ಬೆಂಗಳೂರಿನ ಗತವೈಭವ ಸಾರುವ ಫಲಪುಷ್ಪ ಪ್ರದರ್ಶನಕ್ಕೆ ಸಾಕ್ಷಿಯಾದ ರಾಜ್ಯಪಾಲರು
ಬೆಂಗಳೂರು,ಜನವರಿ21: ಬೆಂಗಳೂರು ನಗರದ ಇತಿಹಾಸ ವಿಷಯಾಧಾರಿತ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ-2023ಕ್ಕೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಸಾಕ್ಷಿಯಾದರು.
ಶುಕ್ರವಾರ ನಗರದ ಲಾಲ್ ಬಾಗ್ ಗೆ ಭೇಟಿ ನೀಡಿದ ಅವರು, ಗಣರಾಜ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಫಲಫುಷ್ಪ ಪ್ರದರ್ಶನದಲ್ಲಿ ದೇಶದ ವಿವಿಧ ಬಗೆಯ ಪುಷ್ಪಗಳ ಮೂಲಕ ನಿರ್ಮಿಸಲಾದ ಮಣ್ಣಿನ ಕೋಟೆ, ಕೆಂಪೇಗೌಡ ಗೋಪುರಗಳು, ಟಿಪ್ಪು ಸುಲ್ತಾನನ ಬೇಸಿಗೆ ಅರಮನೆ, ಹೈಕೋರ್ಟ್ ಕಟ್ಟಡ, ಬೇಗೂರು ಶಾಸನ ಮತ್ತು ಬೆಂಗಳೂರು ಅರಮನೆ ಸೇರಿದಂತೆ ಸುಂದರವಾಗಿ ಮೂಡಿ ಬಂದಿರುವ ಹಾಗೂ ಗತವೈಭವ ಸಾರುವ ಪ್ರತಿಕೃತಿಗಳನ್ನು ವೀಕ್ಷಿಸಿದರು.
ನಂತರ ತೋಟಗಾರಿಕೆ ಇಲಾಖೆಯ ಈ ಕಾರ್ಯಕ್ಕೆ ಪ್ರಶಂಸಿದ ಅವರು ಅಧಿಕಾರಿಗಳು, ಸಿಬ್ಬಂದಿಗಳು, ಪ್ರದರ್ಶನಕಾರರು ಹಾಗೂ ಎಲ್ಲಾ ಬೆಳೆಗಾರರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ತೋಟಗಾರಿಕೆ ನಿರ್ದೇಶಕರಾದ ಶ್ರೀ ನಾಗೇಂದ್ರ ಪ್ರಸಾದ್.ಕೆ, ಲಾಲ್ ಬಾಗ್ ನ ಕಾರ್ಯನಿರ್ವಾಹಕ ನಿರ್ದೇಶಕ ಪರಶಿವಮೂರ್ತಿ ಕೆ.ಎಂ ಸೇರಿದಂತೆ ಮುಂತಾದ ಅಧಿಕಾರಿಗಳು ಉಪಸ್ಥಿತರಿದ್ದರು.

ಇನ್ನೂ ಈ ಬಾರಿಯೂ ಅದ್ದೂರಿ ಫಲಪುಷ್ಪಪ್ರದರ್ಶನಕ್ಕೆ ಸಿದ್ದಗೊಂಡಿದ್ದು, ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ಬೆಂಗಳೂರು ನಗರದ ಚಿತ್ರಣ ಕಂಗೊಳಿಸಲಿದೆ. ಲಾಲ್ ಬಾಗ್ ನಲ್ಲಿ 1,500 ವರ್ಷಗಳ ಬೆಂಗಳೂರು ಇತಿಹಾಸದ ಚಿತ್ರಣ ಸೃಷ್ಟಿಯಾಗಲಿದ್ದು, ವರ್ಟಿಕಲ್ ಗಾರ್ಡನ್ ರೂಪದಲ್ಲಿ ಐತಿಹಾಸಿಕ ಬೆಂಗಳೂರು ಗಡಿ ಗೋಪುರ ಅನಾವರಣಗೊಂಡಿದೆ.ಇಂದಿನಿಂದ ಆರಂಭವಗಿರುವ ಫಲಪುಷ್ಪ ಪ್ರದರ್ಶನ 10 ದಿನ ಜ. 30ರವರೆಗೆ ನಡೆಯಲಿದೆ.

ಇನ್ನೂ ಟಿಕೆಟ್ ದರವನ್ನು ಹೆಚ್ಚಿಸಲಾಗಿಲ್ಲ.ವಯಸ್ಕರಿಗೆ ಸಾಮಾನ್ಯ ದಿನಗಳಲ್ಲಿ 70 ರೂಪಾಯಿ, ರಾಜಾ ದಿನಗಳಲ್ಲಿ 75 ರೂಪಾಯಿ ನಿಗದಿ ಮಾಡಲಾಗಿದೆ.ಇನ್ನೂ 12 ವರ್ಷ ಒಳಗಿನ ಮಕ್ಕಳಿಗೆ ಎಲ್ಲಾ ದಿನಗಳಲ್ಲಿ 30 ರೂಪಾಯಿ ಫಿಕ್ಸ್ ಮಾಡಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ನಾಲ್ಕು ಗೇಟ್ ಗಳಲ್ಲಿಯೂ ಟಿಕೆಟ್ ಕೌಂಟರ್ ವ್ಯವಸ್ಥೆ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
-
Samarth Shamanur: ದಾವಣಗೆರೆ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಫೈಟ್ ಅಂತ್ಯ: ಶಾಮನೂರು ಕುಟುಂಬದ ಕುಡಿ ಸಮರ್ಥ್ ಕಣಕ್ಕೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications