ಯುದ್ಧದಲ್ಲಿ ಮಡಿದ ಸೈನಿಕರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು, ಆಗಸ್ಟ್ 15: ಸೈನಿಕರು ನಮ್ಮ ದೇಶದ ರಕ್ಷಣೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಕಾರ್ಯನಿರ್ವಹಿಸುತ್ತಾರೆ. ರಾಜ್ಯದ ಸೈನಿಕರು ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟರೆ, ಅವರ ಕುಟುಂಬದ ಜೀವನಕ್ಕೆ ಭದ್ರತೆ ಒದಗಿಸುವ ಉದ್ದೇಶದಿಂದ ಮೃತ ಸೈನಿಕರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 76 ನೇ ಸ್ವಾತಂತ್ರೋತ್ಸವದ ಅಂಗವಾಗಿ ಧ್ವಜಾರೋಹಣ ನೆರೆವರಿಸಿ ಮಾತನಾಡಿದರು.
ಹೊಸ ಯೋಜನೆಗಳ ಘೋಷಣೆಗಳು
1. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಸ್ವಚ್ಛತೆ, ಪೌಷ್ಟಿಕತೆ ಕಾಪಾಡಲು, ರೈತರು, ಶ್ರಮಿಕರ ಅಭ್ಯುದಯಕ್ಕಾಗಿ ಹಾಗೂ ಕೆಚ್ಚೆದೆಯ ಸೈನಿಕರ ಕ್ಷೇಮಾಭಿವೃದ್ಧಿಗಾಗಿ ಕೆಲವು ಕೊಡುಗೆಗಳನ್ನು ನೀಡಲು ಸರ್ಕಾರ ತೀರ್ಮಾನಿಸಿದೆ ಎಂದರು.

2.ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಶೇ. 100 ರಷ್ಟು ಶೌಚಾಲಯಗಳ ನಿರ್ಮಾಣವನ್ನು 250 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು. ಆ ಮೂಲಕ ಶಾಲೆ, ಕಾಲೇಜುಗಳಲ್ಲಿ ಸ್ವಚ್ಛ-ಆರೋಗ್ಯಕರ ವಾತಾವರಣ ನಿರ್ಮಿಸಲಾಗುವುದು.
3. ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲ ಕರ್ಮಿಗಳಿಗೆ ತಲಾ 50 ಸಾವಿರ ರೂ. ಗಳ ವರೆಗೆ ಸಾಲ-ಸಹಾಯಧನ ಯೋಜನೆಯನ್ನು ಜಾರಿಗೊಳಿಸಲಾಗುವುದು.
4. ರೈತರ ಮಕ್ಕಳಿಗೆ ಜಾರಿಗೊಳಿಸಿರುವ ರೈತ ವಿದ್ಯಾನಿಧಿ ಯೋಜನೆಯ ಸೌಲಭ್ಯವನ್ನು ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಿಸಲಾಗುವುದು.
5. ಇದಲ್ಲದೆ ಭೂ ರಹಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳನ್ನು ಆದ್ಯತೆಯಾಗಿರಿಸಿಕೊಂಡು, ಅಗತ್ಯವನ್ನಾಧರಿಸಿ, ರಾಜ್ಯದಲ್ಲಿ ಹೊಸದಾಗಿ ೪೦೫೦ ಅಂಗನವಾಡಿ ತೆರೆಯಲಾಗುವುದು. ಆ ಮೂಲಕ 16 ಲಕ್ಷ ಕುಟುಂಬಗಳ ಮಕ್ಕಳಿಗೆ ಪೌಷ್ಟಿಕ ಆಹಾರ ಹಾಗೂ ಶಾಲಾ ಪೂರ್ವ ಶಿಕ್ಷಣ ನೀಡಲು ಅವಕಾಶ ಕಲ್ಪಿಸಲಾಗುವುದು. 8100 ಮಹಿಳೆಯರಿಗೂ ಇದರಿಂದ ಉದ್ಯೋಗಾವಕಾಶ ದೊರೆಯಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications