದಿದ್ದಾರೆ.
ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, 'ಎಷ್ಟೇ ಆರ್ಥಿಕವಾಗಿ ಭಾರವಾದರೂ ಸಹ ಮಠಗಳಿಗೆ ನೀಡಲಾಗುತ್ತಿದ್ದ ಅಕ್ಕಿ-ಗೋಧಿಯನ್ನು ಕಡಿತಗೊಳಿಸುವುದಿಲ್ಲ' ಎಂದು ಭರವಸೆ ನೀಡಿದರು.

'ಈ ಬಗ್ಗೆ ಸಚಿವ ಸಂಪುಟದಲ್ಲಿಯೂ ಚರ್ಚೆ ಮಾಡಲಾಗಿದೆ. ಬಿಪಿಎಲ್ ಗಳಿಗೆ ಅಕ್ಕಿ ಪ್ರಮಾಣ ಕಡಿಮೆ ಮಾಡಿರುವ ಬಗ್ಗೆ ಈಗ ಚರ್ಚೆ ಬೇಡ' ಎಂದೂ ಸಹ ಅವರು ಹೇಳಿದರು.
ಮಠಗಳಿಗೆ ತಡೆ ಹಿಡಿಯಲಾಗಿದ್ದ ಅಕ್ಕಿ-ಗೋಧಿ ಸರಬರಾಜು ಮಾಡಲಾಗುತ್ತಿದೆ. ಆದರೆ ವಿವಿಧ ಸೇವಾ ಸಂಘ-ಸಂಸ್ಥೆಗಳಿಗೆ ತಡೆ ಹಿಡಿಯಲಾಗಿದ್ದ ಧಾನ್ಯವನ್ನು ಸರಬರಾಜು ಮಾಡಲಾಗುತ್ತದೆಯೇ ಎಂಬ ಬಗ್ಗೆ ಸಿಎಂ ಮಾಹಿತಿ ನೀಡಿಲ್ಲ.
ಮಠಗಳು ಸೇರಿದಂತೆ ಅನಾಥಾಶ್ರಮ, ವೃದ್ಧಾಶ್ರಮ, ಬುದ್ದಿಮಾಂದ್ಯರ ಚಿಕಿತ್ಸಾ ಕೇಂದ್ರ, ಭಿಕ್ಷುಕರ ಪುನರ್ವಸತಿ ಕೇಂದ್ರ ಸೇರಿದಂತೆ ಹಲವು ಸೇವಾ ಸಂಘಗಳಿಗೂ ಅಕ್ಕಿ-ಗೋಧಿ ಸರಬರಾಜು ನಿಲ್ಲಿಸಲಾಗಿತ್ತು. ಮಠಗಳಿಗೆ ನಾಳೆಯಿಂದಲೇ ಸರಬರಾಜು ಪುನರ್ ಪ್ರಾರಂಭಿಸುವುದಾಗಿ ಸಿಎಂ ಹೇಳಿದ್ದಾರೆ. ಆದರೆ ಸಂಘ-ಸಂಸ್ಥೆಗಳ ಗತಿಯೇನು ಎಂಬುದು ಪ್ರಶ್ನೆಯಾಗಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications