ಕರ್ನಾಟಕದಿಂದ ದಲಿತ ಕೋಟಾದಲ್ಲಿ ಇವರಿಗೆ ಕೇಂದ್ರ ಸಚಿವ ಸ್ಥಾನ ಫಿಕ್ಸ್?
ಭಾರತದ ಪ್ರಧಾನಿ ಆಗಿ ಮೋದಿ ಪ್ರಮಾಣ ವಚನ ಸ್ವೀಕರಿಸು ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ವೇಳೆ ಯಾರಿಗೆಲ್ಲಾ ಸಚಿವ ಸ್ಥಾನ ಸಿಗಬಹುದು ಎಂಬ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗುತ್ತಿದೆ. ಕರ್ನಾಟಕದ ಸಂಸದರಿಗೂ ಈ ಬಾರಿ ಬಂಪರ್ ಕಾದಿದೆ.
ಭಾನುವಾರ (ಜೂನ್ 9) ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಜೊತೆ ಇನ್ನು ಹಲವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಎನ್ಡಿಎ ಮೈತ್ರಿ ಕೂಟದ ಪಕ್ಷಗಳ ಸಂಸದರೂ ಸಹ ಈ ವೇಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಯಾರಿಗೆಲ್ಲಾ ಸಚಿವ ಸ್ಥಾನ?
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಹೀಗಾಗಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ಮಂತ್ರಿಗಿರಿ ಸಿಗುವುದು ಪಕ್ಕಾ ಎಂದು ಹೇಳಲಾಗುತ್ತಿದೆ. ಈ ಮೂಲಕ ಹಳೆಯ ಮೈಸೂರು ಭಾಗದಲ್ಲಿ ಬಿಜೆಪಿ ತನ್ನ ಹಿಡಿತವನ್ನು ಮತ್ತಷ್ಟು ಬಲ ಪಡಿಸಿಕೊಳ್ಳಿವ ಸಹಾಯವಾಗುತ್ತದೆ.
ಧಾರವಾಡ ಲೋಕಸಭಾ ಕ್ಷೇತ್ರದ ಪ್ರಹ್ಲಾದ್ ಜೋಶಿ ಅವರಿಗೆ ಕೇಂದ್ರದ ಸಚಿವರಾಗಿ ಅನುಭವ ಇದೆ. ಹೀಗಾಗಿ ಇವರಿಗೆ ಮೊದಲ ಆಯ್ಕೆ ನೀಡುವ ಸಾಧ್ಯತೆ ಇದೆ. ಇನ್ನು ಕರ್ನಾಟಕದ ಲಿಂಗಾಯತ ಮತಗಳನ್ನು ತನ್ನತ್ತ ಸೆಳೆಯಲು ಬಿಜೆಪಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಥವಾ ಬಸವಾರಜ್ ಬೊಮ್ಮಾಯಿ ಇಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಲಿಂಗಾಯತ ಮತಗಳನ್ನು ಸೆಳೆಯಲು ಬಿಜೆಪೆ ಯಾವ ಪ್ಲ್ಯಾನ್ ಮಾಡುತ್ತದೆ ಕಾದು ನೋಡಬೇಕಿದೆ.
ಕರ್ನಾಟಕಕ್ಕೆ ಎಷ್ಟು ಸ್ಥಾನ
ಕರ್ನಾಟಕದಲ್ಲಿ ಇನ್ನು ಹಲವರ ಹೆಸರುಗಳು ಸಚಿವ ಸ್ಥಾನದ ರೇಸ್ನಲ್ಲಿ ಓಡುತ್ತಿವೆ. ಅದರಲ್ಲಿ ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಹೆಸರುಗಳು ಸಹ ಕೇಳಿ ಬರುತ್ತಿವೆ. ಇನ್ನು ಚಿತ್ರದುರ್ಗದ ಸಂಸದ ಗೋವಿಂದ್ ಕಾರಜೋಳ ಅವರಿಗೂ ಈ ಬಾರಿ ಸಚಿವ ಸ್ಥಾನ ಸಿಗುವ ಚಾನ್ಸ್ ಇದೆ. ದಲಿತ ಕೋಟಾದ ಅಡಿಯಲ್ಲಿ ಇವರಿಗೆ ಕೇಂದ್ರ ಸಚಿವ ಸ್ಥಾನ ಸಿಗುವ ಚಾನ್ಸ್ ಇದೆ.
ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಡಿಕೆ ಸುರೇಶ್ ಅವರನ್ನು ಮಣಿಸಿ ಸಂಸತ್ಗೆ ಮೊದಲ ಬಾರಿ ಪ್ರವೇಶ ಪಡೆದಿರುವ ಡಾಕ್ಟರ್ ಮಂಜುನಾಥ್ ಅವರಿಗೂ ಕೇಂದ್ರ ಸಚಿವ ಸ್ಥಾನ ಸಿಗವಹುದು ಎಂದು ಹೇಳಲಾಗುತ್ತಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications