ಸರ್ಕಾರಕ್ಕೆ ಮುಖಭಂಗ, ಲೋಕಾಯುಕ್ತ ಕಡತ ಮತ್ತೆ ವಾಪಸ್
ಬೆಂಗಳೂರು, ಮೇ 27 : ಲೋಕಾಯುಕ್ತ ನೇಮಕದ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ. ಲೋಕಾಯುಕ್ತ ಹುದ್ದೆಗೆ ಸರ್ಕಾರ ಶಿಫಾರಸು ಮಾಡಿದ್ದ ನ್ಯಾ.ಎಸ್.ಆರ್.ನಾಯಕ್ ಅವರ ಹೆಸರನ್ನು ರಾಜ್ಯಪಾಲರು 2ನೇ ಬಾರಿ ತಿರಸ್ಕರಿಸಿದ್ದಾರೆ.
ನ್ಯಾ.ಭಾಸ್ಕರರಾವ್ ಅವರಿಂದ ತೆರವಾಗಿರುವ ಕರ್ನಾಟಕ ಲೋಕಾಯುಕ್ತ ಹುದ್ದೆಗೆ ಎಸ್.ಆರ್.ನಾಯಕ್ ಅವರನ್ನು ನೇಮಿಸಲು ಸರ್ಕಾರ ನಿರ್ಧರಿಸಿದೆ. ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಈ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಮೇ 3ರಂದು ರಾಜ್ಯಪಾಲರು ಶಿಫಾರಸನ್ನು ವಾಪಸ್ ಕಳಿಸಿದ್ದರು. [ಲೋಕಾಯುಕ್ತರ ನೇಮಕ, ಸರ್ಕಾರಕ್ಕೆ ಹಿನ್ನಡೆ]

ಕರ್ನಾಟಕ ಸರ್ಕಾರ ಮತ್ತೊಮ್ಮೆ ಎಸ್.ಆರ್.ನಾಯಕ್ ಅವರ ಹೆಸರನ್ನು ಶಿಫಾರಸು ಮಾಡಿತ್ತು. ಶುಕ್ರವಾರ ರಾಜ್ಯಪಾಲರು 2ನೇ ಬಾರಿಗೆ ನಾಯಕ್ ಅವರ ಹೆಸರನ್ನು ತಿರಸ್ಕಾರ ಮಾಡಿದ್ದು, ಸರ್ಕಾರಕ್ಕೆ ಮುಖಭಂಗವಾಗಿದೆ. [ಲೋಕಾಯುಕ್ತರ ನೇಮಕ ಮತ್ತಷ್ಟು ವಿಳಂಬ]
ಸಿಜೆ ಆಕ್ಷೇಪ ವ್ಯಕ್ತಪಡಿಸಿದ್ದರು : ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಅವರು ಎಸ್.ಆರ್.ನಾಯಕ್ ಅವರ ನೇಮಕಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಮಾನವ ಹಕ್ಕು ಆಯೋಗದ ಅಧ್ಯಕ್ಷರಾದ ಮೇಲೆ ಬೇರೆ ಹುದ್ದೆ ನಿರ್ವಹಣೆ ಮಾಡುವಂತಿಲ್ಲ. ಆದ್ದರಿಂದ, ಅವರನ್ನು ನೇಮಕ ಮಾಡಬಾರದು ಎಂದು ಹೇಳಿದ್ದರು. [ನಾಯಕ್ ವಿರುದ್ಧ ಲೋಕಾಯುಕ್ತಕ್ಕೆ ದೂರು]
ಮಾನವ ಹಕ್ಕು ಸಂರಕ್ಷಣಾ ಕಾಯ್ದೆ 1993 ಸಬ್ ಸೆಕ್ಷನ್ 3 ಆಫ್ 24 ಪ್ರಕಾರ ಸರ್ಕಾರಿ ಹುದ್ದೆ ನಿರ್ವಹಣೆ ಮಾಡಿದವರನ್ನು ಪುನಃ ನೇಮಕ ಮಾಡುವಂತಿಲ್ಲ. ಈ ಬಗ್ಗೆ ಸರ್ಕಾರಕ್ಕೂ ಮುಖ್ಯ ನ್ಯಾಯಮೂರ್ತಿಗಳು ಮಾಹಿತಿ ನೀಡಿದ್ದರು. ಮುಖ್ಯ ನ್ಯಾಯಮೂರ್ತಿಗಳ ಈ ಆಕ್ಷೇಪವನ್ನು ಗಂಭೀರವಾಗಿ ಪರಿಗಣನೆ ಮಾಡಿರುವ ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರ ಶಿಫಾರಸನ್ನು ತಿರಸ್ಕರಿಸಿರಬಹುದು.
ಉಪ ಲೋಕಾಯುಕ್ತ ವಿಚಾರದಲ್ಲೂ ಹಿನ್ನಡೆ : ಉಪ ಲೋಕಾಯಕ್ತ ಸುಭಾಷ್ ಬಿ.ಅಡಿ ಅವರ ಪದಚ್ಯುತಿ ವಿಚಾರದಲ್ಲಿಯೂ ಸರ್ಕಾರಕ್ಕೆ ಮುಖಭಂಗವಾಗಿದೆ. ಉಪಲೋಕಾಯುಕ್ತರು ಸಜ್ಜನ ಪಕ್ಷಪಾತ ನಡೆಸಿದ್ದಕ್ಕೆ ಯಾವುದೇ ಆಧಾರಗಳಿಲ್ಲ ಎಂದು ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಸಮಿತಿ ವರದಿ ನೀಡಿದ್ದು, ಸುಭಾಷ್ ಬಿ.ಅಡಿ ಅವರಿಗೆ ಕ್ಲೀನ್ ಚಿಟ್ ನೀಡಿದೆ. [ಉಪ ಲೋಕಾಯುಕ್ತರು ಆರೋಪ ಮುಕ್ತ]
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications