ಕಾಡುಗೊಲ್ಲ ಸಮುದಾಯಕ್ಕೆ ಎಸ್ಟಿ ಮಾನ್ಯತೆ
ಬೆಂಗಳೂರು, ಜನವರಿ 18 : ಕಾಡುಗೊಲ್ಲ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ -1ರ ಗೊಲ್ಲ ಜಾತಿಯೊಂದಿಗೆ ಸೇರಿಸಲು ಸರ್ಕಾರ ಒಪ್ಪಿಗೆ ನೀಡಿದೆ. ಇದರಿಂದಾಗಿ ಹಲವು ವರ್ಷಗಳ ಹೋರಾಟಕ್ಕೆ ಬೆಲೆ ಸಿಕ್ಕಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳಲಾಗಿದೆ.
ಪ್ರವರ್ಗ-1ರ ಪಟ್ಟಿಯ ಗೊಲ್ಲ ಜಾತಿಯೊಂದಿಗೆ 'ಕಾಡುಗೊಲ್ಲ' ಸಮುದಾಯವನ್ನು ಸೇರಿಸಲು ಒಪ್ಪಿಗೆ ನೀಡಲಾಗಿದೆ. 'ಹಟ್ಟಿಗೊಲ್ಲ' ಎಂಬ ಪರ್ಯಾಯ ಪದದೊಂದಿಗೆ ಸೇರ್ಪಡೆ ಮಾಡಲಾಗುತ್ತದೆ.

ಕೆಲವು ದಿನಗಳ ಹಿಂದೆ ಹಿರಿಯ ವಕೀಲ ಸಿ.ಎಸ್.ದ್ವಾರಕಾನಾಥ್, ನಟ ಚೇತನ್ ಮತ್ತು ಸಮುದಾಯದ ಪ್ರಮುಖರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ 'ಕಾಡುಗೊಲ್ಲ' ಸಮುದಾಯವನ್ನು ಜಾತಿ ಪಟ್ಟಿಗೆ ಸೇರಿಸಬೇಕು ಎಂದು ಮನವಿ ಸಲ್ಲಿಸಿದ್ದರು.

ಕಾಡುಗೊಲ್ಲರು ಕಾಡಿನ ಹಟ್ಟಿಗಳಲ್ಲಿ ವಾಸ ಮಾಡುತ್ತಾ, ಯಾವ ಆಧುನಿಕತೆಗೂ ತೆರೆದುಕೊಳ್ಳದೇ ಬುಡುಕಟ್ಟುಗಳಾಗಿ ಉಳಿದುಕೊಂಡಿದ್ದರು. ಹಲವಾರು ವರ್ಷಗಳಿಂದ ತಮ್ಮ ಅಸ್ತಿತ್ವಕ್ಕಾಗಿ ಹೋರಾಟ ನಡೆಸುತ್ತಿದ್ದರು.
ಬುಡಕಟ್ಟು ಸಮುದಾಯದಿಂದ ಬಂದ ಕಾಡುಗೊಲ್ಲರು ವಿಶಿಷ್ಟ ಆಚಾರ-ವಿಚಾರ ಗಳನ್ನು ಇಂದಿಗೂ ಪಾಲಿಸಿಕೊಂಡು ಬರುತ್ತಿದ್ದಾರೆ. ಇಂತಹ ಆಚರಣೆಗಳಲ್ಲಿ 'ಜನಿಗೆ' ಪದ್ಧತಿಯು ಒಂದು.
ಹುಟ್ಟಿದ ಮಗು ಸೂತಕ ಕಳೆದುಕೊಳ್ಳಲು ಗೋ ಅಥವಾ ಕುರಿಯ ಹಾಲನ್ನು ಬಳಸಿ ತಾಯಿ ಮತ್ತು ಮಗುವನ್ನು ಶುದ್ಧೀಕರಣ ಮಾಡುವ ಪದ್ಧತಿಗೆ 'ಜಿನಿಗೆ' ಎನ್ನುತ್ತಾರೆ.
ಹಾಲಿನಿಂದ ತಾಯಿ ಮತ್ತು ಮಗುವನ್ನು ಶುದ್ಧೀಕರಣ ಮಾಡಿಕೊಂಡು ಮಗುವಿಗೆ ನಾಮಕರಣ ಮಾಡುವ ಪದ್ಧತಿ ಇಂದಿಗೂ ಸಮುದಾಯದಲ್ಲಿ ಜಾರಿಯಲ್ಲಿದೆ.
-
LPG: ಬೆಂಗಳೂರಿಗೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಪೂರೈಕೆ ತಕ್ಷಣವೇ ಆರಂಭಿಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications