ಸಿದ್ದರಾಮಯ್ಯನವರೇ ನೀವು ಕೊಡುವ ಕೋಳಿ, ಕುರಿ, ಅಕ್ಕಿ ಬೇಡ: ಮಾಜಿ ಡಿಸಿಎಂ ಹೇಳಿದ್ದೇನು?
ಬೆಂಗಳೂರು, ನವೆಂಬರ್ 27: ಸಿದ್ದರಾಮಯ್ಯನವರು ಅಕ್ಕಿ ಕೊಡ್ತೀನಿ, ಬ್ಯಾಳಿ ಕೊಡ್ತೀನಿ, ಕೋಳಿ, ಕುರಿ ಕೊಡ್ತೀನಿ ಎನ್ನುತ್ತಾರೆ. 140 ಕೋಟಿಯಲ್ಲಿ ಶೇ 25 ದಲಿತರಿರುವ ನಾವು ನಮಗೆ ಕೋಳಿ, ಕುರಿ, ಅಕ್ಕಿ ಬೇಡ. ಶಿಕ್ಷಣ ಕೊಡಿ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ದೀನದಲಿತರನ್ನು ಮತಬ್ಯಾಂಕಾಗಿ ಬಳಸಿಕೊಂಡರೇ ಹೊರತು ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಬಯಸಿದಂತೆ ಅಸ್ಪೃಶ್ಯರು ಮತ್ತು ದಲಿತರನ್ನು ಮೇಲೆತ್ತುವ ಕೆಲಸ ಮಾಡಲಿಲ್ಲ. ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಆದ್ಯತೆ ಕೊಡಲು ಹೇಳಿದ್ದರು. ಬಡತನ, ಮೂಢನಂಬಿಕೆ, ಶಿಕ್ಷಣ ವಂಚಿತರಾಗಿರುವ ದಲಿತರನ್ನು ಮೇಲೆತ್ತುವ ಕೆಲಸವನ್ನು ಯಾವತ್ತೂ ಕಾಂಗ್ರೆಸ್ ಪಕ್ಷ ಮಾಡಲಿಲ್ಲ ಎಂದು ಕಿಡಿಕಾರಿದರು.

ಇನ್ನೂ ಈ ವೇಳೆ ಮಾಜಿ ಸಚಿವ ಸಿ.ಟಿ.ರವಿ ಅವರು ಮಾತನಾಡಿ, 2015ರವರೆಗೂ ನವೆಂಬರ್ 26ರ ಈ ದಿನವನ್ನು ಲಾಡೆ ಎಂದು ಕರೆಯುತ್ತಿದ್ದರು. ಸಂವಿಧಾನ ಗೌರವ ದಿನ ಎಂದು ಅದನ್ನು ಆಚರಿಸಲು ನರೇಂದ್ರ ಮೋದಿಜೀ ಅವರು ತಿಳಿಸಿದರು. ಭಾರತರತ್ನವನ್ನು ಅವರಿಗೆ ಅವರೇ ಕೊಟ್ಟುಕೊಂಡರು. ನೈಜ ಭಾರತರತ್ನ ಡಾ. ಅಂಬೇಡ್ಕರ್ ಅವರಿಗೆ ಭಾರತರತ್ನವನ್ನು ಹಲವು ದಶಕಗಳ ಬಳಿಕ ಅಟಲ್ಜೀ ಅವರ ಪ್ರಸ್ತಾವನೆಯ ನಂತರ ಪ್ರಧಾನಿ ವಿ.ಪಿ.ಸಿಂಗ್ ಅವರು ಬಿಜೆಪಿ ಬೆಂಬಲದ ಸರಕಾರ ಇದ್ದಾಗ ನೀಡಿದ್ದರು ಎಂದರು.
ಅವರಿಗೆ ಬದುಕಿದ್ದಾಗಲೇ ಭಾರತರತ್ನ ಕೊಡಬೇಕಿತ್ತು. 33 ವರ್ಷಗಳ ವರೆಗೆ ಯಾಕೆ ಕೊಟ್ಟಿಲ್ಲ? ಅಂಬೇಡ್ಕರರಿಗೆ ಅವರ ವ್ಯಕ್ತಿತ್ವಕ್ಕೆ ತಡವಾಗಿ ನ್ಯಾಯ ಸಿಗುತ್ತಿದೆ ಎಂದು ವಿಶ್ಲೇಷಿಸಿದರು. ಅಂಬೇಡ್ಕರರ ಪಂಚತೀರ್ಥಗಳನ್ನು ಮೋದಿಜೀ ಅವರ ಸರಕಾರ ನಿರ್ಮಿಸಿದೆ. ಆದರೆ, 2004 ರಿಂದ 2014ರವರೆಗೆ ಇದ್ದ ಯುಪಿಎ ಸರಕಾರ ಈ ವಿಚಾರದತ್ತ ಯೋಚನೆಯನ್ನೂ ಮಾಡಲಿಲ್ಲ ಎಂದು ಟೀಕಿಸಿದರು.
ಮೈ ಮರೆವಿನ ಕ್ಷಣ ಘೋರ ಭೀಕರ. ರಾಷ್ಟ್ರವಿನಾಶಕೆ ದಾರಿ ಎಂಬ ಕವಿವಾಣಿಯನ್ನು ಉಲ್ಲೇಖಿಸಿದ ಅವರು, ಕುರಿ, ಕೋಳಿ ಆಸೆಗೆ ಮೈಮರೆತರೆ ಅದು ರಾಷ್ಟ್ರವಿನಾಶಕೆ ದಾರಿ ಎಂದು ಸಲಹೆ ನೀಡಿದರು.
ಮಾಜಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾತನಾಡಿ, ಪರದೇಶೀಯರ ಆಳ್ವಿಕೆಯ ನಂತರ ನಮ್ಮ ಮಾನಸಿಕತೆ ಕುಗ್ಗಿ ಹೋಗಿತ್ತು. 1929ರಲ್ಲಿ ಭಾರತಕ್ಕೆ ಒಂದು ಸಂವಿಧಾನ ಬೇಕೆಂಬ ನಿರ್ಧಾರಕ್ಕೆ ಬರಲಾಯಿತು. 1946ರಲ್ಲಿ ಸಂವಿಧಾನ ಸಮಿತಿ ರಚಿಸಿ, ಲಕ್ಷಾಂತರ ಸಲಹೆ ಸೂಚನೆ ಸ್ವೀಕರಿಸಿ, ಅಕ್ಷರಶಃ ಒಂದು ತಪಸ್ಸಿನ ಮಾದರಿಯಲ್ಲಿ ಕೆಲಸ ನಡೆಯಿತು. ವೈವಿಧ್ಯಮಯ ಜನಜೀವನ, ವಿವಿಧ ರೀತಿಯ ಸಂಸ್ಕೃತಿ, ರಾಜಪರಂಪರೆಯ ಕಟ್ಟುಪಾಡು, ನಿಯಮಾವಳಿಗಳ ಮಧ್ಯೆ ಡಾ. ಅಂಬೇಡ್ಕರ್ ಮತ್ತು ಇತರ ಸದಸ್ಯರು ಜಗತ್ತಿಗೇ ಅತ್ಯುತ್ತಮ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ
ಸಂವಿಧಾನದ ಅರಿವು ಈಗ ಹೆಚ್ಚಾಗಿದೆ. ಸಂವಿಧಾನದ ಆಶಯವನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಪೂಜ್ಯ ಭಾವನೆಯಿಂದ ಅದನ್ನು ಆಡಳಿತದಲ್ಲಿ ಅಳವಡಿಸಿಕೊಂಡಿದ್ದೇವೆ ಎಂದು ತಿಳಿಸಿದರು. ಅಂಬೇಡ್ಕರ್ ಅವರ ಜೀವನಾನುಭವವು ಈ ಸಂವಿಧಾನದಲ್ಲಿ ಸೇರಿದೆ ಎಂದರು. ಇಂದಿರಾಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು ನಮ್ಮ ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕಿ ಎಂದು ಅವರು ಅಭಿಪ್ರಾಯ ಪಟ್ಟರು.
ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಧರ್ಮದ ಮುಂದುವರೆದ ಭಾಗವೇ ಸಂವಿಧಾನ ಎಂದು ನುಡಿದರು. ಧರ್ಮವನ್ನು ಹೊರತುಪಡಿಸಿದ ಸಂವಿಧಾನ ನಮ್ಮ ದೇಶದಲ್ಲಿ ಇಲ್ಲ ಎಂದು ಅಭಿಪ್ರಾಯಪಟ್ಟರು.
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ












Click it and Unblock the Notifications