ಜ.22ರಿಂದ 30ರವರೆಗೆ ಜಂಟಿ ಅಧಿವೇಶನ
ಬೆಂಗಳೂರು, ಜ.8 : ಬಜೆಟ್ ಅಧಿವೇಶನಕ್ಕೂ ಮೊದಲು ವಿಧಾನ ಮಂಡಲದ ಜಂಟಿ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ. ಜ.22ರಿಂದ 30ರವರೆಗೆ ಅಧಿವೇಶನ ನಡೆಯಲಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ. ಜಯಚಂದ್ರ, ಜಂಟಿ ಸದನದ ಕುರಿತು ವಿವರಗಳನ್ನು ನೀಡಿದರು. ಜಂಟಿ ಅಧಿವೇಶನದ ದಿನಾಂಕವನ್ನು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಬೇಕಿತ್ತು. ಆದರೆ, ಸಿಎಂ ದೆಹಲಿಗೆ ತೆರಳುವುದರಿಂದ, ವಿಳಂಬವಾಗತ್ತದೆ ಎಂಬ ಕಾರಣಕ್ಕೆ ಅವರೊಂದಿಗೆ ಚರ್ಚಿಸಿ, ದಿನಾಂಕ ನಿಗದಿಗೊಳಿಸಲಾಗಿದೆ ಎಂದು ಹೇಳಿದರು.

ಜ.22ರಿಂದ 30ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಜಂಟಿ ಅಧಿವೇಶನದ ಮೊದಲ ದಿನವಾದ ಜ.22ರಂದು ರಾಜ್ಯಪಾಲರು ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಕಲಾಪಗಳು ನಡೆಯಲಿವೆ ಎಂದು ಸಚಿವ ಟಿ.ಬಿ.ಜಯಚಂದ್ರ ಮಾಹಿತಿ ನೀಡಿದರು.
ಫೆಬ್ರವರಿಯಲ್ಲಿ ಬಜೆಟ್ ಅಧಿವೇಶನ : ಬಜೆಟ್ ಅಧಿವೇಶನವನ್ನು ಒಂದು ತಿಂಗಳು ನಡೆಸಬೇಕಿದೆ. ಆದರೆ, ಲೋಕಸಭೆ ಚುನಾವಣೆಗೆ ಮಾರ್ಚ್ ಮೊದಲ ವಾರ ನೀತಿ ಸಂಹಿತೆ ಜಾರಿಗೆ ಬರುವ ಸಾಧ್ಯತೆಯಿದೆ. ಆದ್ದರಿಂದ ಜಂಟಿ ಅಧಿವೇಶನವನ್ನು ಜನವರಿಯಲ್ಲಿ ನಡೆಸಿ ಫೆಬ್ರವರಿ 2ನೇ ವಾರದಲ್ಲಿ ಬಜೆಟ್ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ ಎಂದ ಹೇಳಿದರು.
ಗೋಡೆ ಒಡೆಯುವುದು ಸಂಸ್ಕೃತಿ ಅಲ್ಲ : ಸಚಿವರು ತಮ್ಮ ಕಚೇರಿ ವಿಸ್ತರಣೆಗಾಗಿ ವಿಧಾನಸೌಧದಲ್ಲಿ ಗೋಡೆ ಒಡೆಯುವುದು ಒಳ್ಳೆಯ ಸಂಸ್ಕೃತಿ ಅಲ್ಲ. ಸಚಿವರ ಈ ತೀರ್ಮಾನ ಸರಿಯಿಲ್ಲ. ವಿಧಾನಸೌಧದಲ್ಲಿ ಈ ರೀತಿ ಗೋಡೆ ಕೆಡಹುವುದು ಗಂಭೀರ ವಿಚಾರ. ಆದ್ದರಿಂದ, ಸ್ಪೀಕರ್ ಅಧ್ಯಕ್ಷತೆಯಲ್ಲಿರುವ ವಿಶೇಷ ಮಂಡಳಿಯು ಈ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಟಿ.ಬಿ.ಜಯಚಂದ್ರ ತಿಳಿಸಿದರು. [ವಿಧಾನಸೌಧದ ಗೋಡೆ ಒಡೆದ ಸಚಿವ ಆಂಜನೇಯ]
-
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications