Breaking : ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ!
ಬೆಂಗಳೂರು, ಜೂನ್ 29: ಹೆಣ್ಣೊಂದು ಕಲಿತರ ಶಾಲೆಯೊಂದು ತೆರೆದಂತೆ ಅನ್ನೋದು ಬಹಳ ಪ್ರಚಲಿತದಲ್ಲಿದ್ದ ಮಾತು. ಹೆಣ್ಣು ಮಕ್ಕಳ ಶಿಕ್ಷಣದ ಮಹತ್ವವನ್ನು ಸಾರುವ ವಿಚಾರವೂ ಹೌದು. ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಕೋಟ್ಯಾಂತರ ಹಣವನ್ನು ಖರ್ಚು ಮಾಡುತ್ತಿದೆ. ಇದೀಗ ಪದವಿ ಪೂರ್ವ ಶಿಕ್ಷಣದಲ್ಲಿಯೂ ಹೆಣ್ಣು ಮಕ್ಕಳಿಗೆ ಗುಡ್ ನ್ಯೂಸ್ ಅನ್ನು ಶಿಕ್ಷಣ ಇಲಾಖೆ ನೀಡಿದೆ.
ಶೈಕ್ಷಣಿಕ ವರ್ಷ 2022-23ನೇ ಸಾಲಿನಿಂದ ಪದವಿ ಪೂರ್ವ ಶಿಕ್ಷಣಕ್ಕೆ ಸೇರುವು ಅಂದರೆ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಸೇರುವ ವಿದ್ಯಾರ್ಥಿನಿಯ ಸಂಪೂರ್ಣ ಶುಲ್ಕ ವಿನಾಯಿತಿಯನ್ನು ನೀಡಿ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ.
ಶಿಕ್ಷಣ ಇಲಾಖೆಯ ಆದೇಶದಲ್ಲಿ ಏನಿದೆ; ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ ಉಲ್ಲೇಖ 1ರಲ್ಲಿ ತಿಳಿಸಿರುವಂತೆ 2019-20ನೇ ಸಾಲಿನಿಂದ ರೂ. 456/- ಶುಲ್ಕದಿಂದ ವಿನಾಯಿತಿ ನೀಡಿ ಪ್ರವೇಶ ನೀಡಲು ಆದೇಶಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ ಕೇವಲ ಆಯಾ ವರ್ಷಗಳಿಗೆ ಮಾತ್ರ ಸೀಮಿತಿವಾಗಿ ಶುಲ್ಕದಿಂದ ವಿನಾಯಿತಿ ನೀಡಿ ಪ್ರಾಂಶುಪಾಲರ ಖಾತೆಗೆ ಜಮೆ ಮಾಡಲು ಅನುಮತಿ ನೀಡಲಾಗಿತ್ತು.

ಆದರೆ ಉಲ್ಲೇಖ ೨ ಸರ್ಕಾರ ಆದೇಶದಂತೆ 2022-23ನೇ ಶೈಕ್ಷಣಿಕ ಸಾಲಿನಿಂದ ಶಾಶ್ವತವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ ರೂ. 456/- ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿರುತ್ತದೆ. ಮುಂದುವರೆದು ಶುಲ್ಕ ಮರು ಪಾವತಿಗಾಗಿ ಲೆಕ್ಕ ಶೀರ್ಷಿಕೆ 2202-02-001-0-01 ಉಪ ಶೀರ್ಷಿಕೆ 103 ಅಡಿ ಅನುದಾನವನ್ನು ಸಂಬಂಧಿಸಿದ ಪ್ರಾಂಶುಪಾಲರ ಖಾತೆಗೆ ಖಜಾನೆ -2 ತಂತ್ರಾಂಶದ ಮೂಲ ಬಿಡುಗಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಿದೆ ಎಂದು ಶಿಕ್ಷಣ ಇಲಾಖೆ ಆದೇಶಿಸಿದೆ.

ಇನ್ನು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ನೀಡಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಸಚಿವ ಬಿಸಿ ನಾಗೇಶ್ ಟ್ವಿಟ್ ಮಾಡಿದ್ದಾರೆ.
Recommended Video
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ












Click it and Unblock the Notifications