ಸರ್ಕಾರಿ ನೌಕರರ ಸಂಬಳ ಏರಿಕೆ : ಅಧಿಕೃತ ಆದೇಶ ಪ್ರಕಟ
Recommended Video

ಬೆಂಗಳೂರು, ಮಾರ್ಚ್ 01: ರಾಜ್ಯ ಸರ್ಕಾರಿ ನೌಕರರಿಗೆ ಹೋಳಿ ಹಬ್ಬದ ಉಡುಗೊರೆ ಸಿಕ್ಕಿದೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನೀಡಲು ಮುಂದಾಗಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ವೇತನ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಶಿಫಾರಸ್ಸಿಗೆ ಅಸ್ತು ಎಂದಿದೆ.
6ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗಳಿಸಲು ಸರ್ಕಾರ ಮುಂದಾಗಿದ್ದು, 'ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ.
ಆಯೋಗದ ಶಿಫಾರಸ್ಸಿನಂತೆ ಏಪ್ರಿಲ್ 01,2018ರಿಂದ ಜಾರಿಗೆ ಬರುವಂತೆ ಸೌಲಭ್ಯಗಳು ಸಿಗಲಿವೆ ಎಂದು ಬಜೆಟ್ ನಂತರದ ಸುದ್ದಿಗೋಷ್ಠಿಯಲ್ಲಿ ಸಿಹಿ ಸುದ್ದಿ ಕೊಟ್ಟಿದ್ದರು. ಈಗ ಶಿಫಾರಸ್ಸಿಗೆ ಸಚಿವ ಸಂಪುಟದಲ್ಲಿ ಸರ್ವಾನುಮತದ ಸಮ್ಮತಿ ಸಿಕ್ಕಿದ್ದು, ಗುರುವಾರ(ಮಾರ್ಚ್ 01)ದಂದು ಅಧಿಕೃತ ಅದೇಶವನ್ನು ಹೊರಡಿಸಲಾಗಿದೆ.
ಐಎಎಸ್ ನಿವೃತ್ತ ಅಧಿಕಾರಿ ಎಂ.ಆರ್. ಶ್ರೀನಿವಾಸ ಮೂರ್ತಿ ಅಧ್ಯಕ್ಷತೆಯ ಆಯೋಗವು ಜನವರಿ 31, 2018ರಂದು ಸಲ್ಲಿಸಿರುವ ವರದಿ ಹಾಗೂ ಶಿಫಾರಸ್ಸನ್ನು ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಈ ಶಿಫಾರಸುಗಳನ್ನು ಅನುಷ್ಠಾನಗೊಳಿಸುವುದರಿಂದ ಸರ್ಕಾರದ ಬೊಕ್ಕಸಕ್ಕೆ 10,508 ಕೋಟಿ ರು ಅಧಿಕ ಹೊರೆ ಬೀಳಲಿದೆ. ಆಯೋಗದ ಅವಧಿಯನ್ನು ಏಪ್ರಿಲ್ 30, 2018ರ ತನಕ ವಿಸ್ತರಿಸಲಾಗಿದೆ.

ಸರ್ಕಾರದ ಬೊಕ್ಕಸಕ್ಕೆ 10,508 ಕೋಟಿ ರು ಹೊರೆ
ಆರನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಏಪ್ರಿಲ್ 01,2018ಕ್ಕೆ ಅನ್ವಯವಾಗುವಂತೆ ಸರ್ಕಾರಿ ನೌಕರರಿಗೆ 5.93 ಲಕ್ಷ ಉದ್ಯೋಗಿಗಳು ಹಾಗೂ 5.73 ಲಕ್ಷ ಪಿಂಚಣಿದಾರರಿಗೆ ಲಾಭವಾಗಲಿದೆ. ಈ ಶಿಫಾರಸ್ಸು ಅನುಷ್ಠಾನದಿಂದ ಸರ್ಕಾರದ ಬೊಕ್ಕಸಕ್ಕೆ 10,508 ಕೋಟಿ ರು ಹೊರೆ ಬೀಳಲಿದೆ.
ಆಯೋಗ ಶಿಫಾರಸ್ಸು ಮಾಡಿದ ಮುಖ್ಯ ವೇತನ ಶ್ರೇಣಿ ಹಾಗೂ 25 ಸ್ಥಾಯಿ ವೇತನ ಶ್ರೇಣಿಗಳಿಗೆ ಸಂಪುಟ ಸಮ್ಮತಿಸಿದ್ದು, ಅಧಿಕೃತ ಆದೇಶ ಎಫ್ ಡಿ 06 ಎಸ್ ಆರ್ ಪಿ 2018 ಹೊರಡಿಸಲಾಗಿದೆ.

ಪರಿಷ್ಕೃತ ಮುಖ್ಯ ವೇತನ ಶ್ರೇಣಿ
ರು 17,000-400-18,600-400-20,400-500-22,450-550-
24,600-600-27,000-650-29,600-750-32,600-850-36,000-950-
39,800-1100-46,400-1250-53,900-1450-62,600-1650-
72,500-1900-83,900-2200-97,100-2500-112100-2800-
128900-3100-1,50,600

ವಿವರವಾದ ಪ್ರತ್ಯೇಕ ಆದೇಶ ನಿರೀಕ್ಷಿಸಿ
ಈ ಮೇಲಿನ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ನೌಕರರು ಮತ್ತು ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೂ ಸಹ ವಿಸ್ತರಿಸಲು ಸರ್ಕಾರ ಮುಂದಾಗಿದೆ.
ವೇತನ ಶ್ರೇಣಿಗಳ ಪರಿಷ್ಕರಣೆ ಮೊತ್ತವನ್ನು ಏಪ್ರಿಲ್ 01 ರಿಂದ ಅನ್ವಯವಾಗುವಂತೆ ನಗದು ರೂಪದಲ್ಲಿ ಪಾವತಿ ಮಾಡತಕ್ಕದ್ದು, ಪರಿಷ್ಕೃತ ವೇತನ ಶ್ರೇಣಿಗಳ ಹಂಚಿಕೆ ಮತ್ತು ಈ ವೇತನ ಶ್ರೇಣಿಗಳಲ್ಲಿ ವೇತನ ಮತ್ತು ನಿವೃತ್ತಿ ವೇತನ ಕ್ರಮಬದ್ಧಗೊಳಿಸುವ ಕುರಿತು, ಸರ್ಕಾರದಿಂದ ವಿವರವಾದ ನಿಯಮ ಮತ್ತು ಆದೇಶವನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು.

ಸರ್ಕಾರಿ ನೌಕರರ ಬೇಡಿಕೆ
*ವೇತನ ಪರಿಷ್ಕರಣೆಯಾದ ನಂತರ ಶೇ. 42.25 ರಷ್ಟು ತುಟ್ಟಿಭತ್ಯೆ ಮೂಲ ವೇತನದಲ್ಲಿ ವಿಲೀನವಾಗಬೇಕು.
* ಕೇಂದ್ರ ಸರ್ಕಾರ ಘೋಷಿಸುವ ತುಟ್ಟಿಭತ್ಯೆಯ ಪ್ರಮಾಣದಲ್ಲಿ ಶೇ. 0.944 ರಷ್ಟು ತುಟ್ಟಿಭತ್ಯೆ ನೀಡುವ ಭರವಸೆಯೊಂದಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಮಂಜೇಗೌಡ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತ್ತು.
* ಮನೆ ಬಾಡಿಗೆ ಭತ್ಯೆಯನ್ನು ಶೇ. 45 ರಷ್ಟು ಫಿಟ್ ಮೆಂಟ್ ನೀಡಬೇಕೆಂದು ನೌಕರರು ಮನವಿ ಮಾಡಿದ್ದಾರೆ.
* ಈಗ ಸಿದ್ದರಾಮಯಯ್ಯ ಅವರು ಶೇ 35ರಷ್ಟು ವೇತನ ಏರಿಕೆ ಮಾಡಿದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೇತನ ಅಂತರ ಶೇ32ರಷ್ಟಿರಲಿದೆ.

ಆಯೋಗ ಮಾಡಿದ್ದ ಶಿಫಾರಸುಗಳ ಪಟ್ಟಿ
* ರಾಜ್ಯ ಸರ್ಕಾರಿ ನೌಕರರ ವೇತನ ಶೇ 30ರಷ್ಟು ಹೆಚ್ಚಳ.
* ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ವೇತನ ಸರಿ ಸಮಾನವಾಗಿರಬೇಕು.
* ಕೆಲವು ಜಯಂತಿ /ದಿನಾಚರಣೆ ಸರ್ಕಾರಿ ರಜೆ ರದ್ದು, ವಾರದಲ್ಲಿ 5 ದಿನಗಳು ಮಾತ್ರ ಕಚೇರಿ.
* ಕೇಂದ್ರ ಸರ್ಕಾರದ ಕಚೇರಿ ಅನ್ವಯ ವಾರದ ರಜೆ ಹಾಗೂ ಕೆಲಸದ ಅವಧಿ ಬದಲಾವಣೆ.
* ಕನಿಷ್ಟ ವೇತನ ಮೊತ್ತ 16,350 ರು, ಗರಿಷ್ಟ ಮೊತ್ತ 1,32,925 ರು. ಎಂದು ನಿಗದಿ.
* ಐಎಎಸ್ ಯೇತರ ಅಧಿಕಾರಿಗಳು- 95,325 ರು ನಿಂದ 1 ಲಕ್ಷ ರು.
* ಗ್ರೂಪ್ ಬಿ: 39,425 ರು
* ಗ್ರೂಪ್ ಸಿ : 19, 850 ರು
* ಗ್ರೂಪ್ ಡಿ : 16,350 ರು

ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳು
* ಕನಿಷ್ಟ ವೇತನ ಮೊತ್ತ 16,350 ರು ಇರಲಿ ಎಂದು ಶಿಫಾರಸ್ಸು ಮಾಡಲಾಗಿತ್ತು. ಈಗ 17,000 ರು ಎಂದು ಪರಿಷ್ಕರಣೆ ಮಾಡಲಾಗಿದೆ
* ಗರಿಷ್ಟ ಮೊತ್ತ 1,32,925 ರು. ಎಂದು ನಿಗದಿಪಡಿಸಲು ಶಿಫಾರಸ್ಸು ಮಾಡಲಾಗಿತ್ತು. ಈಗ 1,50,600 ರು ಎಂದು ಪರಿಷ್ಕರಣೆ ಮಾಡಲಾಗಿದೆ
-
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು?












Click it and Unblock the Notifications