ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ; ಸಂವಿಧಾನದ ರಕ್ಷಕರು: ಆರ್. ಅಶೋಕ್
ಬೆಂಗಳೂರು: ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ; ಅವರು ಸಂವಿಧಾನದ ರಕ್ಷಕರು. ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ಯಾವುದೇ ಕಡ್ಡಾಯ ನಿಯಮ ಭಾರತದ ಸಂವಿಧಾನದಲ್ಲಿ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಹೇಳಿದ್ದಾರೆ.
ಅಭಿವೃದ್ಧಿ ಶೂನ್ಯ ಆಡಳಿತ, ಸಾಲು ಸಾಲು ಭ್ರಷ್ಟಾಚಾರ ಹಗರಣಗಳು ಮತ್ತು ಆಡಳಿತಾತ್ಮಕ ವೈಫಲ್ಯವನ್ನು ಮರೆಮಾಚಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇಂದು ರಾಜ್ಯಪಾಲರ ಭಾಷಣವನ್ನೇ ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ. ಇದು ರಾಜಕೀಯ ಹತಾಶೆಯಿಂದ ಮಾಡುತ್ತಿರುವ ಸಂವಿಧಾನಾತ್ಮಕ ಸಂಸ್ಥೆಗಳ ಮೇಲಿನ ನೇರ ದಾಳಿ. ರಾಜ್ಯಪಾಲರು ಯಾವುದೇ ಪಕ್ಷದ ಪ್ರತಿನಿಧಿಗಳಲ್ಲ. ಅವರು ಸಂವಿಧಾನದ ಘನತೆಯನ್ನು ಮತ್ತು ಒಕ್ಕೂಟ ವ್ಯವಸ್ಥೆಯ ಸಮತೋಲನವನ್ನು ಕಾಪಾಡುವ ಉನ್ನತ ಸಂವಿಧಾನಾತ್ಮಕ ಸಂಸ್ಥೆ. ಅವರ ಘನತೆಗೆ ಧಕ್ಕೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ಚ್ಯುತಿ ತರುವ ದುಸ್ಸಾಹಸ ಮಾಡುತ್ತಿದೆ.

ಭಾರತದ ಸಂವಿಧಾನದ ವಿಧಿ 175 ಮತ್ತು 176 ರಾಜ್ಯಪಾಲರಿಗೆ ವಿಧಾನಸಭೆ ಹಾಗೂ ವಿಧಾನಪರಿಷತ್ತನ್ನು ಉದ್ದೇಶಿಸಿ ಭಾಷಣ ಮಾಡುವ ಅಧಿಕಾರ ನೀಡುತ್ತವೆ. ಆದರೆ ಸರ್ಕಾರ ತಯಾರಿಸಿದ ಪಠ್ಯದ ಪ್ರತಿಯೊಂದು ಪದವನ್ನೂ ರಾಜ್ಯಪಾಲರು ಯಾಂತ್ರಿಕವಾಗಿ ಯಥಾವತ್ತಾಗಿ ಓದಲೇಬೇಕು ಎಂಬ ನಿಯಮ ಸಂವಿಧಾನದಲ್ಲೂ ಇಲ್ಲ, ವಿಧಾನಸಭೆ ಅಥವಾ ವಿಧಾನಪರಿಷತ್ತಿನ ನಿಯಮಗಳಲ್ಲೂ ಇಲ್ಲ. ವಿಧಿ 163ರ ಪ್ರಕಾರ ರಾಜ್ಯಪಾಲರು ಸಾಮಾನ್ಯವಾಗಿ ಸಚಿವ ಸಂಪುಟದ ಸಲಹೆಯಂತೆ ಕಾರ್ಯನಿರ್ವಹಿಸಿದರೂ, ಸಂವಿಧಾನವೇ ಅವರಿಗೆ ನಿರ್ದಿಷ್ಟ ವಿವೇಚನಾಧಿಕಾರ ನೀಡಿದೆ. ಸರ್ಕಾರ ತಯಾರಿಸಿದ ಭಾಷಣದಲ್ಲಿ ಅಸಂಬದ್ಧ, ಅಸಹ್ಯಕರ, ದ್ವೇಷಪೂರಿತ ಅಥವಾ ಸಂವಿಧಾನ ವಿರೋಧಿ ಅಂಶಗಳಿದ್ದರೆ, ಅವನ್ನು ಓದದೇ ಬಿಡುವುದು ರಾಜ್ಯಪಾಲರ ಸಂವಿಧಾನಾತ್ಮಕ ಹಕ್ಕು.
ಕಾಂಗ್ರೆಸ್ ಸರ್ಕಾರ ಒಂದು ವಿಷಯವನ್ನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ಸರ್ಕಾರದ ಸುಳ್ಳಿನ ಕಂತೆಗೆ ರಾಜ್ಯಪಾಲರು ಧ್ವನಿಯಾಗಬೇಕು ಎಂಬ ನಿಯಮ ಕಾಂಗ್ರೆಸ್ನ ರಾಜಕೀಯ ಕೈಪಿಡಿಯಲ್ಲಿ ಇರಬಹುದು ಅಥವಾ ರಾಹುಲ್ ಗಾಂಧಿ ಅವರು ಹಿಡಿದುಕೊಂಡು ಅಡ್ಡಾಡುವ ಪುಸ್ತಕದಲ್ಲಿ ಇರಬಹುದು, ಆದರೆ ಭಾರತದ ಸಂವಿಧಾನದಲ್ಲಿ ಇಲ್ಲ.
ನೀತಿ ಆಯೋಗದ ಸಭೆಗಳಿಗೆ ಗೈರು, ಜಿಎಸ್ಟಿ ಕೌನ್ಸಿಲ್ನಿಂದ ದೂರ, ಹಣಕಾಸು ಆಯೋಗದ ಮುಂದೆ ರಾಜ್ಯದ ಹಿತಾಸಕ್ತಿಯನ್ನು ಸಮರ್ಥವಾಗಿ ಮಂಡಿಸದ ಕಾಂಗ್ರೆಸ್ ಸರ್ಕಾರ ರಾಜ್ಯದ ಹಿತಾಸಕ್ತಿ ಕಾಪಾಡಲು ಆಸಕ್ತಿ ತೋರದೆ ವಿಫಲವಾಗಿ, ಈಗ ಕೇಂದ್ರ ಸರ್ಕಾರದ ಮೇಲೆ ರಾಜಕೀಯ ಪ್ರೇರಿತ ಆರೋಪ ಮಾಡುವ ನಾಟಕವಾಡುತ್ತಿದೆ.
ಸಿದ್ದರಾಮಯ್ಯ ಸರ್ಕಾರಕ್ಕೆ ಅಭಿವೃದ್ಧಿಗಿಂತ ರಾಜಕೀಯವೇ ಮುಖ್ಯ: ಅಭಿವೃದ್ಧಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಗುತ್ತಿಗೆದಾರರಿಗೆ ಪಾವತಿಸಲು ಹಣವಿಲ್ಲ. ಮೂಡಾ ಹಗರಣ, ವಾಲ್ಮೀಕಿ ನಿಗಮದ ಹಣ ವರ್ಗಾವಣೆ, 60% ಕಮಿಷನ್ ಆರೋಪಗಳು ಸರ್ಕಾರವನ್ನು ಜನರ ಮುಂದೆ ಬೆತ್ತಲಾಗಿಸಿವೆ. ಈ ಎಲ್ಲ ಹಗರಣಗಳಿಂದ ಸಾರ್ವಜನಿಕರ ಗಮನ ಬೇರೆಡೆ ಸೆಳೆಯಲು, ರಾಜ್ಯಪಾಲರ ಭಾಷಣವನ್ನು ವಿವಾದಕ್ಕೆ ಎಳೆದು ತರುವುದು ಕಾಂಗ್ರೆಸ್ನ ಕುತಂತ್ರ.
ಚುನಾಯಿತ ಸರ್ಕಾರಕ್ಕೆ ಜನರ ಸೇವೆ ಮಾಡುವ ಮ್ಯಾಂಡೇಟ್ ಇದೆಯೇ ಹೊರತು, ರಾಜ್ಯಪಾಲರ ಬಾಯಲ್ಲಿ ಸುಳ್ಳು ಹೇಳಿಸುವ ಅಧಿಕಾರವಿಲ್ಲ. ಎನ್ಇಪಿ, ತೆರಿಗೆ ಹಂಚಿಕೆ ಮತ್ತು ಅನುದಾನ ವಿಚಾರಗಳಲ್ಲಿ ಹಸಿ ಸುಳ್ಳುಗಳನ್ನು ಪಠ್ಯದಲ್ಲಿ ಸೇರಿಸಿ, ಅದನ್ನು ರಾಜ್ಯಪಾಲರು ಓದಲಿಲ್ಲವೆಂದು ವಿವಾದ ಸೃಷ್ಟಿ ಮಾಡುವುದು ಕಾಂಗ್ರೆಸ್ ನಾಯಕರ ರಾಜಕೀಯ ಹತಾಶೆಯನ್ನು ತೋರಿಸುತ್ತದೆ.
ಈ ಸರ್ಕಾರ ಇಂದು ದಿವಾಳಿಯ ಅಂಚಿನಲ್ಲಿ ನಿಂತಿದೆ. ಜನರ ಮುಂದೆ ಹೋಗಲು ಮುಖವಿಲ್ಲದೆ, ರಾಜ್ಯಪಾಲರ ಉನ್ನತ ಹಾಗೂ ಗೌರವಾನ್ವಿತ ಹುದ್ದೆಯನ್ನು ರಾಜಕೀಯ ಜಿದ್ದಾಜಿದ್ದಿಗೆ ಎಳೆದು ತರುತ್ತಿರುವುದು ಸಂವಿಧಾನಕ್ಕೆ ಮಾಡುತ್ತಿರುವ ಅವಮಾನ. ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ಬಳಸಿರುವುದು ಸಂಪೂರ್ಣವಾಗಿ ಸಂವಿಧಾನಸಮ್ಮತ. ಇದನ್ನು ಪ್ರಶ್ನಿಸುವ ಮೊದಲು ಕಾಂಗ್ರೆಸ್ ಸರ್ಕಾರ ಸಂವಿಧಾನವನ್ನು ಓದಿ, ಅರ್ಥಮಾಡಿಕೊಳ್ಳಲಿ ಎಂದು ಆರ್. ಅಶೋಕ್ ಅವರು ಹೇಳಿದ್ದಾರೆ.
-
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಯುಗಾದಿ ಹಬ್ಬ - ಶಿವರಾತ್ರಿಯಂದು ನಾನು ಮಾಂಸ ತಿಂತಿನಿ, ಅದು ನನ್ನಿಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications