ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಪಾಲರ ಬಾಯಿಯಿಂದ ಯಡಿಯೂರಪ್ಪ ಸರಕಾರ ಬರೀ ಸುಳ್ಳನ್ನೇ ಹೇಳಿಸಿದೆ

|
Google Oneindia Kannada News

ಬೆಂಗಳೂರು, ಜ 28: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದಲ್ಲಿ ಒಂದಷ್ಟು ಸುಳ್ಳು, ಮತ್ತಷ್ಟು ತಪ್ಪು ಮಾಹಿತಿಯಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಹೀಗಿದೆ, "ಒಂದಷ್ಟು ಸುಳ್ಳು, ಇನ್ನೊಂದಿಷ್ಟು ತಪ್ಪು ಮಾಹಿತಿ ಮತ್ತು‌‌ ಹಿಂದಿನ ಕಾಂಗ್ರೆಸ್ ಸರ್ಕಾರದ‌ ಸಾಧನೆಗಳನ್ನು ರಾಜ್ಯಪಾಲರ ಭಾಷಣದಲ್ಲಿ ಹೇಳಿಸುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹತಾಶ ಪ್ರಯತ್ನ ನಡೆಸಿದೆ".

ಇಂದಿನಿಂದ ಅಧಿವೇಶನ: ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆಇಂದಿನಿಂದ ಅಧಿವೇಶನ: ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ

"ಕೊರೊನಾದಂತಹ ಮಾರಕ ರೋಗವನ್ನು ಬ್ರಹ್ಮಾಂಡ ಭ್ರಷ್ಟಚಾರವೆಸಗಲು ದುರುಪಯೋಗ ಪಡಿಸಿಕೊಂಡ @BSYBJP ಸರ್ಕಾರ, ರೋಗ ನಿಯಂತ್ರಣದಲ್ಲಿನ ವೈಫಲ್ಯಗಳನ್ನು ಸುಳ್ಳು ಅಂಕಿ ಅಂಶಗಳ ಮೂಲಕ ಮರೆಮಾಚಲು ಪ್ರಯತ್ನಿಸಿದೆ"ಎಂದು ಸಿದ್ದರಾಮಯ್ಯ ಆಪಾದಿಸಿದ್ದಾರೆ.

Governor Address In Joint Session Of Assembly: BSY Government False Information Said, Siddaramaiah

"ತೆರಿಗೆಯಲ್ಲಿ ಪಾಲು,‌ 15ನೇ ಹಣಕಾಸು ಆಯೋಗದ ಅನುದಾನ ಮತ್ತು ಜಿಎಸ್ ಟಿ ಪರಿಹಾರದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿವರವನ್ನು ರಾಜ್ಯಪಾಲರ ಭಾಷಣದಲ್ಲಿ ನೀಡಿದ್ದರೆ @BSYBJP ಸರ್ಕಾರದ ಬಣ್ಣ‌ ಸಂಪೂರ್ಣ ಬಯಲಾಗುತ್ತಿತ್ತು"ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

"ಕಳೆದ ವರ್ಷ ಅತಿವೃಷ್ಟಿಯಿಂದ 9,94,556 ಹೆಕ್ಟೇರ್ ಬೆಳೆ ನಾಶವೂ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.25,518 ಕೋಟಿ ಪರಿಹಾರ ಕೇಳಿದ್ದ ರಾಜ್ಯ @BJP4Karnataka ಸರ್ಕಾರ, ಈ ಬಾರಿ 20,86,703 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.24,941.73 ಕೋಟಿ ಪರಿಹಾರವನ್ನು ಕೇಳಿ ರಾಜ್ಯಕ್ಕೆ ದ್ರೋಹ ಬಗೆದಿದೆ"ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತ ಪಡಿಸಿದ್ದಾರೆ.

ನಾಳೆಯಿಂದ ಜಂಟಿ ಅಧಿವೇಶನ; ಸರ್ಕಾರಕ್ಕೆ ಮಹತ್ವದ ಸಂದೇಶ ಕೊಟ್ಟ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ!ನಾಳೆಯಿಂದ ಜಂಟಿ ಅಧಿವೇಶನ; ಸರ್ಕಾರಕ್ಕೆ ಮಹತ್ವದ ಸಂದೇಶ ಕೊಟ್ಟ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ!

"ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಕೇಂದ್ರದಿಂದ ಕೇಳಿದರೂ ಸಿಕ್ಕಿರುವುದು ಮಾತ್ರ ರೂ.1,634 ಕೋಟಿ ಮಾತ್ರ. ರಾಜ್ಯ @BJP4Karnataka ಸರ್ಕಾರ ಸಮರ್ಪಕ ಸಮೀಕ್ಷಾ ವರದಿ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಿದರೆ ಮಾತ್ರ ಹೆಚ್ಚಿನ ಪರಿಹಾರ ಸಿಗಲು ಸಾಧ್ಯ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. (ಚಿತ್ರ:ಪಿಟಿಐ)

English summary
Governor Address In Joint Session Of Assembly: BSY Government False Information Said, Siddaramaiah,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X