ಒಳಮೀಸಲಾತಿ: ಸಿದ್ದರಾಮಯ್ಯನವರು ಸುಳ್ಳು ಹೇಳಿ ಮೋಸ ಮಾಡುವುದರಲ್ಲಿ ನಿಸ್ಸೀಮರು: ಗೋವಿಂದ ಕಾರಜೋಳ
ಬೆಂಗಳೂರು, ಜುಲೈ 29: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುಳ್ಳು ಹೇಳಿ ಮೋಸ ಮಾಡುವುದರಲ್ಲಿ ನಿಸ್ಸೀಮರು ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಒಳಮೀಸಲಾತಿ ವಿಚಾರವಾಗಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದುರುದ್ದೇಶ ಹಾಗೂ ಎಸ್ಸಿ ಜನಾಂಗದ ಮಧ್ಯೆ ಗೊಂದಲ ಸೃಷ್ಟಿಸಲು ಕೇಂದ್ರ ಸರಕಾರ ಹಾಗೂ ಹಿಂದಿನ ಬಿಜೆಪಿ ರಾಜ್ಯ ಸರಕಾರದ ವಿರುದ್ಧ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೂ ಎಸ್ಸಿ ಸಮುದಾಯದ ಒಳಮೀಸಲಾತಿ ವಿಚಾರ ಕುರಿತು ಲೋಕಸಭೆಯಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿಯವರು, ಸಂವಿಧಾನದ ಆರ್ಟಿಕಲ್ 341 ಅಡಿಯಲ್ಲಿ ಯಾವುದೇ ಒಳಮೀಸಲಾತಿಗೆ ಸ್ಪಷ್ಟ ನಿರ್ದೇಶನ ಇಲ್ಲ ಎಂಬ ವಿಚಾರ ಪ್ರಸ್ತಾಪಿಸಿ ಪ್ರಶ್ನೆಗೆ ಸೀಮಿತ ಉತ್ತರ ಕೊಟ್ಟಿದ್ದಾರೆ. ಆದರೆ ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೂಬೆ ಕುರಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಈ ಹಿಂದೆ ರಾಜ್ಯದ ಮುಖ್ಯಮಂತ್ರಿಯಾಗಿ 2013 ರಿಂದ 2018ರವರೆಗೂ ಅವಕಾಶ ಇತ್ತು. ಈಗಲೂ ಅವರಿಗೆ ರಾಜ್ಯದ ಜನರು ಮುಖ್ಯಮಂತ್ರಿ ಮಾಡಿ ಅವಕಾಶ ಕೊಟ್ಟಿದ್ದಾರೆ. ಎಸ್ಸಿ ಒಳಮೀಸಲಾತಿಗಾಗಿ ಅಸ್ಪೃಶ್ಯ ಸಮಾಜದ ಕೆಲವು ಪಂಗಡದವರು ಸುಮಾರು 30 ವರ್ಷಗಳಿಂದ ಹೋರಾಟ ಮಾಡುತ್ತಿದ್ದರು. ಅವರಿಗೆ ಸಾಮಾಜಿಕ ನ್ಯಾಯ ನೀಡಲು, 101 ಜಾತಿಗೆ ಅನ್ಯಾಯ ಆಗದ ರೀತಿಯಲ್ಲಿ ಒಳ ಮೀಸಲಾತಿ ಕೊಡಬೇಕಿತ್ತು ಎಂದು ಹೇಳಿದರು.

ಇನ್ನೂ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಮ್ಮ ಸರಕಾರ ಇದ್ದಾಗ ಮಾಧುಸ್ವಾಮಿಯವರ ಅಧ್ಯಕ್ಷತೆಯಲ್ಲಿ ಕ್ಯಾಬಿನೆಟ್ ಉಪ ಸಮಿತಿ ರಚಿಸಲಾಗಿತ್ತು. ಅಲ್ಲಿ ನಿರ್ಣಯಿಸಿ ಜನಸಂಖ್ಯೆಗೆ ಅನುಗುಣವಾಗಿ 101 ಜಾತಿಗೆ ಅನ್ಯಾಯ ಆಗಲಾರದ ರೀತಿಯಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದೆವು. ರಾಜ್ಯಪಾಲರ ಅನುಮೋದನೆ ಪಡೆದು ಇದನ್ನು ಕಳಿಸಿದ್ದೆವು ಎಂದು ತಿಳಿಸಿದರು.
ಇನ್ನೂ ನಾವು ಮೋಸ ಮಾಡಿದ್ದಾಗಿ ಸಿದ್ದರಾಮಯ್ಯರು ಹೇಳುತ್ತಿದ್ದಾರೆ. ಸ್ವಾತಂತ್ರ್ಯ ಬಂದಾಗಿನಿಂದ ಜನರಿಗೆ ಕಾಂಗ್ರೆಸ್ಸಿನಿಂದ ಮೋಸ ಆಗುತ್ತಿದೆ. 4 ಗುಂಪುಗಳಾಗಿ ವಿಂಗಡಿಸಿ ಸಂವಿಧಾನ ತಿದ್ದುಪಡಿಗೆ ಶಿಫಾರಸು ಮಾಡಿದ್ದೆವು. ನಮ್ಮ ಪಕ್ಷ, ನಮ್ಮ ಸರಕಾರ, ಆರೆಸ್ಸೆಸ್ ಸಾಮಾಜಿಕ ನ್ಯಾಯದ ಪರವಾಗಿದೆ ಎಂದು ಸ್ಪಷ್ಟಪಡಿಸಿದರು. ಸಾಮಾಜಿಕ ನ್ಯಾಯದ ಜೊತೆ ಸಂವಿಧಾನದ ಆಶಯದಲ್ಲಿ ನಡೆಯುತ್ತೇವೆ ಎಂದು ಹೇಳಿದರು.
ಇತ್ತ ಈ ವಿಚಾರವಾಗಿ ವಿಧಾನ ಪರಿಷತ್ ಸದಸ್ಯರು ಹಾಗೂ ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ,ಸಿದ್ದರಾಮಯ್ಯನವರು ದಲಿತರಿಗೆ ಅನ್ಯಾಯ, ಮೋಸ ಎಂದಿದ್ದಾರೆ. ವಾಸ್ತವವಾಗಿ ದಲಿತರು, ಪರಿಶಿಷ್ಟ ಜಾತಿಯವರಿಗೆ ಕಾಂಗ್ರೆಸ್ ಅನ್ಯಾಯ ಮಾಡುತ್ತಿದೆ. ಪರಿಶಿಷ್ಟ ಜಾತಿಗೆ ಶೇ 15ರಿಂದ 17, ಪರಿಶಿಷ್ಟ ಪಂಗಡಕ್ಕೆ 3ರಿಂದ 7ಕ್ಕೆ ಮೀಸಲಾತಿಯನ್ನು ನಾವು (ಬಿಜೆಪಿ) ಹೆಚ್ಚಿಸಿದ್ದೆವು. ನ್ಯಾ. ಸದಾಶಿವ ಆಯೋಗದ ವರದಿಗೆ ಮೊದಲ ಅಧಿವೇಶನದಲ್ಲೇ ಅನುಮೋದನೆ ನೀಡುವುದಾಗಿ ಕಾಂಗ್ರೆಸ್ ತಿಳಿಸಿತ್ತು. ಆದರೆ, ಮೊದಲ ಅಧಿವೇಶನ ಆದರೂ ಅದನ್ನು ಮಂಡಿಸಿಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್ ಪಕ್ಷದವರು ಜನರನ್ನು ದಾರಿ ತಪ್ಪಿಸಿ ದಲಿತರು ಕಾಂಗ್ರೆಸ್ಸಿಗೆ ಮತ ಹಾಕುವಂತೆ ನೋಡಿಕೊಂಡರು. ಆದರೆ, ಅವರಿಗೆ ನ್ಯಾಯ ಕೊಡುತ್ತಿಲ್ಲ ಎಂದರಲ್ಲದೇ, ಇದಕ್ಕೆ ಉತ್ತರ ಕೊಡಿ ಎಂದು ಸಿದ್ದರಾಮಯ್ಯರನ್ನು ಆಗ್ರಹಿಸಿದರು. ಬಾಯಿಯಲ್ಲಿ ಪ್ರೇಮ ಬೇಡ. ಕಾರ್ಯದಲ್ಲಿ ಪ್ರೀತಿ ತೋರಿಸಿ ಎಂದು ಒತ್ತಾಯಿಸಿದರು. ಕೇಂದ್ರಕ್ಕೆ ಪತ್ರ ಬರೆಯಿರಿ ಎಂದು ಆಗ್ರಹಿಸಿದರು.
ಆರ್ಟಿಕಲ್ 341ಗೆ ತಿದ್ದುಪಡಿ ಮಾಡಿ ಒಳ ಮೀಸಲಾತಿ ಕೊಡುವ ವಿಚಾರ ಇದಾಗಿದೆ. ಇದೇ ವಿಷಯದಡಿ ಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದೆ. 13 ರಾಜ್ಯಗಳು ಗೊಂದಲ ಇರದ ಕಾರಣ ಒಳಮೀಸಲಾತಿ ಬೇಕಿಲ್ಲ ಎಂದಿವೆ. ಕರ್ನಾಟಕ ಸೇರಿ 7 ರಾಜ್ಯಗಳು ಒಳಮೀಸಲಾತಿ ಕೋರಿವೆ. 2-3 ರಾಜ್ಯಗಳು ತಟಸ್ಥ ನೀತಿ ಅನುಸರಿಸಿವೆ ಎಂದು ಕೇಂದ್ರ ಸಚಿವರಾದ ನಾರಾಯಣಸ್ವಾಮಿ ಅವರು ಲೋಕಸಭೆಯಲ್ಲಿ ಕೊಟ್ಟ ಉತ್ತರ ಕೊಟ್ಟ ಬಗ್ಗೆ ತಿಳಿಸಿದರು.
ನೆರೆಯ ಆಂಧ್ರ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾಗಿತ್ತು. ಹಲವು ಜಾತಿಗಳು ಕೋಷ್ಟಕದಲ್ಲಿ ಸೇರಿ ಶೆಡ್ಯೂಲ್ಡ್ ಕಾಸ್ಟ್ ಆಗಿದೆ ಎಂದಿದ್ದ ಸುಪ್ರೀಂ ಕೋರ್ಟ್, ಕೇಂದ್ರದ ಸಂವಿಧಾನದ ತಿದ್ದುಪಡಿಯನ್ನು ಸೂಚಿಸಿತ್ತು. ಪ್ರಾಥಮಿಕವಾಗಿ ಎಸ್ಸಿಯಲ್ಲಿ ಆರೇಳು ಜಾತಿಗಳಿದ್ದವು. ಅಸ್ಪೃಶ್ಯ ಜನಾಂಗಗಳಷ್ಟೇ ಇದ್ದವು. ಕಾಂಗ್ರೆಸ್ ಬೇಕಾದವರನ್ನೆಲ್ಲ ತುಂಬಿಸಿದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೇಳಿದ್ದೆವು ಎಂದು ಹೇಳಿದರು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications