ಸ್ಥಳೀಯ ಸಂಸ್ಥೆ ಅಧಿಸೂಚನೆ ಜು. 4ಕ್ಕೆ: ಸರ್ಕಾರದ ಮುಚ್ಚಳಿಕೆ
ಬೆಂಗಳೂರು, ಜೂನ್ 14: ರಾಜ್ಯದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಕ್ಷೇತ್ರ ಪುನರ್ ವಿಂಗಡಣೆ ಕುರಿತಂತೆ ಜುಲೈ 4ರ ಒಳಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಎದುರು ಅಫಿಡೆವಿಟ್ ಸಲ್ಲಿಸಿದೆ.
ಭಿನ್ನಮತೀಯ ಶಾಸಕರ ಜೊತೆ ಸಭೆ ನಡೆಸಲಿರುವ ಸಿದ್ದರಾಮಯ್ಯ
ರಾಜ್ಯದ ಇನ್ನೂರಕ್ಕೂ ಅಧಿಕ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲು ಪಟ್ಟಿ ಪ್ರಕಟಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿಯು ಇತ್ಯರ್ಥಗೊಂಡಿದೆ.
ಜುಲೈ 4ರೊಳಗೆ 116 ಕಾರ್ಪೊರೇಷನ್ ಗಳಿಗೆ ಜುಲೈ 9ರೊಳಗೆ 102 ಮುನಿಸಿಪಾಲಿಟಿಗಳಿಗೆ ಕ್ಷೇತ್ರ ಮರುವಿಂಗಡಣೆ ಮಾಡಿ ಅಧಿಸೂಚನೆ ಹೊರಡಿಸಲಾಗುವುದು. ಜುಲೈ 12ರೊಳಗೆ ಅಧ್ಯಕ್ಷ-ಉಪಾಧ್ಯಕ್ಷ, ಮೇಯರ್, ಉಪಮೇಯರ್ ಮೀಸಲು ನಿಗಧಿಪಡಿಸಿ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿ ನಗರಾಭಿವೃದ್ದಿ ಇಲಾಖೆ ಹಾಗೂ ಚುನಾವಣಾ ಆಯೋಗದಿಂದ ಹೈಕೋರ್ಟ್ಗೆ ಜಂಟಿ ಜ್ಞಾಪನಾ ಪತ್ರ ಸಲ್ಲಿಕೆಯಾಗಿದೆ. ಇದನ್ನು ದಾಖಲಿಸಿಕೊಂಡು ಹೈಕೋರ್ಟ್ ಅರ್ಜಿಯನ್ನು ಇತ್ಯರ್ಥಪಡಿಸಿದೆ.