Get Updates
Get notified of breaking news, exclusive insights, and must-see stories!

ಗ್ಯಾರಂಟಿ ಯೋಜನೆ ಬೆನ್ನಲ್ಲೆ 'ಮಹಿಳಾ ಉದ್ಯಮಿಗಳಿಗೆ' ಉತ್ತೇಜನ: ಸರ್ಕಾರದ ಸಲಹೆ ಏನು?

ಬೆಂಗಳೂರು, ನವೆಂಬರ್ 19: ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಮಹಿಳಾ ಮತ ಬ್ಯಾಂಕ್ ಗಟ್ಟಿಯಾಗಿದೆ. ಕಾರಣ ಸರ್ಕಾರದ ಜಾರಿ ತಂದ ಗ್ಯಾರಂಟಿ ಯೋಜನೆಗಳು. ಇದೀಗ ಅದರ ಬೆನ್ನಲ್ಲೆ ಮಹಿಳಾ ಉದ್ಯಮಿಗಳಿಗೆ ರಾಜ್ಯ ಸರ್ಕಾರ ಉತ್ತೇಜನ ನೀಡಲು ಮುಂದಾಗಿದೆ.

ರಾಜ್ಯ ಸರ್ಕಾರ ಮಹಿಳಾ ಉದ್ಯಮಿಗಳಿಗೆ ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಲಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಮಂಡಲಿ ಸೇರಿದಂತೆ ಹಲವು ಸಾಂಸ್ಥಿಕ ವ್ಯವಸ್ಥೆಗಳ ಮೂಲಕ ಉತ್ತೇಜನ ನೀಡುತ್ತಿದೆ. ಉದ್ಯಮಶೀಲ ಮಹಿಳೆಯರು ಬೆಂಗಳೂರಿನ ಆಚೆಗೂ ಉದ್ಯಮಗಳನ್ನು ಸ್ಥಾಪಿಸಲು ಮನಸ್ಸು ಮಾಡಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸಲಹೆ ನೀಡಿದ್ದಾರೆ.

Govt Committed to Creating More Supportive Environment for Women Eentrepreneurs: MB Patil

ಬೆಂಗಳೂರಿನಲ್ಲಿ ಮಹಿಳಾ ಉದ್ಯಮಿಗಳ ಮಹಾಒಕ್ಕೂಟವಾದ 'ಉಬುಂಟು' ವತಿಯಿಂದ ನಡೆದ ರಾಷ್ಟ್ರೀಯ ಮಟ್ಟದ ಮಹಿಳಾ ಉದ್ಯಮಿಗಳ ಸಮಾವೇಶದಲ್ಲಿ ಕೈಗಾರಿಕೆ ಸಚಿವರು ಮಾತನಾಡಿದರು.

ಮಹಿಳಾ ಉದ್ಯಮಿಗಳಿಗೆ ಶೇ.5 ಮೀಸಲಾತಿ

ರಾಜ್ಯದ ಕೈಗಾರಿಕಾ ನೀತಿಯಲ್ಲಿ ಕೆಐಎಡಿಬಿ ಮೂಲಕ ಉದ್ಯಮಿಗಳಿಗೆ ಹಂಚುತ್ತಿರುವ ನಿವೇಶನದಲ್ಲಿ ಮಹಿಳಾ ಉದ್ಯಮಿಗಳಿಗೆ ಶೇ.5ರಷ್ಟು ಮೀಸಲಾತಿ ಇದೆ. ಜೊತೆಗೆ ಕೆಎಸ್ಸೆಸೈಡಿಸಿಯಲ್ಲೂ ಜಮೀನು ಹಂಚಿಕೆಯಲ್ಲಿ ಇದೇ ಸೂತ್ರವನ್ನು ಅಳವಡಿಸಿಕೊಳ್ಳಲಾಗಿದೆ. ಹೂಡಿಕೆ ಸಬ್ಸಿಡಿಯಾಗಿ ಶೇ.5ರಷ್ಟು ಹೆಚ್ಚುವರಿ ಪ್ರೋತ್ಸಾಹ ಮತ್ತು ವಿದ್ಯುತ್‌ ಬಿಲ್‌ ಮೇಲೆ ಗರಿಷ್ಠ ನಾಲ್ಕು ವರ್ಷಗಳ ವಿನಾಯಿತಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ರಾಜ್ಯವು ಮಹಿಳೆಯರನ್ನು ಕೈಗಾರಿಕಾ ರಂಗದಲ್ಲಿ ಮೊದಲಿನಿಂದಲೂ ಪ್ರೋತ್ಸಾಹಿಸುತ್ತಿದೆ. ತಂತ್ರಜ್ಞಾನ ಪರಿಪೋಷಣಾ ಕೇಂದ್ರ, ತಂತ್ರಜ್ಞಾನ ಅಳವಡಿಕೆ ಇವುಗಳಲ್ಲೂ ಅರ್ಧದಷ್ಟು ಮೊತ್ತವನ್ನು ಸಬ್ಸಿಡಿಯಾಗಿ ನೀಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ಮಳೆನೀರು ಸಂಗ್ರಹಣೆ, ತ್ಯಾಜ್ಯ ನೀರು ಮರುಬಳಕೆ, ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪನೆಗಳಿಗೂ ಪ್ರೋತ್ಸಾಹ ಕೊಡಲಾಗುತ್ತಿದೆ ಎಂದರು.

Govt Committed to Creating More Supportive Environment for Women Eentrepreneurs: MB Patil

ಮಹಿಳೆಯರಿಗೆ ಸುಲಭ ಸಾಲ, ಸರ್ಕಾರದಿಂದ ಬಡ್ಡಿ ಪಾವತಿ

ಮಹಿಳೆಯರು ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬಂದರೆ, ಕೆಎಸ್‌ಎಫ್‌ಸಿ ಮೂಲಕ ಗರಿಷ್ಠ 2 ಕೋಟಿ ರೂ.ವರೆಗೂ ಶೇಕಡಾ 14ರಷ್ಟು ಬಡ್ಡಿ ದರದಲ್ಲಿ ಸುಲಭವಾಗಿ ಸಾಲ ಕೊಡಲಾಗುತ್ತಿದೆ. ಸಣ್ಣ ಮತ್ತು ಮಧ್ಯಮ ಸ್ವರೂಪದ ಕೈಗಾರಿಕೆಗಳನ್ನು ಸ್ಥಾಪಿಸುವ ಆಸಕ್ತಿ ಇರುವ ಮಹಿಳೆಯರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಈ ಸಾಲಕ್ಕೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಐದು ವರ್ಷಗಳವರೆಗೆ ಶೇ.10ರಷ್ಟು ಬಡ್ಡಿಯನ್ನು ತಾನೇ ಪಾವತಿಸುತ್ತದೆ ಎಂದು ಮಾಹಿತಿ ನೀಡಿದರು.

ಉದ್ಯೋಗಸ್ಥ ಮಹಿಳೆಯರಿಗೆ ವಸತಿ ಸೌಲಭ್ಯ ಕಲ್ಪಿಸಲು ಸರ್ಕಾರ ಒತ್ತು ಕೊಟ್ಟಿದೆ. ಜೊತೆಗೆ, ಕೌಶಲ್ಯಾಭಿವೃದ್ಧಿಗೂ ಗಮನ ಹರಿಸಲಾಗಿದೆ. ಮಹಿಳೆಯರು ಆರ್ಥಿಕ ಪ್ರಗತಿ ಸಾಧಿಸುವ ಮೂಲಕ ಹಲವು ಸಾಮಾಜಿಕ ಆಶಯಗಳನ್ನೂ ನನಸು ಮಾಡಿಕೊಳ್ಳುವುದು ಸಾಧ್ಯವಿದೆ ಎಂದು ಪ್ರತಿಪಾದಿಸಿದರು.

ಕಾರ್ಯಕ್ರಮದಲ್ಲಿ ಕೆ.ರತ್ನಪ್ರಭಾ, ಉದ್ಯಮಿಗಳಾದ ಉಮಾ ರೆಡ್ಡಿ, ರಾಜಲಕ್ಷ್ಮಿ, ಲತಾ ಗಿರೀಶ್‌ ಮುಂತಾದವರು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+