Get Updates
Get notified of breaking news, exclusive insights, and must-see stories!

ರಾಜ್ಯದ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯ ನೌಕರರ ವರ್ಗಾವಣೆ ರದ್ದು: ಸರ್ಕಾರ ಆದೇಶ

ಬೆಂಗಳೂರು, ಜನವರಿ 16: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವರ್ಗಾವಣೆ ಹಾಗೂ ನಿಯೋಜನೆಯನ್ನು ರದ್ದು ಪಡಿಸುವ ಕುರಿತು ರಾಜ್ಯ ಕಾಂಗ್ರೆಸ್‌ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ಬೆಂಗಳೂರು, ಇವರು, ಉಲ್ಲೇಖ (1) ರಲ್ಲಿ ಮನವಿಯನ್ನು ಸಲ್ಲಿಸಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಸರ್ಕಾರದ ಅನುಮೋದನೆಯಿಲ್ಲದೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಹಂತದಲ್ಲೆ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಮಾಡಿರುವ ವರ್ಗಾವಣೆ/ನಿಯೋಜನೆ ಆದೇಶಗಳನ್ನು ಹಿಂಪಡೆಯುವಂತೆ ಕೋರಿರುತ್ತಾರೆ.

govt orders cancellation of transfer of employees of rural development panchayat raj department

ಉಲ್ಲೇಖ (2) ರ ಸರ್ಕಾರದ ಸುತ್ತೋಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವರ್ಗಾವಣೆ ನಿಯೋಜನೆಯನ್ನು ಮಾಡಲು ಸರ್ಕಾರದ ಅನುಮೋದನೆ ಪಡೆಯುವುದು ಕಡ್ಡಾಯಗೊಳಿಸಲಾಗಿದ್ದು, ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಯಾವುದಾದರೂ ವರ್ಗಾವಣೆ /ನಿಯೋಜನೆ ಪ್ರಸ್ತಾವನೆ ಇದ್ದಲ್ಲಿ ಅಂತಹ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ಪಡೆಯಲು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರನ್ನು ಬೇರೆ ಇಲಾಖೆಗಳಿಗೆ ಅಥವಾ ಅನ್ಯ ಕಾರ್ಯನಿಮಿತ್ತ ಯಾವುದೇ ಪ್ರಾಧಿಕಾರದಿಂದ ಬಂದಂತಹ ನಿಯೋಜನೆ ಕೋರಿಕೆಗಳನ್ನು ಕೂಡಾ ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ಪಡೆಯತಕ್ಕದ್ದು ಎಂದು ತಿಳಿಸಲಾಗಿದೆ.

ಇನ್ನೂ ಸದರಿ ಸುತ್ತೋಲೆಯಂತೆ ಕ್ರಮವಹಿಸಲು ತಿಳಿಸಿದ ಹಾಗೂ ಸರ್ಕಾರದ ಅನುಮೋದನೆಯಿಲ್ಲದೆ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಹಂತದಲ್ಲಿ ಮಾಡಿರುವ ನಿಯೋಜನೆ/ವರ್ಗಾವಣೆಯನ್ನು ರದ್ದುಪಡಿಸುವಂತೆ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+