Industry: ರಾಜ್ಯದಲ್ಲಿ ವಿದೇಶಿ ಕಂಪನಿಗಳಿಂದ ₹6,450 ಕೋಟಿ ಹೂಡಿಕೆಗೆ ಅಸ್ತು, ಅಪಾರ ಉದ್ಯೋಗ ಸೃಷ್ಟಿ: ಎಂಬಿ ಪಾಟೀಲ್
ಬೆಂಗಳೂರು, ಜುಲೈ 10: ಕರ್ನಾಟಕ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ನೇತೃತ್ವದ ಉನ್ನತ ಮಟ್ಟದ ನಿಯೋಗವು ಜಪಾನ್ ಮತ್ತು ದಕ್ಷಿಣ ಕೊರಿಯಾದ ಎರಡು ವಾರಗಳ ಭೇಟಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದರ ಫಲವಾಗಿ ರಾಜ್ಯಕ್ಕೆ ಸಾವಿರಾರು ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಹರಿದು ಬರುತ್ತಿದ್ದು, ಸಹಸ್ರ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.
ಹೌದು, ಎಂಬಿ ಪಾಟೀಲ್ ಮತ್ತು ಇಲಾಖೆ ಅಧಿಕಾರಿಗಳು ವಿವಿಧ ಕಂಪನಿಗಳಿಂದ ಬಂಡವಾಳ ಆಕರ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೀಗಾಗಿ ಸದ್ಯಕ್ಕೆ ₹6,450 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಬದ್ಧತೆ ಪಡೆದುಕೊಂಡಿದೆ. ಈ ಬದ್ಧತೆ ಹಾಗೂ ಒಪ್ಪಂದಗಳ ಫಲವಾಗಿ ರಾಜ್ಯದಲ್ಲಿ 1,000 ಉದ್ಯೋಗ ಅವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.

ಜಪಾನ್ ಮತ್ತು ದಕ್ಷಿಣ ಕೋರಿಯಾ ದೇಶಗಳ ಭೇಟಿಯ ಫಲಶ್ರುತಿ ಬಗ್ಗೆ ಬುಧವಾರ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ಎಂಬಿ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ. ಜೂನ್ 24ರಿಂದ ಜುಲೈ 5ರವರೆಗಿನ ಉಭಯ ದೇಶಗಳ ಎರಡು ವಾರಗಳ ಭೇಟಿ ವೇಳೆ ಕರ್ನಾಟಕದ ನಿಯೋಗವು ಅಲ್ಲಿನ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.
ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗಾಗಿ (ಎಸ್ಎಂಇ) ಬಂಡವಾಳ ಹೂಡಿಕೆ ರೋಡ್ಷೋಗಳನ್ನು ನಡೆಸಿತು. ತಯಾರಿಕಾ ವಲಯಕ್ಕೆ ರಾಜ್ಯದಲ್ಲಿ ಇರುವ ಉತ್ತೇಜಕರ ಪೂರಕ ಸೌಲಭ್ಯಗಳ ಮಾಹಿತಿ ವಿನಿಮಯ ಮಾಡಿಕೊಂಡಿತು' ಎಂದು ಹೇಳಿದರು.
'ಇನ್ವೆಸ್ಟ್ ಕರ್ನಾಟಕ 2025' ದಲ್ಲಿ ಪಾಲ್ಗೊಳ್ಳಲು ಆಹ್ವಾನ
'35 ಉದ್ಯಮಗಳ ಪ್ರಮುಖರನ್ನು ಭೇಟಿ ಮಾಡಿದ ನಿಯೋಗವು, ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ - 'ಇನ್ವೆಸ್ಟ್ ಕರ್ನಾಟಕ 2025'ರಲ್ಲಿ ಭಾಗವಹಿಸಲು ಟೋಕಿಯೊ ಮತ್ತು ಸೋಲ್ನಲ್ಲಿ ನಡೆದ ರೋಡ್ ಷೋಗಳಲ್ಲಿ 200ಕ್ಕೂ ಹೆಚ್ಚು ಕಂಪನಿಗಳಿಗೆ ಆಹ್ವಾನ ನೀಡಲಾಯಿತು ಎಂದರು.

'ಜಪಾನ್ನಲ್ಲಿ ನಡೆದ ಸಭೆಗಳಲ್ಲಿ ರೆನೆಸಾಸ್ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್, ಟೊಯೊಟಾ ಮೋಟರ್ ಕಾರ್ಪೊರೇಷನ್, ಯಮಹಾ ಮೋಟರ್ ಕಂಪನಿ, ಸುಮಿಟೊಮೊ ಹೆವಿ ಇಂಡಸ್ಟ್ರೀಸ್, ಪ್ಯಾನಾಸೋನಿಕ್ ಎನರ್ಜಿ, ನಿಡೆಕ್ ಕಾರ್ಪೊರೇಷನ್, ನಿಸಾನ್ ಮೋಟರ್ ಕಾರ್ಪೊರೇಷನ್, ಬ್ರದರ್ ಇಂಡಸ್ಟ್ರೀಸ್, ಶಿಮಾಡ್ಜು ಕಾರ್ಪೊರೇಷನ್, ಹಿಟಾಚಿ ಮತ್ತಿತರ ಕಂಪನಿಗಳು ಪ್ರಮುಖವಾಗಿವೆ.
ದಕ್ಷಿಣ ಕೊರಿಯಾದಲ್ಲಿ ವ್ಯಾಪಾರ, ಕೈಗಾರಿಕೆ ಮತ್ತು ಇಂಧನ ಸಚಿವಾಲಯದ ಉಪ ಮಂತ್ರಿ, ಕೊರಿಯಾದ ಜಿಯೊಂಗಿ ಪ್ರಾಂತ್ಯದ ವೈಸ್ ಗವರ್ನರ್ ಮತ್ತು ಸೋಲ್ ಮೆಟ್ರೊಪಾಲಿಟನ್ ಸರ್ಕಾರದಲ್ಲಿ ಆರ್ಥಿಕ ನೀತಿಯ ಉಪ ಮೇಯರ್ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಸಭೆಗಳನ್ನು ನಡೆಸಲಾಯಿತು.
ದಕ್ಷಿಣ ಕೊರಿಯಾದಲ್ಲಿ ನಡೆದ ಸಭೆಗಳಲ್ಲಿ ಸ್ಯಾಮ್ಸಂಗ್ ಎಲೆಕ್ಟ್ರಾನಿಕ್ಸ್, ಎಲ್ಜಿ ಎನರ್ಜಿ ಸೊಲ್ಯೂಷನ್ಸ್, ಎಲ್ಎಕ್ಸ್ ಎಲೆಕ್ಟ್ರಾನಿಕ್ಸ್, ನಿಫ್ಕೊ ಕೊರಿಯಾ, ಒಸಿಐ ಹೋಲ್ಡಿಂಗ್ಸ್, ಕ್ರಾಫ್ಟನ್, ಎಚ್ವೈಎಸಿ, ಹುಂಡೈ ಮೋಟರ್ಸ್, ವೈಜಿ-1, ಹೊಯ್ಸಂಗ್ ಅಡ್ವಾನ್ಸಡ್ ಮಟೇರಿಯಲ್ಸ್ ಮುಂತಾದವು ಸೇರಿವೆʼ ಎಂದು ಸಚಿವ ಪಾಟೀಲ ವಿವರಿಸಿದರು.
ಹೂಡಿಕೆ ಬದ್ಧತೆಗಳು & ಒಪ್ಪಂದಗಳ ವಿವರ ಹೀಗಿದೆ
* ಒಸಾಕಾ ಗ್ಯಾಸ್ ಕಂಪನಿ
ಜಪಾನಿನ ಪ್ರಮುಖ ಇಂಧನ ಕಂಪನಿಯಾಗಿರುವ ಒಸಾಕಾ ಗ್ಯಾಸ್, ಮುಂದಿನ 5 ವರ್ಷಗಳಲ್ಲಿ ಅನಿಲ ವಿತರಣಾ ಮೂಲಸೌಲಭ್ಯ ವಿಸ್ತರಿಸಲು ₹5000 ಕೋಟಿ (600 ದಶಲಕ್ಷ ಡಾಲರ್) ಮೊತ್ತದ ಬಂಡವಾಳ ಹೂಡಿಕೆ ಮಾಡಲು ಒಪ್ಪಿದೆ.
* ಡಿಎನ್ ಸೊಲ್ಯೂಷನ್ಸ್ ಕಂಪನಿ
ಕೊರಿಯಾದ ಮಷಿನ್ ಟೂಲ್ಸ್ ಕಂಪನಿಯಾಗಿರುವ ಡಿಎನ್ ಸೊಲ್ಯೂಷನ್ಸ್, ಕೈಗಾರಿಕಾ ಯಂತ್ರೋಪಕರಣಗಳು ಮತ್ತು ಸ್ವಯಂಚಾಲಿತ ವ್ಯವಸ್ಥೆಗಳ ತಯಾರಿಕಾ ಘಟಕ ಸ್ಥಾಪಿಸಲು ₹1000 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದರು.
* ಅವೊಯಮಾ ಸೈಸಕುಶೊ
ವಾಹನ ಬಿಡಿಭಾಗಗಳನ್ನು ಪೂರೈಸುವ ಜಪಾನಿನ ಅವೊಯಮಾ ಸೈಸಕುಶೊ, ತುಮಕೂರು ಬಳಿಯ ಜಪಾನ್ ಕೈಗಾರಿಕಾ ಟೌನ್ಶಿಪ್ನಲ್ಲಿ ತಯಾರಿಕಾ ಘಟಕ ಸ್ಥಾಪಿಸಲು ₹210 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ.
* ಡೈಕಿ ಆ್ಯಕ್ಸಿಸ್, ಹೈವಿಷನ್ ಮತ್ತು ಇಎಂಎನ್ಐ ಕಂಪನಿ
ಬ್ಯಾಟರಿ ಸೆಲ್ಗಳ ಸಂಗ್ರಹ ಮತ್ತು ಪರೀಕ್ಷಾ ಕೇಂದ್ರ ಹಾಗೂ ಪರಿಸರ ಸಂರಕ್ಷಣೆ ಸಲಕರಣೆ ತಯಾರಿಸುವ ಘಟಕ ಸ್ಥಾಪಿಸಲು ಜಂಟಿಯಾಗಿ ₹210 ಮೊತ್ತದ ಬಂಡವಾಳ ಹೂಡಿಕೆ ಮಾಡುವ ಒಪ್ಪಂದಕ್ಕೆ ಸಹಿ ಹಾಕಿವೆ.
ಸುಮಿಟೊಮೊ ಹೆವಿ ಇಂಡಸ್ಟ್ರೀಸ್ (ಎಸ್ಎಚ್ಐ) ಬೆಂಗಳೂರಿನಲ್ಲಿ ತನ್ನ ಮುಖ್ಯ ಕಚೇರಿಯನ್ನು ತೆರೆಯಲು ಸಜ್ಜಾಗಿದ್ದು, 2024ರ ಅಂತ್ಯಕ್ಕೆ ಉದ್ಘಾಟನೆ ನೆರವೇರಿಸಲು ಉದ್ದೇಶಿಸಿದೆ.
ಭವಿಷ್ಯದಲ್ಲಿ ₹25,000 ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ
ಈ ತಕ್ಷಣದ ಹೂಡಿಕೆಗಳನ್ನು ಹೊರತುಪಡಿಸಿ, ವಾಹನ ತಯಾರಿಕೆ, ಎಲೆಕ್ಟ್ರಾನಿಕ್ಸ್ ಮತ್ತು ಇಂಧನ ಪರಿಹಾರ ವಲಯಗಳಲ್ಲಿ ₹25,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಸಾಧ್ಯತೆಗಳನ್ನೂ ರಾಜ್ಯದ ನಿಯೋಗವು ಗುರುತಿಸಿದೆ. ಈ ಹೂಡಿಕೆ ನಿರೀಕ್ಷೆಯು, ಕರ್ನಾಟಕವು ಜಾಗತಿಕ ಹೂಡಿಕೆದಾರರ ಪಾಲಿಗೆ ಆಕರ್ಷಕ ತಾಣವಾಗಿರುವುದರ ಮಹತ್ವವನ್ನು ಸೂಚಿಸುತ್ತದೆ.
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ, ಮೂಲಸೌಕರ್ಯ ಇಲಾಖೆ ಉಪ ಕಾರ್ಯದರ್ಶಿ ಹೆಬ್ಸಿಬಾ ರಾಣಿ ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.
-
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ












Click it and Unblock the Notifications