ಅರ್ಚಕರಿಗೆ ಸಿಹಿ ಸುದ್ದಿ: ರಾಜ್ಯ ಸರ್ಕಾರದಿಂದ ತಸ್ತಿಕ್ ಹಣ ಬಿಡುಗಡೆಗೆ ಆದೇಶ
ಬೆಂಗಳೂರು, ಸೆಪ್ಟಂಬರ್ 03: ಕರ್ನಾಟಕ ಸರ್ಕಾರ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಅರ್ಚಕರಿಗೆ ಸಿಹಿ ಸುದ್ದಿ ನೀಡಿದೆ. ಅರ್ಚಕರ ತಸ್ತಿಕ್ ಹಣವನ್ನು ಬಿಡುಗಡೆ ಮಾಡಿ ಆದೇಶಿಸಿದೆ. ಹಾಗಾದರೆ ಎಷ್ಟು ಮಂದಿ? ಈ ಭತ್ಯೆ ಹಣ ಹೇಗೆ ಪಡೆಯಲಿದ್ದಾರೆ, ಒಟ್ಟು ಎಷ್ಟು ಕೋಟಿ ಹಣ ಎಂಬುದನ್ನು ಇಲ್ಲಿ ತಿಳಿಯಬಹುದು.
ರಾಜ್ಯಸರ್ಕಾರವು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ 2700 ಸಿ ದರ್ಜೆಯ ದೇವಾಲಯಗಳ ಅರ್ಚಕರಿಗೆ ಭತ್ಯೆಯ ಒಟ್ಟು 77.85 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದೆ. ಈ ಇಲಾಖೆ ವ್ಯಾಪ್ತಿಯ ಅಷ್ಟೂ ಜನ ಅರ್ಚಕರು ತಮ್ಮ ತಸ್ತಿಕ್ ಹಣವನ್ನು ತಹಶೀಲ್ದಾರ್ ಮೂಲಕ ಪಡೆಯಲಿದ್ದಾರೆ ಎನ್ನಲಾಗಿದೆ.

ಅರ್ಚಕರ ತಸ್ತಿಕ್ ಹಣಕ್ಕೆ ಕಮಿಷನ್ ಹಣ ಕೇಳಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ನೇರವಾಗಿ ಅರ್ಚಕರ ಬ್ಯಾಂಕ್ ಖಾತೆಗಳಿಗೆಗೆ ಈ ಹಣ ಹಾಕುವ ಬಗ್ಗೆ ಈ ಹಿಂದೆ ತಿಳಿಸಿದ್ದರು. ಅದಾದ ಬಳಿಕ ಸದ್ಯ ಸರ್ಕಾರ ಹಣ ಬಿಡುಗಡೆ ಮಾಡಿದೆ. ಈ ತಸ್ತಿಕ್ ಹಣ ನೇರವಾಗಿ ಅರ್ಚಕರ ಖಾತೆಗೆ ಜಮೆ ಆಗಲಿದೆಯೇ ಅಥವಾ ತಹಶೀಲ್ದಾರ್ರಿಂದ ಅರ್ಚಕರು ಹಣ ಪಡೆಯುತ್ತಾರಾ? ಎಂಬುದರ ಬಗ್ಗೆ ಅಧಿಕೃತ ಮಾಹಿತಿ ಹೊರಬರಬೇಕಿದೆ.
ಸಿ-ದರ್ಜೆ ದೇಗುಲದ ಅರ್ಚಕರ ಆರೋಪವೇನು?
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಸಿ ದರ್ಜೆ ದೇವಸ್ಥಾನಗಳ ಪೂಜೆ ಸೇರಿದಂತೆ ಇನ್ನಿತರ ಕಾರ್ಯ ಮಾಡುವ ಅರ್ಚಕರಿಗೆ ತಸ್ತಿಕ್ ಹಣ ಬಿಡುಗಡೆ ಮಾಡಲು ಪರ್ಸೆಂಟೇಜ್ ಕೇಳುತ್ತಿದ್ದಾರೆ ಎಂದು ಅರ್ಚಕರ ಸಂಘ ಆರೋಪಿಸಿತ್ತು. ದೇಗುಲದ ಗುಮಾಸ್ತರು, ಶಿರಸ್ತೇದಾರರು, ಟ್ರಿಜರಿ ಅಧಿಕಾರಿಗಳು ಕಮೀಷನ್ ಬೇಡಿಕೆ ಇಡುತ್ತಿದ್ದರು ಎಂದು ಸರ್ಕಾರಕ್ಕೆ ಬರೆದ ಪತ್ರದಲ್ಲಿ ಸಂಘ ಉಲ್ಲೇಖಿಸಿತ್ತು.
ಈ ಸಂಬಂಧ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಇತ್ತೀಚೆಗೆ ಅರ್ಚಕರ ಸಂಘ ಪತ್ರ ಬರೆದು ಮನವಿ ಮಾಡಿತ್ತು. ಸರ್ಕಾರ ದೇಗುಲಗಳಿಗೆ ತಸ್ತಿಕ್ ಹಣ ಬಿಡುಗಡೆ ಮಾಡುತ್ತದೆ. ಆದರೆ ಅದನ್ನು ನಮಗೆ ಬಿಡುಗಡೆ ಮಾಡಲು ಶೇ. 20ರಷ್ಟು ಹಣ ಕೇಳಲಾಗುತ್ತಿದೆ, ಇದರಿಂದಾಗಿ ದಲ್ಲಾಳಿಗಳಿಗೆ ಹಣ ನೀಡಬೇಕಿದೆ. ಇಂತಹ ವಾತಾವರಣ ನಿರ್ಮೂಲನೆಗೆ ಸಂಘ ಮನವಿ ಮಾಡಿತ್ತು. ಆಗ ಸಚಿವರು ಸಕಾರಾತ್ಮಕವಾಗಿ ಭರವಸೆ ನೀಡಿದ್ದರು.ಇದೀಗ ಸರ್ಕಾರ ಹಣ ಬಿಡುಗಡೆ ಮಾಡಿ ಆದೇಶಿಸಿದೆ.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
BREAKING: ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ; ಮಠದ ಟ್ರಸ್ಟಿಗಳಿಂದ ನಿರ್ಧಾರ -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications