ರಾಘವೇಶ್ವರ ಶ್ರೀಗಳ ಕೇಸ್ ಬಗ್ಗೆ ಕೆಲವು ಅನುಮಾನಗಳು, ಜಿಜ್ಞಾಸೆಗಳು
ರಾಮಚಂದ್ರಾಪುರ ಮಠದ ಪೀಠಾಧಿಪತಿ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರ ಚಾರಿತ್ರ್ಯಹರಣ ಮಾಡುವ ಉದ್ದೇಶದಿಂದ ಹೆಣೆದಿದ್ದ ನಕಲಿ ಸಿಡಿ ಪ್ರಕರಣಕ್ಕೆ ಏಕಾಏಕಿ ತೆರೆಬಿದ್ದಿದೆ.
ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆಯ ಕೊನೆಯ ಹಂತದಲ್ಲಿದ್ದು ಆರೋಪಿಗಳಿಗೆ ಶಿಕ್ಷೆಯಾಗುವ ಸಮಯ ಸನ್ನಿಹಿತವಾಗುವ ಹಂತದಲ್ಲಿ ಸರಕಾರ ಕೇಸನ್ನೇ ವಾಪಸ್ ಪಡೆಯಲು ಆತುರದ ನಿರ್ಧಾರ ತೆಗೆದುಕೊಂಡಿರುವುದು ತೀವ್ರ ವಿವಾದವನ್ನು ಸೃಷ್ಟಿಸಿದೆ. ಮಾತ್ರವಲ್ಲ, ಈ ನಿರ್ಧಾರದ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ ಎಂಬ ಗುಮಾನಿಗೂ ಪುಷ್ಠಿ ಕೊಟ್ಟಿದೆ.
ಷಡ್ಯಂತ್ರದ ಮೂಲ ಬೇರುಗಳು ಗೋಕರ್ಣದಲ್ಲಿ ಚಾಚಿದೆ ಎಂಬುದು ಹಳೆಯ ವಿಚಾರ. ಆದರೆ ನ್ಯಾಯಾಲಯದಲ್ಲಿ ಸೆಣಸಿ ವಿಫಲರಾದ ನಕಲಿ ಸಿಡಿ ಪ್ರಕರಣದ ರೂವಾರಿಗಳು, ಸರ್ಕಾರದ ಮೇಲೂ ಪ್ರಭಾವ ಬೀರಬಲ್ಲರು ಎಂಬುದಕ್ಕೆ, ನಕಲಿ ಸಿಡಿ ಪ್ರಕರಣದ ಕೇಸ್ ಹಿಂತೆಗೆದುಕೊಂಡಿರುವುದೇ ಸಾಕ್ಷಿ. (ಗೋಮಾತೆಯ ಆಶೀರ್ವಾದದಿಂದ ಶ್ರೀಗಳಿಗೆ ಏನೂ ಆಗಿಲ್ಲ)

ಪ್ರಾಯಶಃ ಇದೇ ಮೊದಲಿರಬೇಕು, ಯಾವ ಸಾಮಾಜಿಕ ನ್ಯಾಯದ ಉದ್ದೇಶವೂ ಇಲ್ಲದೆ, ಸಮರ್ಪಕ ಸಾಕ್ಷ್ಯಗಳು ಇರುವ ಕ್ರಿಮಿನಲ್ ಪ್ರಕರಣವನ್ನು ಸರ್ಕಾರ ಹಿಂತೆಗೆದುಕೊಂಡದ್ದು.
ಇದರಿಂದ ಯಾವ ಆರೋಪಿಯು ಕೂಡ ತನ್ನ ಪ್ರಭಾವ ಬಳಸಿಕೊಂಡು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಬಹುದೆಂಬ ಕೆಟ್ಟ ಸಂದೇಶವನ್ನು ಕರ್ನಾಟಕದ ಜನತೆಗೆ ರವಾನಿಸಿದಂತಾಗುವುದಲ್ಲವೇ?
ಒಂದು ಬಾರಿಯಲ್ಲ, ಒಟ್ಟು ಒಂಬತ್ತು ಬಾರಿ ನಕಲಿ ಸಿಡಿ ಆರೋಪಿಗಳು ಕಾನೂನು ಕುಣಿಕೆಯಿಂದ ತಪ್ಪಿಸಿಕೊಳ್ಳಲು ನ್ಯಾಯಾಲಯದಲ್ಲಿ ಮಾಡಿದ ಹೋರಾಟ ವಿಫಲವಾಗಿ ಅಂತಿಮವಾಗಿ ಸರ್ಕಾರದ ಮೇಲೆಯೇ ಕಬಂಧ ಬಾಹು ಚಾಚಿ, ಪ್ರಭಾವ ಬೀರಿದ್ದಾರೆ ಎಂದರೆ ಇದರ ಹಿಂದೆ ಅತ್ಯಂತ ಪ್ರಭಾವೀ ವ್ಯಕ್ತಿಗಳು, ಶಕ್ತಿಗಳು ಇವೆ ಎನ್ನುವುದಕ್ಕೆ ಬೇರೆ ಪುರಾವೆ ಬೇಕೆ? ಹಾಗಿರುವಾಗ, ಸ್ವಾಮೀಜಿಯವರ ಮೇಲೆ ಒಂದು 'ಮಿಥ್ಯಾಚಾರ' ಆರೋಪ ಹೇರುವುದು ಕಷ್ಟದ ಕೆಲಸವೇ?
ಗೋಪಾಲ್ ಬಿ ಹೊಸೂರ್ ಅವರ ಮಾರ್ಗದರ್ಶನದಲ್ಲಿ ದಕ್ಷ ಪೋಲೀಸ್ ಅಧಿಕಾರಿಗಳು ರಾತ್ರೋರಾತ್ರಿ ಆರೋಪಿಗಳ ಮನೆ ಮೇಲೆ ದಾಳಿಮಾಡಿ, ಲಕ್ಷಾಂತರ ರೂಪಾಯಿ ಬೆಲೆಬಾಳುವ ಸಾಪ್ಟವೇರ್ ಹಾಗೂ ನೂರಾರು ಮಾರ್ಪ್ ಮಾಡಿರುವ ಫೋಟೋಗಳು ಹಾಗೂ ನಕಲಿ ವಿಡಿಯೋಗಳ ವಶಪಡಿಸಿಕೊಂಡು ಕೆಲ ಅರೋಪಿಗಳನ್ನು ಬಂಧಿಸಿದ್ದರು. (ಹೆಣ್ಣಿನ ಮೇಲೆ 169 ಬಾರಿ ಅತ್ಯಾಚಾರ ಆಗಲು ಸಾಧ್ಯವೇ)
ನ್ಯಾಯಾಲಯದ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಆಗದಷ್ಟು ಸಾಕ್ಷ್ಯಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ಸಮರ್ಪಿಸಿದ್ದರು. ಈಗ ಆ ಪೋಲೀಸರ ದಕ್ಷತೆ, ಕರ್ತವ್ಯ ನಿಷ್ಠೆ ಎಲ್ಲವೂ ನೀರು ಪಾಲಾದಂತಾಗಿದೆ.

ಏಕಾಏಕಿ ಸರ್ಕಾರ ಮಾಧ್ಯಮಗಳಿಗೂ ಅರಿವಿಗೆ ಬರದಂತೆ ಕೇಸನ್ನು ಹಿಂಪಡೆದಿದೆ. ಹಿಂಪಡೆಯಲು ಯಾವ ಸಕಾರಣವೂ ಇಲ್ಲ. ಅಂದರೆ, ಇದು ಸಂವಿಧಾನ ಕೊಡಮಾಡಿದ ಸಾಮಾಜಿಕ ನ್ಯಾಯದ ಕಗ್ಗೊಲೆಯಲ್ಲದೇ ಇನ್ನೇನು?
ಹಲವು ನ್ಯಾಯಾಧೀಶರು ನೀಡಿದ ತೀರ್ಪು ಕೂಡ ಈ ಅರೋಪಿಗಳ ವಿರುದ್ದವಾಗಿದೆ. ಇಂತಹ ಸನ್ನಿವೇಶದಲ್ಲಿ ಕೇಸ್ ವಾಪಾಸಾತಿ ಮಾಡಿದರೆ ಆರೋಪಿಗಳ ರಕ್ಷಣೆ ಮಾಡಿದಂತಾಗಿಲ್ಲವೇ?
ಕೇಸ್ ಮೆರಿಟ್ಸ್ ಆಧಾರದ ಮೇಲೆ ಎರಡೆರಡು ಬಾರಿ ಆರೋಪಿಗಳ ಅರ್ಜಿ ಹೈಕೋರ್ಟ್ ನಲ್ಲಿ ತಿರಸ್ಕೃತವಾದರೂ, ಸರ್ಕಾರ ಅಂತಹ ಕೇಸನ್ನು ಕೂಡ ವಾಪಾಸ್ ಪಡೆಯುತ್ತದೆ ಎಂದಾದರೆ, ಸರ್ಕಾರದ ಮೇಲೆ ಅದೆಂತಹ ಪ್ರಭಾವ ಬೀರಿರಬೇಕು?
ಕರ್ನಾಟಕದ ಇತಿಹಾಸದಲ್ಲೇ ಸಮರ್ಪಕ ಸಾಕ್ಷ್ಯಗಳು ಇರುವ ಇಂತಹ ಪ್ರಕರಣ ಹಿಂತೆಗೆದುಕೊಂಡಿರುವುದು ಎಲ್ಲೂ ಕಾಣದು. ಆದರೆ ವಾಮಮಾರ್ಗದ ಮೂಲಕ ಆರೋಪಿಗಳು ಕಾನೂನು ಕುಣಿಕೆಯಿಂದ ಬಚಾವಾಗಬಹುದು ಎಂಬ ಸಂದೇಶ ನೀಡಿದಂತಾಗಿಲ್ಲವೇ? ಈ ಮೂಲಕ ದೇಶದ ನ್ಯಾಯಾಂಗ ವ್ಯವಸ್ಥೆಗೆ ಅಪಚಾರವೆಸೆಗಿದಂತೆ ಅಲ್ಲವೇ ?
(ಲೇಖನದ ಎಲ್ಲಾ ಅಭಿಪ್ರಾಯಕ್ಕೂ ಲೇಖಕರೇ ಜವಾಬ್ದಾರಿಯಾಗಿರುತ್ತಾರೆ, ಸಂ)
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications