ಕರ್ನಾಟಕದಲ್ಲಿ ಫೆ.5ರಿಂದ ಚಿತ್ರಮಂದಿರ ಶೇ.100ರಷ್ಟು ಭರ್ತಿಗೆ ಅನುಮತಿ
ಬೆಂಗಳೂರು, ಫೆಬ್ರವರಿ 4: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕೊಂಚ ತಗ್ಗಿದೆ. ರಾಜ್ಯದಲ್ಲಿ ಕೊವಿಡ್-19 ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿರುವುದರ ಹಿನ್ನೆಲೆ ಮಾರ್ಗಸೂಚಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಿಕೊಳ್ಳಲಾಗಿದೆ.
ರಾಜ್ಯದಲ್ಲಿ ಫೆಬ್ರವರಿ 5ರ ಶನಿವಾರದಿಂದ ಎಲ್ಲ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನಗಳ ಭರ್ತಿಗೆ ಅನುಮತಿ ನೀಡಲಾಗಿದೆ. ಇದರ ಜೊತೆ ಜಿಮ್ ಹಾಗೂ ಸ್ವಿಮ್ಮಿಂಗ್ ಪೂಲ್ ಗಳಲ್ಲಿ ಶೇ.50ರಷ್ಟು ಜನರಿಗೆ ಮಾತ್ರ ಅವಕಾಶ ನೀಡಬೇಕು ಎನ್ನುವ ನಿರ್ಬಂಧವನ್ನು ತೆರವುಗೊಳಿಸಲಾಗಿದೆ.
ಬೆಂಗಳೂರಿನಲ್ಲಿ ಕೊವಿಜಡ್-19 ನಿಯಮಗಳ ಸಡಿಲಿಕೆ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಆ ಮೂಲಕ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮನವಿಗೆ ಸರ್ಕಾರ ಸ್ಪಂದಿಸಿದ್ದು, ಚಿತ್ರರಂಗ ಹಾಗೂ ಸಿನಿಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟಿದೆ.

ಜನವರಿ 31ರಂದು ಪಬ್, ರೆಸ್ಟೋರೆಂಟ್, ಹೋಟೆಲ್ ಗಳಿಗೆ ರಿಲೀಫ್:
ಕರ್ನಾಟಕದಲ್ಲಿ ಕಳೆದ ಜನವರಿ 31ರಿಂದ ರಾತ್ರಿ ನಿಷೇಧಾಜ್ಞೆಯನ್ನು ತೆರವುಗೊಳಿಸಲಾಗಿತ್ತು. ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾದ ಹಿನ್ನೆಲೆ ಹಲವು ನಿರ್ಬಂಧಗಳನ್ನು ಸಡಿಲಗೊಳಿಸಲಾಗಿತ್ತು. ತದನಂತರದಲ್ಲಿ ಪಬ್ ಆ್ಯಂಡ್ ರೆಸ್ಟೋರೆಂಟ್, ಹೋಟೆಲ್ಗಳಿಗೆ ಶೆ. 100 ರಷ್ಟು ಅವಕಾಶ ನೀಡಲಾಗಿತ್ತು.
ಈ ಹಿಂದಿ ಥಿಯೇಟರ್, ಜಿಮ್, ಸ್ವಿಮ್ಮಿಂಗ್ ಪೂಲ್ ನಿರ್ಬಂಧ:
ಕಳೆದ ಜನವರಿ 29ರಂದು ನಡೆಸಿದ ಸಭೆಯಲ್ಲಿ ಕೆಲವು ನಿರ್ಬಂಧಗಳನ್ನು ಮುಂದುವರಿಸಲಾಗಿತ್ತು. ಅಂದು ಸಿನಿಮಾ ಥಿಯೇಟರ್ಗಳಿಗೆ ಶೇ. 50 ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಮದುವೆಗಳಿಗೆ ಒಳಾಂಗಣದಲ್ಲಿ 200 ಜನರಿಗೆ, ಹೊರಾಂಗಣದಲ್ಲಿ 300 ಜನರಿಗೆ ಅವಕಾಶ ನೀಡಲಾಗಿದೆ. ಮಂದಿರ, ಮಸೀದಿ, ಚರ್ಚ್ಗಳಲ್ಲಿ ಸೇವೆ ಪುನಾರಂಭ ಮಾಡಬಹುದು. ಆದರೆ ಧಾರ್ಮಿಕ ಸ್ಥಳಗಳಲ್ಲಿ 50 ಜನ ಮಾತ್ರ ಒಂದೇ ಬಾರಿ ದರ್ಶನ ಪಡೆಯಬಹುದು. ಜಾತ್ರೆ, ಮೆರವಣಿಗೆ, ಧರಣಿ, ಪ್ರತಿಭಟನೆ ಧಾರ್ಮಿಕ ಉತ್ಸವಗಳಿಗೆ ನಿರ್ಬಂಧ ಹೇರಲಾಗಿದೆ. ಜಿಮ್, ಈಜುಕೊಳದಲ್ಲಿ ಶೇ. 50ರಷ್ಟು ಅವಕಾಶ ನೀಡಲಾಗಿದೆ ಅಂತ ಆರ್ ಅಶೋಕ್ ಹೇಳಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications