ಕಾಡುಗೊಲ್ಲ ಸಮುದಾಯಕ್ಕೆ ಎಸ್ಟಿ ಮಾನ್ಯತೆ
ಬೆಂಗಳೂರು, ಜನವರಿ 18 : ಕಾಡುಗೊಲ್ಲ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ -1ರ ಗೊಲ್ಲ ಜಾತಿಯೊಂದಿಗೆ ಸೇರಿಸಲು ಸರ್ಕಾರ ಒಪ್ಪಿಗೆ ನೀಡಿದೆ. ಇದರಿಂದಾಗಿ ಹಲವು ವರ್ಷಗಳ ಹೋರಾಟಕ್ಕೆ ಬೆಲೆ ಸಿಕ್ಕಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳಲಾಗಿದೆ.
ಪ್ರವರ್ಗ-1ರ ಪಟ್ಟಿಯ ಗೊಲ್ಲ ಜಾತಿಯೊಂದಿಗೆ 'ಕಾಡುಗೊಲ್ಲ' ಸಮುದಾಯವನ್ನು ಸೇರಿಸಲು ಒಪ್ಪಿಗೆ ನೀಡಲಾಗಿದೆ. 'ಹಟ್ಟಿಗೊಲ್ಲ' ಎಂಬ ಪರ್ಯಾಯ ಪದದೊಂದಿಗೆ ಸೇರ್ಪಡೆ ಮಾಡಲಾಗುತ್ತದೆ.

ಕೆಲವು ದಿನಗಳ ಹಿಂದೆ ಹಿರಿಯ ವಕೀಲ ಸಿ.ಎಸ್.ದ್ವಾರಕಾನಾಥ್, ನಟ ಚೇತನ್ ಮತ್ತು ಸಮುದಾಯದ ಪ್ರಮುಖರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ 'ಕಾಡುಗೊಲ್ಲ' ಸಮುದಾಯವನ್ನು ಜಾತಿ ಪಟ್ಟಿಗೆ ಸೇರಿಸಬೇಕು ಎಂದು ಮನವಿ ಸಲ್ಲಿಸಿದ್ದರು.

ಕಾಡುಗೊಲ್ಲರು ಕಾಡಿನ ಹಟ್ಟಿಗಳಲ್ಲಿ ವಾಸ ಮಾಡುತ್ತಾ, ಯಾವ ಆಧುನಿಕತೆಗೂ ತೆರೆದುಕೊಳ್ಳದೇ ಬುಡುಕಟ್ಟುಗಳಾಗಿ ಉಳಿದುಕೊಂಡಿದ್ದರು. ಹಲವಾರು ವರ್ಷಗಳಿಂದ ತಮ್ಮ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿದ್ದರು.
ಬುಡಕಟ್ಟು ಸಮುದಾಯದಿಂದ ಬಂದ ಕಾಡುಗೊಲ್ಲರು ವಿಶಿಷ್ಟ ಆಚಾರ-ವಿಚಾರ ಗಳನ್ನು ಇಂದಿಗೂ ಪಾಲಿಸಿಕೊಂಡು ಬರುತ್ತಿದ್ದಾರೆ. ಇಂತಹ ಆಚರಣೆಗಳಲ್ಲಿ 'ಜನಿಗೆ' ಪದ್ಧತಿಯು ಒಂದು.
ಹುಟ್ಟಿದ ಮಗು ಸೂತಕ ಕಳೆದುಕೊಳ್ಳಲು ಗೋ ಅಥವಾ ಕುರಿಯ ಹಾಲನ್ನು ಬಳಸಿ ತಾಯಿ ಮತ್ತು ಮಗುವನ್ನು ಶುದ್ಧೀಕರಣ ಮಾಡುವ ಪದ್ಧತಿಗೆ 'ಜಿನಿಗೆ' ಎನ್ನುತ್ತಾರೆ.
ಹಾಲಿನಿಂದ ತಾಯಿ ಮತ್ತು ಮಗುವನ್ನು ಶುದ್ಧೀಕರಣ ಮಾಡಿಕೊಂಡು ಮಗುವಿಗೆ ನಾಮಕರಣ ಮಾಡುವ ಪದ್ಧತಿ ಇಂದಿಗೂ ಸಮುದಾಯದಲ್ಲಿ ಜಾರಿಯಲ್ಲಿದೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications