'ವೀರಶೈವ-ಲಿಂಗಾಯತ ವಿಚಾರದಲ್ಲಿ ಸರ್ಕಾರದ ಯಾವುದೇ ನಿಲುವಿಲ್ಲ'

ಚಾಮರಾಜನಗರ, ಅ.10 : 'ವೀರಶೈವ ಲಿಂಗಾಯತ ಧರ್ಮದ ವಿಚಾರದಲ್ಲಿ ಸರ್ಕಾರದ ನಿಲುವು ಯಾವುದೂ ಇಲ್ಲ. ಆದರೆ, ಈ ಈ ವಿಚಾರವನ್ನು ನಾನು ಹುಟ್ಟು ಹಾಕಿದ್ದು ಎಂದು ಬಿಂಬಿಸಲಾಗುತ್ತಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಗುರುವಾರ ಚಾಮರಾಜನಗರದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ವೀರಶೈವ ಮಹಾಸಭಾದವರು ಕಾರ್ಯಕ್ರಮದಲ್ಲಿ ಪ್ರತ್ಯೇಕ ಧರ್ಮಕ್ಕಾಗಿ ಬೇಡಿಕೆ ಇಟ್ಟಿದ್ದರು. ಎಲ್ಲರೂ ಒಟ್ಟಾಗಿ ಮನವಿ ಸಲ್ಲಿಸಿದರೆ ಪರಿಗಣಿಸುತ್ತೇನೆ ಎಂದು ಹೇಳಿದ್ದೆ. ಈ ವಿಚಾರ ನಾನು ಹುಟ್ಟು ಹಾಕಿದ್ದಲ್ಲ' ಎಂದು ಸ್ಪಷ್ಟಪಡಿಸಿದರು.

Govt has no stand on Veerashaiva-Lingayat issue : Siddaramaiah

'ವೀರಶೈವ ಲಿಂಗಾಯತ ಧರ್ಮದ ವಿಚಾರದಲ್ಲಿ ಸರ್ಕಾರದ ಯಾವ ನಿಲುವೂ ಇಲ್ಲ. ಮಾತೆ ಮಹಾದೇವಿ ಮತ್ತು ಶಾಮನೂರು ಶಿವಶಂಕರಪ್ಪ ಪತ್ರ ಬರೆದಿದ್ದರು. ಇದರಲ್ಲಿ ನನ್ನ ಪಾತ್ರ ಮತ್ತು ನಿಲುವು ಏನೂ ಇಲ್ಲ' ಎಂದು ಸಿದ್ದರಾಮಯ್ಯ ತಿಳಿಸಿದರು.

ಮುಖ್ಯಮಂತ್ರಿಗಳ ಭೇಟಿ : ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡುವ ವಿಚಾರಕ್ಕೆ ಕುರಿತಂತೆ ಇಂದು ಬೆಂಗಳೂರಿನಲ್ಲಿ ಸಮಾಲೋಚನೆ ಸಭೆ ನಡೆಯಿತು. ವಿವಿಧ ಮಠಾಧೀಶರು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ತೀರ್ಮಾನವನ್ನು ಕೈಗೊಂಡಿದ್ದಾರೆ.

ಆದೇಶ ಪಾಲನೆ : 'ಕಾವೇರಿ ನ್ಯಾಯಾಧೀಕರಣದ ಆದೇಶದಂತೆ ತಮಿಳುನಾಡಿಗೆ ನೀರು ಹರಿಸಿದ್ದೇವೆ. ನಮ್ಮ ರೈತರಿಗೂ ಇಂದಿನಿಂದ ನೀರು ಹರಿಸಲಾಗುತ್ತಿದೆ' ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+