ತಾಲ್ಲೂಕು ಪಂಚಾಯತಿಗಳ ರದ್ದು: ಸರ್ಕಾರದ ಮಹತ್ವದ ಚಿಂತನೆ
ಬೆಂಗಳೂರು, ಫೆಬ್ರವರಿ 18: ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿಗಳಿಗೆ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸಿದ್ಧತೆ ನಡೆಸುತ್ತಿರುವ ಸಂದರ್ಭದಲ್ಲಿಯೇ ರಾಜ್ಯ ಸರ್ಕಾರ ತಾಲ್ಲೂಕು ಪಂಚಾಯತಿಗಳನ್ನೇ ರದ್ದುಗೊಳಿಸಲು ಮುಂದಾಗಿದೆ. ಅಧಿಕಾರ ವಿಕೇಂದ್ರೀಕರಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ತಾಲ್ಲೂಕು ಪಂಚಾಯತಿಗಳನ್ನು ರದ್ದುಪಡಿಸುವ ವಿಧೇಯಕವು ಮುಂದಿನ ಬಜೆಟ್ನಲ್ಲಿ ಮಂಡನೆಯಾಗಲಿದೆ.
ಪ್ರಸಕ್ತ ವರ್ಷದ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಜ್ಜುಗೊಂಡಿದೆ. ಅದಕ್ಕೂ ಮೊದಲೇ ತಾಲ್ಲೂಕು ಪಂಚಾಯತಿಗಳು ರದ್ದಾಗುವ ಸಾಧ್ಯತೆ ಇದೆ. ಬಜೆಟ್ ಅಧಿವೇಶನದಲ್ಲಿ ಈ ನಿರ್ಣಯ ಅಂಗೀಕಾರವಾಗಲಿದ್ದು, ನಂತರ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಕಳುಹಿಸುವ ನಿರೀಕ್ಷೆಯಿದೆ.
ತಾಲ್ಲೂಕು ಪಂಚಾಯತಿಗಳ ಸದಸ್ಯರಿಗೆ ಆಡಳಿತಾತ್ಮಕ ಅಧಿಕಾರ ಮತ್ತು ಆರ್ಥಿಕ ಅಧಿಕಾರಗಳಿಲ್ಲ. ಈಗಾಗಲೇ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ರಾಜ್ಯ ಸರ್ಕಾರಕ್ಕೆ ತಾಲ್ಲೂಕು ಪಂಚಾಯತಿಗಳ ನಿರ್ವಹಣೆ ಮತ್ತಷ್ಟು ಆರ್ಥಿಕ ಹೊರೆಯಾಗುತ್ತಿದೆ. ಈಗಿನ ವ್ಯವಸ್ಥೆಯಲ್ಲಿ ತಾಲ್ಲೂಕು ಪಂಚಾಯತ್ ಸದಸ್ಯರಿಗೆ ವೇತನ ನೀಡಲು ಸಹ ಕಷ್ಟವಾಗುತ್ತಿದೆ. ಮುಂದೆ ಓದಿ.

ಗ್ರಾ.ಪಂಗೆ ಮರಳಿದ ಸದಸ್ಯರು
ತಾಲ್ಲೂಕು ಪಂಚಾಯಿತಿಗೆ ಹೆಚ್ಚಿನ ಅಧಿಕಾರಗಳಿಲ್ಲದ ಕಾರಣ ಅನೇಕ ಸದಸ್ಯರು ಗ್ರಾಮ ಪಂಚಾಯಿತಿಗೆ ಸ್ಪರ್ಧಿಸುತ್ತಿದ್ದಾರೆ. ಗ್ರಾಮೀಣ ಆಡಳಿತವನ್ನು ಸುಗಮಗೊಳಿಸಲು ಜಿಲ್ಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯತಿಯಲ್ಲಿ ಎರಡು ಸ್ತರದ ಆಡಳಿತ ವ್ಯವಸ್ಥೆ ತರಲು ಸರ್ಕಾರ ಚಿಂತನೆ ನಡೆಸಿದೆ.
ತಾಲ್ಲೂಕು ಪಂಚಾಯತಿಗಳು ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿವೆ. ಅವುಗಳನ್ನು ರದ್ದುಗೊಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲದ ಕಾರಣ, ಸದನದಲ್ಲಿ ನಿರ್ಣಯ ತೆಗೆದುಕೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗುತ್ತದೆ.

ಕೆಎಸ್ ಈಶ್ವರಪ್ಪ ಮಾಹಿತಿ
ಈ ವಿಚಾರವನ್ನು ವಿಧಾನಸಭೆ ಮತ್ತು ವಿಧಾನ ಪರಿಷತ್ ಎರಡೂ ಕಡೆ ಚರ್ಚಿಸಲಾಗುತ್ತದೆ. ನಂತರ ನಿರ್ಣಯ ತೆಗೆದುಕೊಳ್ಳಲಾಗುವುದು. ಕೇಂದ್ರ ಸರ್ಕಾರ ಇತರೆ ರಾಜ್ಯಗಳಿಂದಲೂ ಅಭಿಪ್ರಾಯಗಳನ್ನು ಕೇಳಬಹುದು. ತಾಲ್ಲೂಕು ಪಂಚಾಯಿತಿ ಸಿಬ್ಬಂದಿಯನ್ನು ಗ್ರಾಮ ಪಂಚಾಯತಿಗಳಿಗೆ ವರ್ಗಾಯಿಸಬಹುದು. ಇದರಿಂದ ಗ್ರಾಮ ಪಂಚಾಯತಿಗಳು ಆರ್ಥಿಕವಾಗಿಯೂ ಪ್ರಬಲವಾಗುತ್ತವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆಎಸ್ ಈಶ್ವರಪ್ಪ ತಿಳಿಸಿದ್ದಾರೆ.

ಸಂವಿಧಾನದ ತಿದ್ದುಪಡಿ ಮಾಡಬೇಕು
ತಾಲ್ಲೂಕು ಪಂಚಾಯತಿಗಳನ್ನು ರದ್ದುಗೊಳಿಸುವುದು ಬಹಳ ಸುದೀರ್ಘ ಪ್ರಕ್ರಿಯೆಯಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಸಂವಿಧಾನದಲ್ಲಿ ತಿದ್ದುಪಡಿ ತರಬೇಕಾಗಿದೆ. ಹೀಗಾಗಿ ಈ ಬಾರಿಯ ತಾಲ್ಲೂಕು ಪಂಚಾಯಿತಿ ಚುನಾವಣೆಗೂ ಮುನ್ನ ಅವುಗಳ ರದ್ದತಿ ಸಾಧ್ಯವಾಗುವುದು ಅನುಮಾನ.

ನಿರ್ಣಯ ರವಾನೆಯ ಕೆಲಸ ಮಾತ್ರ
ಗ್ರಾಮ ಪಂಚಾಯತಿಗಳು ಅಂಗೀಕರಿಸಿದ ನಿರ್ಣಯಗಳನ್ನು ಜಿಲ್ಲಾ ಪಂಚಾಯಿತಿಗಳಿಗೆ ರವಾನಿಸುವ ಕೆಲಸವನ್ನಷ್ಟೇ ತಾಲ್ಲೂಕು ಪಂಚಾಯತಿಗಳು ಮಾಡುತ್ತಿವೆ. ಅವರಿಗೆ ಯಾವುದೇ ಆರ್ಥಿಕ ಅಧಿಕಾರವಿಲ್ಲ. ಅವುಗಳು ಯಾವುದೇ ಯೋಜನೆಯನ್ನು ಜಾರಿಗೊಳಿಸಲು ಆಗುವುದಿಲ್ಲ. ಹೀಗಾಗಿ ತಾಲ್ಲೂಕು ಪಂಚಾಯತಿಗಳು ಸರ್ಕಾರದ ಪಾಲಿನ ಬಿಳಿಯಾನೆಯಾಗಿದೆ.
Recommended Video

3,200 ತಾಲ್ಲೂಕು ಪಂಚಾಯತಿ ಸ್ಥಾನ
ಅತ್ತ ಚುನಾವಣಾ ಆಯೋಗವು ಚುನಾವಣಾ ಪೂರ್ವ ಪ್ರಕ್ರಿಯೆಗಳನ್ನು ನಡೆಸುತ್ತಿದೆ. ನಿಯಮದ ಪ್ರಕಾರ ಮತದಾರರ ಸಂಖ್ಯೆ ಹೆಚ್ಚಿದಂತೆ ಕ್ಷೇತ್ರ ವಿಂಗಡಣೆ ಮಾಡಬೇಕಾಗುತ್ತದೆ. ಪ್ರತಿ ಕ್ಷೇತ್ರಕ್ಕೆ ಮತದಾರರ ಸಂಖ್ಯೆಯನ್ನು ಹೆಚ್ಚಿಸಿದ ಬಳಿಕ ತಾಲ್ಲೂಕು ಪಂಚಾಯತಿ ಸ್ಥಾನಗಳ ಸಂಖ್ಯೆ 600ರಷ್ಟು ಇಳಿಕೆಯಾಗಲಿದೆ. 3,200 ತಾಲ್ಲೂಕು ಪಂಚಾಯತಿ ಸ್ಥಾನಗಳಿಗೆ ಚುನಾವಣೆ ನಡೆಸಲು ಆಯೋಗ ಮುಂದಾಗಿದೆ. ತಾಲ್ಲೂಕು ಪಂಚಾಯಿತಿಯ ರದ್ದತಿ ಇಲ್ಲ ಎಂದು ಇತ್ತೀಚೆಗೆ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದರು.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications