ಪರಿಷತ್ ನಾಮನಿರ್ದೇಶನದ ಗೊಂದಲಕ್ಕೆ ತೆರೆ
ಬೆಂಗಳೂರು, ಜೂ. 25 : ಭಾರೀ ಚರ್ಚೆಗೆ ಕಾರಣವಾಗಿದ್ದ ವಿಧಾನಪರಿಷತ್ ನಾಮನಿರ್ದೇಶಿತರ ಪಟ್ಟಿಯ ಗೊಂದಲ ಬಗೆಹರಿದಿದೆ. ಸರ್ಕಾರ ಶಿಫಾರಸು ಮಾಡಿದ್ದ ಐದು ಹೆಸರುಗಳನ್ನು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅಂಗೀಕರಿಸಿದ್ದಾರೆ. ಜೂನ್.30ರ ನಂತರ ಹೊಸ ಸದಸ್ಯರು ಅಧಿಕಾರ ಪಡೆಯಲಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ, ಇಕ್ಬಾಲ್ ಅಹ್ಮದ್ ಸರಡಗಿ, ಅಬ್ದುಲ್ ಜಬ್ಟಾರ್, ಐವಾನ್ ಡಿಸೋಜಾ ಹಾಗೂ ಜಯಮಾಲಾ ಅವರು ನೂತನ ವಿಧಾನಪರಿಷತ್ ನಾಮನಿರ್ದೇಶಿತ ಸದಸ್ಯರಾಗಿದ್ದು, ಜೂ.30ರ ನಂತರ ಇವರು ಅಧಿಕಾರ ಸ್ವೀಕರಿಸಲಿದ್ದಾರೆ. ಪಟ್ಟಿ ಅಂತಿಮವಾಗುವ ಮೂಲಕ ಹಲವಾರು ದಿನಗಳ ಗೊಂದಲ ಬಗೆಹರಿದಿದೆ.

ಪ್ರೊ.ಮುಮ್ತಾಜ್ ಅಲಿಖಾನ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಈ ಹಿಂದೆಯೇ ಆಯ್ಕೆಯಾಗಿದ್ದ ಅಬ್ದುಲ್ ಜಬ್ಟಾರ್ ಅವರನ್ನು ಮುಂದುವರೆಸಲಾಗಿದೆ. ಉಳಿದಂತೆ ಬಿಜೆಪಿಯ ಎಸ್.ಆರ್.ಲೀಲಾ, ಡಾ.ದೊಡ್ಡರಂಗೇಗೌಡ, ಎಂ.ಆರ್.ದೊರೆಸ್ವಾಮಿ ಹಾಗೂ ಬಿ.ಬಿ.ಶಿವಪ್ಪ ಅವರ ಸ್ಥಾನಗಳಿಗೆ ಉಳಿದ ನಾಲ್ವರನ್ನು ಆಯ್ಕೆ ಮಾಡಲಾಗಿದೆ. [ನಾಮನಿರ್ದೇಶಿತರ ಪಟ್ಟಿ ಬದಲಾವಣೆ]
ಶಾಂತಕುಮಾರ್ ಗೆ ನಿರಾಸೆ : ವಿಧಾನಪರಿಷತ್ತಿನ ನಾಮನಿರ್ದೇಶನಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಹಲವು ನಾಯಕರು ಲಾಬಿ ನಡೆಸುತ್ತಿದ್ದರು. ಇಕ್ಬಾಲ್ ಅಹ್ಮದ್ ಸರಡಗಿ, ಐವಾನ್ ಡಿಸೋಜಾ, ಇಂಟೆಕ್ ಶಾಂತಕುಮಾರ್ ಅವರ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಶಾಂತಕುಮಾರ್ ಅವರಿಗೆ ನಿರಾಸೆಯಾಗಿದ್ದು, ಐವಾನ್ ಡಿಸೋಜಾ ಅವರು ಪರಿಷತ್ ಪ್ರವೇಶಿಸಿದ್ದಾರೆ. [ನಾಮನಿರ್ದೇಶಿತರ ಪಟ್ಟಿಗೆ ಬಿಜೆಪಿ ವಿರೋಧ]
ಮಂಗಳವಾರ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರನ್ನು ಭೇಟಿ ಮಾಡಿ ನಾಮನಿರ್ದೇಶಿತರ ಪಟ್ಟಿಯನ್ನು ನೀಡಿದ್ದರು. ಪಟ್ಟಿಗೆ ಯಾವುದೇ ವಿರೋಧ ವ್ಯಕ್ತಪಡಿಸದ ರಾಜ್ಯಪಾಲರು, ಅಂತಿಮ ಒಪ್ಪಿಗೆ ನೀಡಿದ್ದಾರೆ. ಹಿಂದಿನ ಸದಸ್ಯರ ಅವಧಿ ಜೂನ್ 30ಕ್ಕೆ ಕೊನೆಗೊಳ್ಳಲಿದ್ದು, ನಂತರ ನೂತನವಾಗಿ ಆಯ್ಕೆಯಾದವರು ಅಧಿಕಾರ ಸ್ವೀಕರಿಸಲಿದ್ದಾರೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications