ಎಸ್ಸಿ, ಎಸ್ಟಿ ಸಮುದಾಯಕ್ಕೆ ಉತ್ತಮ ಜೀವನ ಕಲ್ಪಿಸಲು ಸರ್ಕಾರ ಬದ್ಧ
ಬೆಂಗಳೂರು, ಅಕ್ಟೋಬರ್ 09: ತುಳಿತಕ್ಕೆ ಒಳಪಟ್ಟ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಆತ್ಮಗೌರವ, ಸಮಾನ ಅವಕಾಶ ಹಾಗೂ ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಾಲ್ಮೀಕಿ ಜಯಂತಿಯ ಅಂಗವಾಗಿ ಭಾನುವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಬಳಿಕ ಸುದ್ದಿಗಾರರ ಜತೆ ಮಾತನಾಡಿ ಅವರು, ಪರಿವರ್ತನೆಯ ಹರಿಕಾರ, ಶ್ರೇಷ್ಠ ಮಾನವತಾವಾದಿ, ರಾಮಾಯಣದ ರಚನಕಾರ, ಇಡೀ ಜಗತ್ತಿಗೆ ದಾರಿದೀಪವಾಗಿರುವ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ ಎಂದರು.
ಸರ್ಕಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದದಲ್ಲಿ ಸಚಿವರಾದ ಶ್ರೀರಾಮುಲು, ಗೋವಿಂದ ಕಾರಜೋಳ ಹಾಗೂ ನಾವು ಇದ್ದ ಸಭೆಯಲ್ಲಿ ನಿರ್ಧರಿಸಲಾಗಿತ್ತು.

ಅಂದಿನಿಂದ ಇಂದಿನವರೆಗೂ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಾಡಿನಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಮಹರ್ಷಿ ವಾಲ್ಮೀಕಿ ಅವರ ತತ್ವ ಆದರ್ಶಗಳನ್ನು ಸರ್ಕಾರ, ಸಮಾಜ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಲು ಅಗತ್ಯವಿರುವ ಕಾರ್ಯಕ್ರಮಗಳನ್ನು ನಾವು ರೂಪಿಸುತ್ತಿದ್ದೇವೆ ಎಂದು ತಿಳಿಸಿದರು.
ಮಹರ್ಷಿ ವಾಲ್ಮೀಕಿಯವರ ತತ್ವ, ಆದರ್ಶಗಳನ್ನು ಆಡಳಿತದಲ್ಲಿ ಅಳವಡಿಸಿಕೊಳ್ಳಲಾಗುವುದು. ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ವಿಶ್ವದ ಹತ್ತು ಶ್ರೇಷ್ಠ ಗ್ರಂಥಗಳಲ್ಲಿ ಶ್ರೇಷ್ಠವಾಗಿದೆ. ರಾಮಾಯಣ ರಚಿಸಿ ಜೀವನದ ಮಾರ್ಗ ಮತ್ತು ಸಾರವನ್ನು ವಾಲ್ಮೀಕಿ ಕೊಟ್ಟಿದ್ದಾರೆ. ರಾಮಾಯಣದ ಎಲ್ಲಾ ಪ್ರಸಂಗಗಳು ಅನುಕರಣೀಯ. ಮುಖ್ಯಮಂತ್ರಿಯಾಗಿ ಮಹರ್ಷಿ ವಾಲ್ಮೀಕಿಯವರ ತತ್ವ, ಆದರ್ಶಗಳನ್ನು ಆಡಳಿತದಲ್ಲಿ ಅಳವಡಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಾರಿಗೆ ಖಾತೆ ಸಚಿವ ಬಿ. ಶ್ರೀರಾಮುಲು, ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ, ಭೋವಿ ಪೀಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
-
LPG: ಎಲ್ಪಿಜಿ ಹೆಚ್ಚಿನ ದರಕ್ಕೆ ಮಾರಿದರೆ ಕಂಪನಿಗಳಿಗೆ ಬೀಗ: ಸಚಿವ ಕೆ.ಎಚ್.ಮುನಿಯಪ್ಪ ಖಡಕ್ ಎಚ್ಚರಿಕೆ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ












Click it and Unblock the Notifications