ಗ್ಯಾರಂಟಿ ಯೋಜನೆ ಬೆನ್ನಲ್ಲೆ 'ಮಹಿಳಾ ಉದ್ಯಮಿಗಳಿಗೆ' ಉತ್ತೇಜನ: ಸರ್ಕಾರದ ಸಲಹೆ ಏನು?
ಬೆಂಗಳೂರು, ನವೆಂಬರ್ 19: ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಮಹಿಳಾ ಮತ ಬ್ಯಾಂಕ್ ಗಟ್ಟಿಯಾಗಿದೆ. ಕಾರಣ ಸರ್ಕಾರದ ಜಾರಿ ತಂದ ಗ್ಯಾರಂಟಿ ಯೋಜನೆಗಳು. ಇದೀಗ ಅದರ ಬೆನ್ನಲ್ಲೆ ಮಹಿಳಾ ಉದ್ಯಮಿಗಳಿಗೆ ರಾಜ್ಯ ಸರ್ಕಾರ ಉತ್ತೇಜನ ನೀಡಲು ಮುಂದಾಗಿದೆ.
ರಾಜ್ಯ ಸರ್ಕಾರ ಮಹಿಳಾ ಉದ್ಯಮಿಗಳಿಗೆ ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಲಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮಂಡಲಿ ಸೇರಿದಂತೆ ಹಲವು ಸಾಂಸ್ಥಿಕ ವ್ಯವಸ್ಥೆಗಳ ಮೂಲಕ ಉತ್ತೇಜನ ನೀಡುತ್ತಿದೆ. ಉದ್ಯಮಶೀಲ ಮಹಿಳೆಯರು ಬೆಂಗಳೂರಿನ ಆಚೆಗೂ ಉದ್ಯಮಗಳನ್ನು ಸ್ಥಾಪಿಸಲು ಮನಸ್ಸು ಮಾಡಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸಲಹೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಹಿಳಾ ಉದ್ಯಮಿಗಳ ಮಹಾಒಕ್ಕೂಟವಾದ 'ಉಬುಂಟು' ವತಿಯಿಂದ ನಡೆದ ರಾಷ್ಟ್ರೀಯ ಮಟ್ಟದ ಮಹಿಳಾ ಉದ್ಯಮಿಗಳ ಸಮಾವೇಶದಲ್ಲಿ ಕೈಗಾರಿಕೆ ಸಚಿವರು ಮಾತನಾಡಿದರು.
ಮಹಿಳಾ ಉದ್ಯಮಿಗಳಿಗೆ ಶೇ.5 ಮೀಸಲಾತಿ
ರಾಜ್ಯದ ಕೈಗಾರಿಕಾ ನೀತಿಯಲ್ಲಿ ಕೆಐಎಡಿಬಿ ಮೂಲಕ ಉದ್ಯಮಿಗಳಿಗೆ ಹಂಚುತ್ತಿರುವ ನಿವೇಶನದಲ್ಲಿ ಮಹಿಳಾ ಉದ್ಯಮಿಗಳಿಗೆ ಶೇ.5ರಷ್ಟು ಮೀಸಲಾತಿ ಇದೆ. ಜೊತೆಗೆ ಕೆಎಸ್ಸೆಸೈಡಿಸಿಯಲ್ಲೂ ಜಮೀನು ಹಂಚಿಕೆಯಲ್ಲಿ ಇದೇ ಸೂತ್ರವನ್ನು ಅಳವಡಿಸಿಕೊಳ್ಳಲಾಗಿದೆ. ಹೂಡಿಕೆ ಸಬ್ಸಿಡಿಯಾಗಿ ಶೇ.5ರಷ್ಟು ಹೆಚ್ಚುವರಿ ಪ್ರೋತ್ಸಾಹ ಮತ್ತು ವಿದ್ಯುತ್ ಬಿಲ್ ಮೇಲೆ ಗರಿಷ್ಠ ನಾಲ್ಕು ವರ್ಷಗಳ ವಿನಾಯಿತಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ರಾಜ್ಯವು ಮಹಿಳೆಯರನ್ನು ಕೈಗಾರಿಕಾ ರಂಗದಲ್ಲಿ ಮೊದಲಿನಿಂದಲೂ ಪ್ರೋತ್ಸಾಹಿಸುತ್ತಿದೆ. ತಂತ್ರಜ್ಞಾನ ಪರಿಪೋಷಣಾ ಕೇಂದ್ರ, ತಂತ್ರಜ್ಞಾನ ಅಳವಡಿಕೆ ಇವುಗಳಲ್ಲೂ ಅರ್ಧದಷ್ಟು ಮೊತ್ತವನ್ನು ಸಬ್ಸಿಡಿಯಾಗಿ ನೀಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ಮಳೆನೀರು ಸಂಗ್ರಹಣೆ, ತ್ಯಾಜ್ಯ ನೀರು ಮರುಬಳಕೆ, ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗಳಿಗೂ ಪ್ರೋತ್ಸಾಹ ಕೊಡಲಾಗುತ್ತಿದೆ ಎಂದರು.

ಮಹಿಳೆಯರಿಗೆ ಸುಲಭ ಸಾಲ, ಸರ್ಕಾರದಿಂದ ಬಡ್ಡಿ ಪಾವತಿ
ಮಹಿಳೆಯರು ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬಂದರೆ, ಕೆಎಸ್ಎಫ್ಸಿ ಮೂಲಕ ಗರಿಷ್ಠ 2 ಕೋಟಿ ರೂ.ವರೆಗೂ ಶೇಕಡಾ 14ರಷ್ಟು ಬಡ್ಡಿ ದರದಲ್ಲಿ ಸುಲಭವಾಗಿ ಸಾಲ ಕೊಡಲಾಗುತ್ತಿದೆ. ಸಣ್ಣ ಮತ್ತು ಮಧ್ಯಮ ಸ್ವರೂಪದ ಕೈಗಾರಿಕೆಗಳನ್ನು ಸ್ಥಾಪಿಸುವ ಆಸಕ್ತಿ ಇರುವ ಮಹಿಳೆಯರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ಸಾಲಕ್ಕೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಐದು ವರ್ಷಗಳವರೆಗೆ ಶೇ.10ರಷ್ಟು ಬಡ್ಡಿಯನ್ನು ತಾನೇ ಪಾವತಿಸುತ್ತದೆ ಎಂದು ಮಾಹಿತಿ ನೀಡಿದರು.
ಉದ್ಯೋಗಸ್ಥ ಮಹಿಳೆಯರಿಗೆ ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರ ಒತ್ತು ಕೊಟ್ಟಿದೆ. ಜೊತೆಗೆ, ಕೌಶಲ್ಯಾಭಿವೃದ್ಧಿಗೂ ಗಮನ ಹರಿಸಲಾಗಿದೆ. ಮಹಿಳೆಯರು ಆರ್ಥಿಕ ಪ್ರಗತಿ ಸಾಧಿಸುವ ಮೂಲಕ ಹಲವು ಸಾಮಾಜಿಕ ಆಶಯಗಳನ್ನೂ ನನಸು ಮಾಡಿಕೊಳ್ಳುವುದು ಸಾಧ್ಯವಿದೆ ಎಂದು ಪ್ರತಿಪಾದಿಸಿದರು.
ಕಾರ್ಯಕ್ರಮದಲ್ಲಿ ಕೆ.ರತ್ನಪ್ರಭಾ, ಉದ್ಯಮಿಗಳಾದ ಉಮಾ ರೆಡ್ಡಿ, ರಾಜಲಕ್ಷ್ಮಿ, ಲತಾ ಗಿರೀಶ್ ಮುಂತಾದವರು ಉಪಸ್ಥಿತರಿದ್ದರು.
-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications