Get Updates
Get notified of breaking news, exclusive insights, and must-see stories!

ಮಾಹಿತಿ ಹಕ್ಕು ಕಾಯ್ದೆ ವಿಚಾರದಲ್ಲಿ ಈ ಬದಲಾವಣೆ ಆಗಬೇಕು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Right to Information Act: ಮಾಹಿತಿ ಹಕ್ಕು ಕಾಯ್ದೆ ಮೊದಲಿನಂತೆ ಇಲ್ಲ. ಈಗ ಮಾಹಿತಿ ಹಕ್ಕು ಕಾಯ್ದೆ ಹಲ್ಲು ಕಿತ್ತ ಹಾವಿನಂತೆ ಆಗಿದೆ ಎಂದು ಕೆಲವರು ದೂರುತ್ತಿರುವುದು ಇದೆ. ಇದರ ನಡುವೆ ಮಾಹಿತಿ ಹಕ್ಕು ಕಾಯ್ದೆ ದುರುಪಯೋಗವಾಗುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಮಾಹಿತಿ ಹಕ್ಕು ಅಧಿನಿಯಮ-20 ವರ್ಷಗಳ ಪೂರೈಕೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆಡಳಿತದ ಎಲ್ಲಾ ಹಂತಗಳಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸಿ ಇದರಿಂದ ಪಾರದರ್ಶಕತೆ ಸ್ವಯಂಚಾಲಿತವಾಗಿ ಸ್ಥಾಪನೆಯಾಗುತ್ತದೆ ಎಂದಿದ್ದಾರೆ. ಮುಂದುವರಿದು ಮಾಹಿತಿ ಹಕ್ಕು ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸುವುದು ಮತ್ತು ಸರಳಗೊಳಿಸುವುದು, ಮಾಹಿತಿ ಆಯೋಗಗಳ ಸ್ವಾತಂತ್ರ್ಯ ಮತ್ತು ಸಾಮರ್ಥ್ಯವನ್ನು ಹೆಚ್ಚಿಸುವುದು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ, ಆಡಳಿತದಲ್ಲಿ ಪಾರದರ್ಶಕತೆಯನ್ನು "ಕಾನೂನು ಬಾಧ್ಯತೆ"ಯನ್ನಾಗಿ ಮಾಡದೆ ನೈತಿಕ ಸಂಸ್ಕೃತಿಯನ್ನಾಗಿ ಮಾಡುವುದು ಇಂದಿನ ಅಗತ್ಯವಾಗಿದೆ ಎಂದರು.

Governor Thawar Chand Gehlot says more awareness is needed regarding the Right to Information Act

ಮಾಹಿತಿ ಹಕ್ಕು ಕಾಯ್ದೆಯು ಕೆಲವು ಸವಾಲುಗಳನ್ನು ಎದುರಿಸುತ್ತಿದೆ. ಕಾಯ್ದೆಯ ದುರುಪಯೋಗ, ಕಚೇರಿಗಳ ಮೇಲೆ ಹೆಚ್ಚುತ್ತಿರುವ ಹೊರೆ ಮತ್ತು ಸಾರ್ವಜನಿಕ ಅರಿವಿನ ಕೊರತೆ. ನಾವು ಮಾಹಿತಿ ಹಕ್ಕು ಕಾಯ್ದೆಯ ಶಕ್ತಿಯನ್ನು ಅರ್ಥಮಾಡಿಕೊಳ್ಳಬೇಕು, ಅದರ ದುರುಪಯೋಗವನ್ನು ತಡೆಯಬೇಕು ಮತ್ತು ಈ ಹಕ್ಕು ಪ್ರತಿಯೊಬ್ಬ ಸಾರ್ವಜನಿಕರು ಪರಿಣಾಮಕಾರಿಯಾಗಿ ತಲುಪುವಂತೆ ನೋಡಿಕೊಳ್ಳಬೇಕು. ಆಡಳಿತದ ಎಲ್ಲಾ ಹಂತಗಳಲ್ಲಿ ಮಾಹಿತಿ ತಂತ್ರಜ್ಞಾನದ ಬಳಕೆಯನ್ನು ಹೆಚ್ಚಿಸುವುದರಿಂದ ಪಾರದರ್ಶಕತೆಯ ಜೊತೆಗೆ ಸಾರ್ವಜನಿಕ ಜಾಗೃತಿಯನ್ನು ಮತ್ತಷ್ಟು ಬಲಪಡಿಸುತ್ತದೆ. ಇದರಿಂದ ಪ್ರತಿಯೊಬ್ಬರೂ "ಮಾಹಿತಿ ಹಕ್ಕು" ತನ್ನ ಹಕ್ಕು ಎಂದು ತಿಳಿಯುತ್ತಾನೆ ಎಂದು ಹೇಳಿದರು.

ಮಾಹಿತಿ ಹಕ್ಕು ಕಾಯ್ದೆ, 2005' ಪ್ರಜಾಪ್ರಭುತ್ವದ ಚೈತನ್ಯವನ್ನೇ ಸಬಲಗೊಳಿಸುವ ಮತ್ತು ಸರ್ಕಾರ ಮತ್ತು ನಾಗರಿಕರ ನಡುವೆ ಹೊಣೆಗಾರಿಕೆ, ಪಾರದರ್ಶಕತೆ ಮತ್ತು ನಂಬಿಕೆಗೆ ಅಡಿಪಾಯ ಹಾಕುವ ಜನರ ಹಕ್ಕಾಗಿದೆ. ಆರ್‍ಟಿಐ ಕಾಯ್ದೆಯು ಪ್ರಜಾಪ್ರಭುತ್ವವನ್ನು ಬಲಪಡಿಸುವಂತಹ ಕಾನೂನು ನಿಬಂಧನೆ ಮತ್ತು ಅಡಿಪಾಯ ಎರಡೂ ಆಗಿದೆ. ಇದು ಸಾರ್ವಜನಿಕರು ಮತ್ತು ಸರ್ಕಾರದ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದಿದ್ದಾರೆ.

ಅಲ್ಲದೇ ಪ್ರಜಾಪ್ರಭುತ್ವದ ನಿಜವಾದ ಶಕ್ತಿ ಜನರಲ್ಲಿದೆ. ಸಾರ್ವಜನಿಕರು ಜಾಗೃತರಾಗಿದ್ದರೆ, ಆಡಳಿತವು ಸ್ವಯಂಚಾಲಿತವಾಗಿ ಜವಾಬ್ದಾರಿಯುತವಾಗುತ್ತದೆ. "ಮಾಹಿತಿ ಹಕ್ಕು" ಈ ಅರಿವಿನ ಮೂಲಾಧಾರವಾಗಿದೆ; ಇದು ನಾಗರಿಕರಿಗೆ ಅಧಿಕಾರ ನೀಡುತ್ತದೆ ಮತ್ತು ಆಡಳಿತವನ್ನು ಜವಾಬ್ದಾರಿಯುತವಾಗಿಸುತ್ತದೆ. ಕಳೆದ ಎರಡು ದಶಕಗಳಲ್ಲಿ, ಮಾಹಿತಿ ಹಕ್ಕು ಕಾಯ್ದೆಯು ಆಡಳಿತದ ಕಾರ್ಯನಿರ್ವಹಣೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ತಂದಿದೆ. ಹೆಚ್ಚಿದ ಪಾರದರ್ಶಕತೆ, ಭ್ರಷ್ಟಾಚಾರವನ್ನು ನಿಗ್ರಹಿಸುವುದು, ಸಾರ್ವಜನಿಕ ಭಾಗವಹಿಸುವಿಕೆಯನ್ನು ಬಲಪಡಿಸುವುದು ಮತ್ತು ಆಡಳಿತ ಸುಧಾರಣೆಗಳನ್ನು ತಂದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮುಂಬರುವ ದಿನಗಳಲ್ಲಿ ಈ ಹಕ್ಕನ್ನು ಮತ್ತಷ್ಟು ಬಲಪಡಿಸುವುದು ಹೇಗೆ ಎಂಬುದರ ಕುರಿತು ಚಿಂತನಶೀಲ ಸಭೆ ನಡೆಸುವ ಅವಶ್ಯಕತೆಯಿದೆ. ಈ ಕಾಯ್ದೆಯ ಅನುಷ್ಠಾನದಲ್ಲಿ ಉದ್ಭವಿಸುವ ಸಮಸ್ಯೆಗಳಿಗೆ ಸಕಾರಾತ್ಮಕ ಪರಿಹಾರವನ್ನು ಕಂಡುಕೊಳ್ಳಲು ಪ್ರಯತ್ನಿಸಬೇಕೆಂದು ಸರ್ಕಾರ ಮತ್ತು ಮಾಹಿತಿ ಆಯೋಗವನ್ನು ವಿನಂತಿಸುತ್ತೇನೆ ಎಂದಿರುವ ಅವರು, ಆರ್‌ಟಿಐ ಆಯುಕ್ತರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಬಾಕಿ ಇರುವ ತ್ವರಿತವಾಗಿ ಮೇಲ್ಮನೆ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+