ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು, ಜೂನ್ 26: ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮತ್ತೆ ಸಾರಿಗೆ ನೌಕರರು ಮುಷ್ಕರ ನಡೆಸುವ ಸುಳಿವು ಸಿಕ್ಕ ಕಾರಣ, ಪ್ರತಿಭಟನೆ ತಡೆಯಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.

ಈಗಾಗಲೇ ಸಾರಿಗೆ ನಿಗಮ ನಷ್ಟದಲ್ಲಿದೆ ಈ ಸಂದರ್ಭದಲ್ಲಿ ಮತ್ತೆ ಮುಷ್ಕರ ನಡೆಸದರೆ ಮತ್ತಷ್ಟು ನಷ್ಟ ಅನುಭವಿಸಬೇಕಾಗುತ್ತದೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ ಎಂಬುದು ಸರ್ಕಾರ ವಾದವಾಗಿದೆ.

ಜುಲೈ 1ರಿಂದ ಡಿಸೆಂಬರ್​​ 31ರವರೆಗೆ ಸಾರಿಗೆ ಸಿಬ್ಬಂದಿ ಮುಷ್ಕರವನ್ನು ನಿಷೇಧ ಮಾಡಲಾಗಿದೆ. ಆರ್ಥಿಕತೆಯ ಮೇಲೆ ಕೊವಿಡ್ ಸಾಕಷ್ಟು ಪ್ರಭಾವ ಬೀರಿದೆ. ಈ ಸಂದರ್ಭದಲ್ಲಿ ಮುಷ್ಕರ ಮಾಡುವುದು ಸೂಕ್ತವಲ್ಲ.

Karnataka Govt Brings in Essential Services Maintain Act To Curb Transport Employees Strike

ಹೀಗಾಗಿ ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ 3 ಅನ್ವಯ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಿದ್ದರಾಗ್ತಿದ್ದಾರೆ ಎಂಬ ಸುಳಿವು ಸಿಕ್ಕಿತ್ತು.

ಲಾಕ್​ಡೌನ್​ ಮುಗಿದ ಮೇಲೆ ಜುಲೈ 5 ರ ನಂತ್ರ ಕುಟುಂಬ ಸಮೇತ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಆದರೆ ಅದಕ್ಕೂ ಮೊದಲೇ ಅಗತ್ಯ ಸೇವೆಗಳ‌ ಮುಷ್ಕರವನ್ನ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಉಪವಿಭಾಗ 1ರ ಅನ್ವಯ ಅಗತ್ಯ ಸೇವೆಗಳ ಮುಷ್ಕರವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+