ಸರ್ಕಾರಿ ಕಾಲೇಜು ಉಪನ್ಯಾಸಕರ ವಿದೇಶ ಪ್ರಯಾಣ ಇನ್ನು ಸುಲಭ
ಗಳೂರು, ಅಕ್ಟೋಬರ್ 6: ಸರ್ಕಾರಿ ಕಾಲೇಜುಗಳ ಉಪನ್ಯಾಸಕರ ವಿದೇಶ ಪ್ರವಾಸ ಇನ್ನು ಸುಲಭವಾಗಲಿದೆ. ಪ್ರವಾಸಕ್ಕಿದ್ದ ಸಾಕಷ್ಟು ನಿರ್ಬಂಧಗಳನ್ನು ಸರ್ಕಾರ ತೆರವುಗೊಳಿಸಿದೆ.
ಸರ್ಕಾರಿ ಪದವಿ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ವಿದೇಶ ಪ್ರವಾಸಕ್ಕಿದ್ದ ನಿರ್ಬಂಧಗಳನ್ನು ಸರ್ಕಾರ ತೆರವುಗೊಳಿಸಿರುವುದು ಸಾಕಷ್ಟು ವರ್ಷಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.
ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಳೇಜುಗಳ ಪ್ರಾಧ್ಯಾಪಕರು ಹಾಗೂ ಇತರೆ ಬೋಧಕೇತರ ಸಿಬ್ಬಂದಿ ತಮ್ಮ ಸ್ವಂತ ಖರ್ಚಿನಲ್ಲಿ ಹಾಗೂ ತಮ್ಮ ಗಳಿಕೆ ರಜೆಗಳನ್ನು ಬಳಸಿಕೊಂಡು ವಿದೇಶ ಪ್ರವಾಸ ಕೈಗೊಳ್ಳಬೇಕಾಗಿತ್ತು. ಈ ಪ್ರಸ್ತಾವನೆಯನ್ನು ಪರಿಶೀಲಿಸಿ ಅನುಮೋದಿಸುವ ಅಧಿಕಾರವು ಇದೀಗ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಿಗೆ ನೀಡಲಾಗಿದೆ. ಹಾಗಾಗಿ ಇನ್ನುಮುಂದೆ ಉಪನ್ಯಾಸಕರ ವಿದೇಶ ಪ್ರವಾಸ ಸುಲಭವಾಗಲಿದೆ.

ಪ್ರವಾಸಕ್ಕೆ ಸಮಸ್ಯೆಯೇನಿತ್ತು?
ವಿದೇಶ ಪ್ರವಾಸಕ್ಕೆ ಹೋಗಬೇಕೆಂದರೆ ಎರಡು ಕಡೆ ದಾಖಲೆಗಳನ್ನು ಸಲ್ಲಿಸಬೇಕಿತ್ತು, ನಂತರ ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿ ವಿಳಂಬಗಳಾಗುತ್ತಿದ್ದವು, ಕೆಲಸ ಒತ್ತಡ ಹಾಗೂ ಅನೇಕ ಕಾರಣಗಳಿಂದ ಕಡತಗಳನ್ನು ಶೀಘ್ರ ವಿಲೇವಾರಿ ಮಾಡುವಲ್ಲಿ ಅಧಿಕಾರಿಗಳು ತೋರುತ್ತಿದ್ದ ವಿಳಂಬದಿಂದಾಗಿ ಪ್ರವಾಸವನ್ನು ಕೈಬಿಡಲಾಗುತ್ತಿತ್ತು.

ಹೋರಾಟ ಆರಂಭವಾಗಿದ್ದು ಯಾವಾಗ
ವಿದೇಶ ಪ್ರವಾಸಕ್ಕೆ ತೆರಳಲು ಕೇವಲ ಶಿಕ್ಷಣ ಇಲಾಖೆಯ ಅನುಮತಿ ಪಡೆಯುವುದನ್ನು ಕಡ್ಡಾಯ ಮಾಡುವಂತೆ ಸರ್ಕಾರಿ ಪದವಿ ಕಾಲೇಜುಗಳ ಪ್ರಾಧ್ಯಾಪಕರ ಸಂಘ ಕಳೆದ ಐದಾರು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿತ್ತು, ಹಲವು ವರ್ಷಗಳ ಮನವಿಗೆ ಸರ್ಕಾರ ಸ್ಪಂದಿಸಿದೆ. ಇದು ಸಂತಸ ತಂದಿದೆ ಎಂದು ಸಂಘದ ಅಧ್ಯಕ್ಷ ಮಂಜುನಾಥ್ ತಿಳಿಸಿದ್ದಾರೆ.

ಗಳಿಕೆ ರಜೆಯಲ್ಲಿ ಮಾತ್ರ ಪ್ರವಾಸ
ಗಳಿಕೆ ರಜೆಯಲ್ಲಿ ಮಾತ್ರ ಪ್ರವಾಸ ಕೈಗೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ. ಇತರೆ ಇಲಾಖೆಗಳ ಸಿಬ್ಬಂದಿಗೆ ವಾರ್ಷಿಕ 30 ಗಳಿಕೆ ರಜೆ ಇದ್ದರೆ, ಸರ್ಕಾರಿ ಪದವಿ ಕಾಲೇಜುಗಳ ಸಿಬ್ಬಂದಿಗೆ ಕೇವಲ 10 ಗಳಿಕೆ ರಜೆಗಳಿವೆ. ಆದ್ದರಿಂದ ಈ ಅವಧಿಯಲ್ಲಿ ರಜೆ ಅಔಧಿಯಲ್ಲಿ ಪ್ರವಾಸ ಕೈಗೊಂಡರೆ ಗಳಿಕೆ ರಜೆ ಕಡಿತ ಮಾಡಬಹುದು ಎಂದಿದ್ದಾರೆ,.

ಈ ಹಿಂದಿನ ಆದೇಶದಲ್ಲಿ ಏನಿತ್ತು
2009ಕ್ಕೂ ಮುನ್ನ ಸರ್ಕಾರಿ ಪದವಿ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕಾಲೇಜು ಶಿಕ್ಷಣ ಇಲಾಖೆಯ ಅನುಮತಿ ಪಡೆದು ವಿದೇಶ ಪ್ರವಾಸ ಕೈಗೊಳ್ಳಬಹುದಿತ್ತು, ಆದರೆ 2009ರಿದ ಇಲಾಖೆ ಅನುಮತಿ ಜತೆಗೆ ಸರ್ಕಾರದಿಂದಲೂ ಅನುಮತಿ ಪಡೆಯುವ ನಿಯಮವನ್ನು ಜಾರಿಗೆ ತರಲಾಯಿತು. ವಿದೇಶ ಪ್ರವಾಸ ಕೈಗೊಳ್ಳುವ ಪ್ರಾಧ್ಯಾಪಕರು ಹಾಗೂ ಇತರೆ ಸಿಬ್ಬಂದಿ ತಮ್ಮ ಪಾಸ್ಪೋರ್ಟ್, ವೀಸಾ, ವಿಮಾನ ಟಿಕೆಟ್, ಪ್ರವಾಸದ ಕಾರಣ, ಪ್ರಯಾಣದ ವಿವರಗಳನ್ನು ಚೆಕ್ ಲಿಸ್ಟ್ ಅನ್ನು ಇಲಾಖೆಗೆ ಸಲ್ಲಿಸಬೇಕಿತ್ತು.
-
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications