ವಿಶ್ವಾಸಮತ ಯಾಚನೆಗೆ ಸಿಎಂಗೆ ಹೊಸ ಡೆಡ್ಲೈನ್ ನೀಡಿದ ರಾಜ್ಯಪಾಲರು
Recommended Video
ಬೆಂಗಳೂರು, ಜುಲೈ 19: ವಿಶ್ವಾಸಮತ ಯಾಚನೆಗೆ ಸಿಎಂ ಅವರಿಗೆ ನೀಡಿದ್ದ 1: 30 ರ ಗಡುವು ಮೀರಿದ್ದರೂ ವಿಶ್ವಾಸಮತ ಯಾಚನೆ ಮಾಡಿಲ್ಲವಾದ್ದರಿಂದ ಈಗ ಮತ್ತೊಮ್ಮೆ ಹೊಸ ಡೆಡ್ಲೈನ್ ಅನ್ನು ರಾಜ್ಯಪಾಲರು ಸಿಎಂ ಅವರಿಗೆ ನೀಡಿದ್ದಾರೆ.
Photos : ಸದನದಲ್ಲಿ ಗದ್ದಲ, ಅಹೋರಾತ್ರಿ ಧರಣಿ, ಮಾರ್ನಿಂಗ್ ವಾಕ್
ಮರುಜ್ಞಾಪನಾ ಪತ್ರವನ್ನು ಸಿಎಂ ಅವರಿಗೆ ರವಾನಿಸಿರುವ ರಾಜ್ಯಪಾಲರು ಸಂಜೆ 6 ಗಂಟೆ ಒಳಗೆ ಬಹುಮತವನ್ನು ಸಾಬೀತು ಮಾಡಿ ಎಂದು ರಾಜ್ಯಪಾಲ ವಜುಭಾಯಿ ವಾಲಾ ಅವರು ನಿರ್ದೇಶನ ನೀಡಿದ್ದಾರೆ.
ನಿನ್ನೆ ಮಧ್ಯಾಹ್ನ ಸಿಎಂ ಅವರಿಗೆ ಪತ್ರ ಬರೆದಿದ್ದ ರಾಜ್ಯಪಾಲರು, 15 ಜನ ಶಾಸಕರು ನನಗೆ ರಾಜೀನಾಮೆ ಪತ್ರಿ ನೀಡಿ ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆಯುವುದಾಗಿ ಹೇಳಿದ್ದಾರೆ, ನಿಮಗೆ ಬಹುಮತ ಇಲ್ಲವೆಂಬ ಅನುಮಾನವಿದೆ ಹಾಗಾಗಿ ಶುಕ್ರವಾರ ಮಧ್ಯಾಹ್ನ 1:30 ರ ಒಳಗಾಗಿ ವಿಶ್ವಾಸಮತ ಯಾಚನೆ ಮಾಡಿ ಎಂದು ಸೂಚಿಸಿದ್ದರು.

ಆದರೆ ಇಂದು ಸದನದಲ್ಲಿ ಈ ವಿಷಯ ಚರ್ಚೆಯಾಗಿ, ರಾಜ್ಯಪಾಲರು ಹೀಗೆ ಸದನದ ಕಾರ್ಯಕಲಾಪದಲ್ಲಿ ಹಸ್ತಕ್ಷೇಪ ಮಾಡುವ ಅಧಿಕಾರವಿಲ್ಲವೆಂದು ಚರ್ಚೆ ಮಂಡಿಸಿದರು. ಇದರ ಪರ ವಿರೋಧ ಚರ್ಚೆಯೂ ಸಾಕಷ್ಟು ನಡೆಯಿತು, ಆದರೆ ರಾಜ್ಯಪಾಲರು ನೀಡಿದ್ದ ಸಮಯದ ಒಳಗೆ ವಿಶ್ವಾಸಮತ ಯಾಚನೆ ಆಗಲಿಲ್ಲ.
ತಮ್ಮ ನಿರ್ದೇಶನವನ್ನು ಪಾಲಿಸಿಲ್ಲವಾದ್ದರಿಂದ ರಾಜ್ಯಪಾಲರು ಮತ್ತೆ ಮರುಜ್ಞಾಪನಾ ಪತ್ರವನ್ನು ರವಾನಿಸಿದ್ದಾರೆ. ಹೊಸ ಸೂಚನೆಯಂತೆ ಸಿಎಂ ಅವರು ಇಂದು ಸಂಜೆ 6 ಗಂಟೆ ಒಳಗೆ ವಿಶ್ವಾಸಮತ ಯಾಚನೆ ಮಾಡಬೇಕಿದೆ.
ರಾಜ್ಯಪಾಲರ ಪರಿಷ್ಕೃತ ಸೂಚನೆಯನ್ನು ಸಿಎಂ ಅವರು ಪಾಲಿಸುತ್ತಾರಾ? ಅಥವಾ ಮತ್ತೆ ನಿರ್ದೇಶನವನ್ನು ಉಲ್ಲಂಘಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications