ಪ್ರತಿಮೆ ನಿರ್ಮಾಣಕ್ಕೆ ಸರ್ಕಾರದ ಹಣ ಬಳಕೆಯಿಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು, ನವೆಂಬರ್ 15: ಮಂಡ್ಯ ಜಿಲ್ಲೆಯ ಕೃಷ್ಣ ರಾಜ ಸಾಗರ (ಕೆಆರ್ಎಸ್) ಜಲಾಶಯದ ಅಭಿವೃದ್ಧಿ ಯೋಜನೆಯ ಭಾಗವಾಗಿ ನಿರ್ಮಾಣ ಮಾಡಲಿರುವ ಕಾವೇರಿ ತಾಯಿಯ ಪ್ರತಿಮೆ ಗೋಪುರದಂತೆ ಇರಲಿದೆ ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕೆಆರ್ಎಸ್ನಲ್ಲಿ ಸರ್ಕಾರಕ್ಕೇ ಸೇರಿದ ಜಮೀನಿದೆ. ಅದರಲ್ಲಿ ಹೂಡಿಕೆ ಮಾಡಲು ಹೂಡಿಕೆದಾರರನ್ನು ಆಹ್ವಾನಿಸುತ್ತೇವೆ. ಅದರಲ್ಲಿ ಸರ್ಕಾರದ ಹಣವನ್ನು ಬಳಸಿಕೊಳ್ಳುವುದಿಲ್ಲ. ಸಂಪೂರ್ಣವಾಗಿ ಪ್ರತಿಮೆ ಎಂದು ಹೇಳಲು ಸಾಧ್ಯವಿಲ್ಲ. ಅದು ಗೋಪುರದಂತೆ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಜಲಾಶಯದ ಪಕ್ಕದಲ್ಲಿ ಹೊಸದೊಂದು ಕೆರೆಯನ್ನು ನಿರ್ಮಿಸಲಾಗುವುದು. ಅದರ ವಿನ್ಯಾಸ ಇನ್ನೂ ಮಾಡಬೇಕಿದೆ. ಮ್ಯೂಸಿಯಂ ಸ್ಥಾಪಿಸಿ ಅದರ ಮೇಲ್ಭಾಗದಲ್ಲಿ ಮತ್ತು ಗಾಜಿನ ಗೋಪುರಗಳ ನಡುವೆ ಪ್ರತಿಮೆಯ ಗೋಪುರವನ್ನು ಅಳವಡಿಸಲಾಗುವುದು.
DK Shivakumar said 'a new lake would be created next to reservoir on which structures will come up.The statue will be installed atop the museum complex and b/w the glass towers.The statute will be taller than the KSR reservoir. Except land, govt isn't making any investments'. 3/3 pic.twitter.com/4sJauvWe9c
— ANI (@ANI) 15 November 2018
ಈ ಪ್ರತಿಮೆ ಕೆಆರ್ಎಸ್ ಜಲಾಶಯಕ್ಕಿಂತಲೂ ಎತ್ತರ ಇರಲಿದೆ. ಭೂಮಿಯನ್ನು ಹೊರತುಪಡಿಸಿ ಬೇರೇನನ್ನೂ ಸರ್ಕಾರ ಹೂಡಿಕೆ ಮಾಡುವುದಿಲ್ಲ ಎಂದು ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದರು.
ಈ ಪ್ರದೇಶದಲ್ಲಿ ಒಂದು ಒಳಾಂಗಣ ಕ್ರೀಡಾಂಗಣ, ಬ್ಯಾಂಡ್ಸ್ಟ್ಯಾಂಡ್, ಐತಿಹಾಸಿಕ ಸ್ಥಳಗಳ ನಕಲು ಸೃಷ್ಟಿ ಇರಲಿವೆ. ಒಟ್ಟಾರೆ ಯೋಜನೆಯ ವೆಚ್ಚ ಸುಮಾರು 1200 ಕೋಟಿ ರೂ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications