ಬ್ರಾಹ್ಮಣರ ವಿರುದ್ದ ದಲಿತರು ತಿರುಗಿ ಬೀಳಲಿದ್ದಾರೆ
ಬೆಂಗಳೂರು, ಜೂ 14: ಎಲ್ಲಾ ಜಾತಿ ವರ್ಗಗಳೂ ಸಮಾನತೆಯಿಂದ ಬದುಕುವ ದಿನ ಬರಬೇಕು. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಸಮಾಜಕ್ಕಿದು ದುಷ್ಪರಿಣಾಮ ಬೀರಲಿದೆ. ಅಸ್ಪೃಶ್ಯತೆ ಹೀಗೇ ಮುಂದುವರಿದರೆ ದಲಿತರು ಬ್ರಾಹ್ಮಣರ ವಿರುದ್ದ ತಿರುಗಿ ಬೀಳಲಿದ್ದಾರೆಂದು ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಎಚ್ಚರಿಕೆ ನೀಡಿದರು.
ನಗರದದ ಗಾಂಧಿ ಭವನದಲ್ಲಿ ಶನಿವಾರ (ಜೂ 14) ಹಮ್ಮಿಕೊಂಡಿದ್ದ ಮೈಲಾರ ಮಹದೇವ ದತ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ರಾಜ್ಯಪಾಲರು, ಸಮಾನತೆಯ ಸಮಾಜ ನಿರ್ಮಾಣ ಆಗಬೇಕೆನ್ನುವುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಕನಸು ಕೂಡಾ ಆಗಿತ್ತು ಎಂದು ನುಡಿದರು.

ರಾಜ್ಯದಲ್ಲಿ ಧಾರ್ಮಿಕ ಮುಖಂಡರು ಮತ್ತು ಸ್ವಾಮೀಜಿಗಳಿಗೆ ಬರವಿಲ್ಲ. ಅಸ್ಪೃಶ್ಯತೆ ವಿರುದ್ದ ಇವರು ಧ್ವನಿ ಎತ್ತಿ ಸಮಾಜದಲ್ಲಿ ಸಮಾನತೆ ತರುವ ನಿಟ್ಟಿನಲ್ಲಿ ಸಹಕರಿಸಲಿ ಎಂದು ರಾಜ್ಯಪಾಲರು ಸಲಹೆ ನೀಡಿದರು. [ಬ್ರಾಹ್ಮಣರನ್ನು ಕಂಡರೆ ನಗಬೇಕೋ ಅಳಬೇಕೋ!]
ಭಾರತದ ಸಂವಿಧಾನದಲ್ಲಿ ಅಸ್ಪೃಶ್ಯತೆಗೆ ನಿಷೇಧವಿದೆ. ಆದರೂ, ಅಲ್ಲಲ್ಲಿ ಅದರಲ್ಲೂ ಗ್ರಾಮೀಣ ಭಾಗದಲ್ಲಿ ಇದರ ಆಚರಣೆಗಳು ನಡೆಯುತ್ತಲೇ ಬರುತ್ತಿದೆ. ಗ್ರಾಮೀಣ ಭಾಗಗಳಲ್ಲಿ ಧಾರ್ಮಿಕ ಮುಖಂಡರ ಮತ್ತು ಮಠಾಧೀಶರ ಮಾತಿಗೆ ಹೆಚ್ಚಿನ ಒತ್ತು ಇರುತ್ತದೆ. ಸ್ವಾಮೀಜಿಗಳು ಅಸ್ಪೃಶ್ಯತೆಯನ್ನು ಹೋಗಲಾಡಿಸಲು ಯಾಕೆ ಮುಂದೆ ಬರಬಾರದೆಂದು ಭಾರದ್ವಾಜ್ ಪ್ರಶ್ನಿಸಿದರು.
ಜಾತಿರಹಿತ ಸಮಾಜ ನಿರ್ಮಾಣವಾಗಬೇಕೆನ್ನುವುದು ನನ್ನ ಕನಸು. ಈ ಕನಸನ್ನು ನನಸಾಗಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕೆಂದು ರಾಜ್ಯಪಾಲರು ಕೇಳಿ ಕೊಂಡರು.
ಗಾಂಧೀಜಿ ನಮಗೆ ಸ್ವಾತಂತ್ರ್ಯ ತಂದು ಕೊಟ್ಟರು. ಇಲ್ಲದಿದ್ದರೆ ನಾವು ಇಂದಿಗೂ ಬ್ರಿಟಿಷರ ಗುಲಾಮಗಿರಿಯಲ್ಲಿ ಬದುಕಬೇಕಾಗಿತ್ತು. ದೇಶದಲ್ಲಿ ವರ್ಣಭೇದದ ಆಧಾರದ ಮೇಲೆ ವಿಭಾಗಿಸುವುದು ಸರಿಯಲ್ಲ.
ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ದಲಿತರು ಬ್ರಾಹ್ಮಣರ ವಿರುದ್ದ ತಿರುಗಿ ಬೀಳುವ ದಿನ ದೂರವಿಲ್ಲ ಎಂದು ರಾಜ್ಯಪಾಲ ಭಾರದ್ವಾಜ್ ಎಚ್ಚರಿಸಿದರು.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications