ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿದ ಸಲಹೆ ಏನು?
ಬೆಂಗಳೂರು, ಜೂನ್ 3 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಮತ್ತೊಮ್ಮೆ ಕಿವಿಹಿಂಡಿ ಕಳಿಸಿದ್ದಾರೆ. ಎಡಿಜಿಪಿ ರವೀಂದ್ರನಾಥ್ ಪ್ರಕರಣ, ಕಸ ವಿಲೇವಾರಿ ಸಮಸ್ಯೆ ಮುಂತಾದವುಗಳ ಕುರಿತು ಮಾತುಕತೆ ನಡೆಸಿರುವ ರಾಜ್ಯಪಾಲರು, ಸರ್ಕಾರ ಪದೇ ಪದೇ ಎಡವುತ್ತಿರುವುದು ಸರಿಯಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಜಭವನಕ್ಕೆ ರಾಜ್ಯಪಾಲ ಹಂಸರಾಜ್ ಭಾರದ್ವಾಜ್, ಸರ್ಕಾರದ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಸದ್ಯ ಭಾರೀ ವಿವಾದ ಎದ್ದಿರುವ ಎರಡು ಪ್ರಕರಣಗಳ ಬಗ್ಗೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. [ಪೊಲೀಸರ ಗಲಾಟೆ: ಸರಕಾರದ ಕಿವಿಹಿಂಡಿದ ಗವರ್ನರ್]

ಎಡಿಜಿಪಿ ಪ್ರಕರಣದ ಕುರಿತು ಅಸಮಾಧಾನ ವ್ಯಕ್ತಪಡಿಸಿದ ರಾಜ್ಯಪಾಲರು, ಮೊದಲು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದರೆ, ದೊಡ್ಡ ವಿವಾದವಾಗುತ್ತಿರಲಿಲ್ಲ. ಮಾಧ್ಯಮಗಳಲ್ಲಿ ಈ ಕುರಿತು ಸುದ್ದಿ ಪ್ರಸಾರವಾಗುತ್ತಿರುವುದು ಕರ್ನಾಟಕ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತಂದಿದೆ ಎಂದು ಅತೃಪ್ತಿ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.
ಬಿಬಿಎಂಪಿ ಏನು ಮಾಡುತ್ತಿದೆ? : ಬೆಂಗಳೂರು ಕಸದ ಸಮಸ್ಯೆ ಬಗ್ಗೆ ಸಿದ್ದರಾಮಯ್ಯ ಅವರ ಬಳಿ ಮಾಹಿತಿ ಪಡೆದ ರಾಜ್ಯಪಾಲರು ನಗರದ ಕಸದ ಸಮಸ್ಯೆ ಬಗೆಹರಿಸಲು ಶಾಶ್ವತ ಪರಿಹಾರವನ್ನು ಹುಡುಕಬೇಕೆಂದು ಸಲಹೆ ನೀಡಿದ್ದಾರೆ. ಕಸದ ಸಮಸ್ಯೆ ಬಗೆಹರಿಸಲಾರದ ಬಿಬಿಬಿಎಂಪಿ ಏನು ಮಾಡುತ್ತಿದೆ ? ಎಂದು ಎಚ್.ಆರ್.ಭಾರದ್ವಾಜ್ ಪ್ರಶ್ನಿಸಿದ್ದಾರೆ.
ಮುಖ್ಯಮಂತ್ರಿಗಳ ಉತ್ತರ : ಸಿಎಂ ಸಿದ್ದರಾಮಯ್ಯ ಎಡಿಜಿಪಿ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದ್ದು, ತ್ವರಿತವಾಗಿ ತನಿಖೆ ಮುಕ್ತಾಯಗೊಳ್ಳಲಿದೆ. ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಕಸದ ಸಮಸ್ಯೆ ನಿವಾರಣೆ ಬಗ್ಗೆ ಬಿಬಿಎಂಪಿ ಜತೆ ಚರ್ಚಿಸಲಾಗಿದೆ ಎಂದು ರಾಜ್ಯಪಾಲರಿಗೆ ಉತ್ತರ ನೀಡಿದ್ದಾರೆ.
ಸರ್ಕಾರ ಪದೇ ಪದೇ ಇಂತಹ ವಿವಾದಗಳಿಂದ ಸುದ್ದಿಯಾಗಬಾರದು ಈ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯಪಾಲರು ಸಲಹೆ ನೀಡಿದ್ದಾರೆ. ಅಂದಹಾಗೆ ರಾಜ್ಯಪಾಲರು ಪದೇ ಪದೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರ ಅವಧಿ ಜೂನ್ 29ಕ್ಕೆ ಕೊನೆಗೊಳ್ಳಲಿದ್ದು, ನಂತರ ಕರ್ನಾಟಕಕ್ಕೆ ಹೊಸ ರಾಜ್ಯಪಾಲರು ನೇಮಕವಾಗಲಿದ್ದಾರೆ.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications