ಮೇ 31, ಭಾನುವಾರ ಕರ್ಫ್ಯೂ ಇರುವುದಿಲ್ಲ: ಸರ್ಕಾರದಿಂದ ಮಹತ್ವದ ನಿರ್ಧಾರ!
ಬೆಂಗಳೂರು, ಮೇ 30: ಮಹಾಮಾರಿ ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟಲು ದೇಶದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದೆ. ಮೇ 31 ರವರೆಗೂ ನಾಲ್ಕನೇ ಹಂತದ ಲಾಕ್ ಡೌನ್ ಚಾಲ್ತಿಯಲ್ಲಿರಲಿದೆ.
Recommended Video
ಲಾಕ್ ಡೌನ್ 4.0 ಅನ್ವಯ ಕರ್ನಾಟಕದಲ್ಲಿ ಕೆಲವು ನಿಯಮಗಳು ಸಡಿಲಗೊಂಡಿದ್ದು, ಭಾನುವಾರ ಮಾತ್ರ ಕಂಪ್ಲೀಟ್ ಲಾಕ್ ಡೌನ್ ಇರಲಿದೆ ಎಂದು ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದರು. ಅದರಂತೆ ಕಳೆದ ವಾರ ಸಂಡೆ ಕರ್ಫ್ಯೂ ವಿಧಿಸಲಾಗಿತ್ತು.
ರಾಜ್ಯ ಸರ್ಕಾರದ ಆದೇಶದ ಅನ್ವಯ ಮೇ 31 ರವರೆಗೆ ಪ್ರತಿ ಭಾನುವಾರ ಕರ್ನಾಟಕ ಸಂಪೂರ್ಣ ಲಾಕ್ ಡೌನ್ ಆಗಬೇಕಿತ್ತು. ಆದರೆ, ಮೇ 31 ರಂದು (ಭಾನುವಾರ) ಕರ್ನಾಟಕದಲ್ಲಿ ಕಂಪ್ಲೀಟ್ ಲಾಕ್ ಡೌನ್ ಅಥವಾ ಕರ್ಫ್ಯೂ ಇರುವುದಿಲ್ಲ.
ನಾಲ್ಕನೇ ಹಂತದ ಲಾಕ್ ಡೌನ್ ಮೇ 31 ರಂದು ಕೊನೆಗೊಳ್ಳಲಿದ್ದು, ಭಾನುವಾರ ಕರ್ಫ್ಯೂ ಇರುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಸಂಡೆ ಕರ್ಫ್ಯೂ ತೆರವು
ಸಾರ್ವಜನಿಕರ ಬೇಡಿಕೆ ಮೇರೆಗೆ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಭಾನುವಾರದಂದು ಕರ್ಫ್ಯೂ ಇರುವುದಿಲ್ಲ. ಭಾನುವಾರದಂದು ವಿಧಿಸಲಾಗುವ ಕರ್ಪ್ಯೂವನ್ನು ತೆರವುಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ, ಮೇ 31 ಭಾನುವಾರ ಎಂದಿನಂತೆ ಎಲ್ಲಾ ಅಂಗಡಿಗಳು ಓಪನ್ ಇರುತ್ತವೆ. ದೈನಂದಿನ ಚಟುವಟಿಕೆ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಸಿಎಂ ಸಚಿವಾಲಯದಿಂದ ಮಾಹಿತಿ ಹೊರಬಿದ್ದಿದೆ.

ಸಾರಿಗೆ ಸೇವೆ ಲಭ್ಯ
ರಾಜ್ಯದಲ್ಲಿ 'ಸಂಡೆ ಕರ್ಫ್ಯೂ'ಗೆ ಬ್ರೇಕ್ ಬಿದ್ದಿರುವುದರಿಂದ ಸಾರಿಗೆ ಸೇವೆ ಕೂಡ ಲಭ್ಯವಿರಲಿದೆ. ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ ಬಸ್ ಗಳು ಭಾನುವಾರ ಸಂಚಾರ ನಡೆಸಲಿದೆ. ಜೊತೆಗೆ ಆಟೋ, ಟ್ಯಾಕ್ಸಿ, ಕ್ಯಾಬ್ ಸೇವೆ ಕೂಡ ಇರಲಿದೆ.

ಮದ್ಯದಂಗಡಿಗಳು ತೆರೆಯಲಿವೆ
ಕರ್ನಾಟಕದಲ್ಲಿ 'ಸಂಡೆ ಕರ್ಫ್ಯೂ' ತೆಗೆದುಹಾಕಿರುವುದರಿಂದ ಮದ್ಯದಂಗಡಿಗಳು ಓಪನ್ ಆಗಿರಲಿವೆ. ಜೊತೆಗೆ ಬ್ಯೂಟಿ ಪಾರ್ಲರ್, ಸಲೂನ್, ಬಟ್ಟೆ ಅಂಗಡಿ, ಮಾಂಸದಂಗಡಿಗಳು ಸೇರಿದಂತೆ ಎಲ್ಲಾ ಅಂಗಡಿಗಳು ಕೂಡ ತೆರೆಯಲಿವೆ.

ಭಾನುವಾರ ಏನಿರುವುದಿಲ್ಲ.?
ಲಾಕ್ ಡೌನ್ ನಿಯಮಗಳ ಅನ್ವಯ, ಭಾನುವಾರ ಶಾಪಿಂಗ್ ಮಾಲ್, ಜಿಮ್, ಥಿಯೇಟರ್ ಗಳು ಓಪನ್ ಇರುವುದಿಲ್ಲ.

ಮಾಸ್ಕ್ ಕಡ್ಡಾಯವಾಗಿ ಧರಿಸಿ
'ಭಾನುವಾರ ಕರ್ಫ್ಯೂ' ಇಲ್ಲದಿರುವುದರಿಂದ ಸಾರ್ವಜನಿಕರು ಎಂದಿನಂತೆ ವ್ಯಾಪಾರ-ವಹಿವಾಟು ನಡೆಸಬಹುದಾಗಿದೆ. ಆದರೆ, ಹೊರಗೆ ಹೊರಟಾಗ ಮುಖಕ್ಕೆ ಮಾಸ್ಕ್ ಕಡ್ಡಾಯವಾಗಿ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಆರೋಗ್ಯಕ್ಕೆ ಉತ್ತಮ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್











Click it and Unblock the Notifications