ಪರಿಷತ್ ನಾಮನಿರ್ದೇಶನದ ಗೊಂದಲಕ್ಕೆ ತೆರೆ
ಬೆಂಗಳೂರು, ಜೂ. 25 : ಭಾರೀ ಚರ್ಚೆಗೆ ಕಾರಣವಾಗಿದ್ದ ವಿಧಾನಪರಿಷತ್ ನಾಮನಿರ್ದೇಶಿತರ ಪಟ್ಟಿಯ ಗೊಂದಲ ಬಗೆಹರಿದಿದೆ. ಸರ್ಕಾರ ಶಿಫಾರಸು ಮಾಡಿದ್ದ ಐದು ಹೆಸರುಗಳನ್ನು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅಂಗೀಕರಿಸಿದ್ದಾರೆ. ಜೂನ್.30ರ ನಂತರ ಹೊಸ ಸದಸ್ಯರು ಅಧಿಕಾರ ಪಡೆಯಲಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ, ಇಕ್ಬಾಲ್ ಅಹ್ಮದ್ ಸರಡಗಿ, ಅಬ್ದುಲ್ ಜಬ್ಟಾರ್, ಐವಾನ್ ಡಿಸೋಜಾ ಹಾಗೂ ಜಯಮಾಲಾ ಅವರು ನೂತನ ವಿಧಾನಪರಿಷತ್ ನಾಮನಿರ್ದೇಶಿತ ಸದಸ್ಯರಾಗಿದ್ದು, ಜೂ.30ರ ನಂತರ ಇವರು ಅಧಿಕಾರ ಸ್ವೀಕರಿಸಲಿದ್ದಾರೆ. ಪಟ್ಟಿ ಅಂತಿಮವಾಗುವ ಮೂಲಕ ಹಲವಾರು ದಿನಗಳ ಗೊಂದಲ ಬಗೆಹರಿದಿದೆ.

ಪ್ರೊ.ಮುಮ್ತಾಜ್ ಅಲಿಖಾನ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಈ ಹಿಂದೆಯೇ ಆಯ್ಕೆಯಾಗಿದ್ದ ಅಬ್ದುಲ್ ಜಬ್ಟಾರ್ ಅವರನ್ನು ಮುಂದುವರೆಸಲಾಗಿದೆ. ಉಳಿದಂತೆ ಬಿಜೆಪಿಯ ಎಸ್.ಆರ್.ಲೀಲಾ, ಡಾ.ದೊಡ್ಡರಂಗೇಗೌಡ, ಎಂ.ಆರ್.ದೊರೆಸ್ವಾಮಿ ಹಾಗೂ ಬಿ.ಬಿ.ಶಿವಪ್ಪ ಅವರ ಸ್ಥಾನಗಳಿಗೆ ಉಳಿದ ನಾಲ್ವರನ್ನು ಆಯ್ಕೆ ಮಾಡಲಾಗಿದೆ. [ನಾಮನಿರ್ದೇಶಿತರ ಪಟ್ಟಿ ಬದಲಾವಣೆ]
ಶಾಂತಕುಮಾರ್ ಗೆ ನಿರಾಸೆ : ವಿಧಾನಪರಿಷತ್ತಿನ ನಾಮನಿರ್ದೇಶನಕ್ಕೆ ಕಾಂಗ್ರೆಸ್ ಪಕ್ಷದಲ್ಲಿ ಹಲವು ನಾಯಕರು ಲಾಬಿ ನಡೆಸುತ್ತಿದ್ದರು. ಇಕ್ಬಾಲ್ ಅಹ್ಮದ್ ಸರಡಗಿ, ಐವಾನ್ ಡಿಸೋಜಾ, ಇಂಟೆಕ್ ಶಾಂತಕುಮಾರ್ ಅವರ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಅಂತಿಮವಾಗಿ ಶಾಂತಕುಮಾರ್ ಅವರಿಗೆ ನಿರಾಸೆಯಾಗಿದ್ದು, ಐವಾನ್ ಡಿಸೋಜಾ ಅವರು ಪರಿಷತ್ ಪ್ರವೇಶಿಸಿದ್ದಾರೆ. [ನಾಮನಿರ್ದೇಶಿತರ ಪಟ್ಟಿಗೆ ಬಿಜೆಪಿ ವಿರೋಧ]
ಮಂಗಳವಾರ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರನ್ನು ಭೇಟಿ ಮಾಡಿ ನಾಮನಿರ್ದೇಶಿತರ ಪಟ್ಟಿಯನ್ನು ನೀಡಿದ್ದರು. ಪಟ್ಟಿಗೆ ಯಾವುದೇ ವಿರೋಧ ವ್ಯಕ್ತಪಡಿಸದ ರಾಜ್ಯಪಾಲರು, ಅಂತಿಮ ಒಪ್ಪಿಗೆ ನೀಡಿದ್ದಾರೆ. ಹಿಂದಿನ ಸದಸ್ಯರ ಅವಧಿ ಜೂನ್ 30ಕ್ಕೆ ಕೊನೆಗೊಳ್ಳಲಿದ್ದು, ನಂತರ ನೂತನವಾಗಿ ಆಯ್ಕೆಯಾದವರು ಅಧಿಕಾರ ಸ್ವೀಕರಿಸಲಿದ್ದಾರೆ.
-
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications