ಸರ್ಕಾರ ರಚನೆಗೆ ಕುಮಾರಸ್ವಾಮಿಯನ್ನು ಆಹ್ವಾನಿಸಿದ ರಾಜ್ಯಪಾಲ ವಾಲಾ
ಬೆಂಗಳೂರು, ಮೇ 19: ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಸರಕಾರ ರಚಿಸುವಂತೆ ರಾಜ್ಯಪಾಲ ವಜೂಭಾಯಿ ವಾಲಾ ಆಹ್ವಾನ ನೀಡಿದ್ದಾರೆ.
ತಮಗೆ 116 ಶಾಸಕರ ಬೆಂಬಲ ಇದೆ. ಸರಕಾರ ರಚಿಸಲು ಅವಕಾಶ ನೀಡಿ ಎಂದು ಎಚ್.ಡಿ. ಕುಮಾರಸ್ವಾಮಿ ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದರು.
LIVE:ಸರ್ಕಾರ ರಚನೆಗೆ ಕುಮಾರಸ್ವಾಮಿಯನ್ನು ಆಹ್ವಾನಿಸಿದ ರಾಜ್ಯಪಾಲ ವಾಲಾ
ಆದರೆ ಈ ಹಿಂದೆ ರಾಜ್ಯಪಾಲರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪರನ್ನು ಸರಕಾರ ರಚನೆಗೆ ಆಹ್ವಾನಿಸಿದ್ದರು. ಇದೀಗ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟಕ್ಕೆ ಸರಕಾರ ರಚನೆಗೆ ಆಹ್ವಾನ ನೀಡಿದ್ದಾರೆ.
ಮೈತ್ರಿಕೂಟದಿಂದ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ. ಆದರೆ ಪ್ರಮಾಣ ವಚನಕ್ಕೆ ಇನ್ನೂ ಸಮಯ ನಿಗದಿಯಾಗಿಲ್ಲ.
ಸಂಭಾವ್ಯ : ಕೈ-ತೆನೆ ಮೈತ್ರಿ ಸರ್ಕಾರದಲ್ಲಿ ಸಚಿವರು ಹಾಗೂ ಖಾತೆಗಳು
ರಾಜ್ಯಪಾಲರ ಭೇಟಿ
ಇಂದು ಸಂಜೆ 7.30ಕ್ಕೆ ರಾಜ್ಯಪಾಲರನ್ನು ಎಚ್.ಡಿ. ಕುಮಾರಸ್ವಾಮಿ ಭೇಟಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಪ್ರಮಾಣ ವಚನಕ್ಕೆ ದಿನ ಮತ್ತು ಸಮಯ ನಿಗದಿ ಪಡಿಸುವ ಸಾಧ್ಯತೆ ಇದೆ.
ವರದಿಗಳ ಪ್ರಕಾರ ಸೋಮವಾರ ಮಧ್ಯಾಹ್ನ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.