ರಾಜ್ಯದಲ್ಲಿ ಆರು ಹೊಸ ನಗರ ನಿರ್ಮಿಸಲು ಸರ್ಕಾರ ನಿರ್ಧಾರ: ಬಸವರಾಜ ಬೊಮ್ಮಾಯಿ
ಬೆಂಗಳೂರು, ನವೆಂಬರ್ 16: ಬೆಂಗಳೂರಿನ ವ್ಯಾಪ್ತಿ ಒಂದು ಹೊಸ ನಗರ ಸೇರಿದಂತೆ ಕರ್ನಾಟಕದಾದ್ಯಂತ ಒಟ್ಟು ಆರು ಹೊಸ ನಗರ ನಿರ್ಮಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬುಧವಾರ ಇಲ್ಲಿ ಆರಂಭವಾದ ಮೂರು ದಿನಗಳ 25ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಈ ಬಗ್ಗೆ ಅವರು ಘೋಷಿಸಿದರು. ಪ್ರತಿದಿನ ಸರಾಸರಿ 5,000 ಟೆಕ್ಕಿಗಳು ವೃತ್ತಿಪರ ಕೆಲಸ ಕಾರ್ಯಗಳಿಗಾಗಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ (ಕೆಐಎ) ನಿಲ್ದಾಣಕ್ಕೆ ಬಂದಿಳಿಯುತ್ತಾರೆ. ನಗರೀಕರಣದಿಂದ ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ಅಭಿವೃದ್ಧಿಯನ್ನು ವಿಕೇಂದ್ರೀಕರಿಸುವ ಚಿಂತನೆ ನಡೆಸಿದೆ ಎಂದರು.
ಕೆಐಎ ಬಳಿ ಹೊಸ ನಗರ ನಿರ್ಮಾಣ?
ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದಲ್ಲಿ ಶೀಘ್ರದಲ್ಲೇ ಒಟ್ಟು ಆರು ಹೊಸ ನಗರಗಳನ್ನು ನಿರ್ಮಿಸಲಾಗುವುದು. ಕಲಬುರ್ಗಿ, ಹುಬ್ಬಳ್ಳಿ ಧಾರವಾಡ, ಮೈಸೂರು, ಮಂಗಳೂರು ಸುತ್ತ ಹೊಸ ನಗರಗಳು ಬರಲಿವೆ. ಈ ಹೊಸ ನಗರಗಳು ಕರ್ನಾಟಕದ ಆರ್ಥಿಕತೆ ಮತ್ತು ಉತ್ಪಾದಕತೆ ಹೆಚ್ಚಿಸಲು ನೆರವಾಗಲಿವೆ. ಈ ಆರು ಹೊಸ ನಗರಗಳಲ್ಲಿ ಬೆಂಗಳೂರಿನ ಬಳಿ ಒಂದನ್ನು ನಿರ್ಮಿಸಲಾಗುತ್ತಿದೆ. ಇದು ಆದಷ್ಟು ಕೆಐಎಗೆ ಹತ್ತಿರವಿರಲಿದೆ ಎಂದು ಪುನರುಚ್ಚರಿಸಿದರು.

ಬೆಂಗಳೂರಿನಲ್ಲಿ ಎಲ್ಲವೂ ಸಾಧ್ಯವಿದೆ. ಆರೋಗ್ಯ ಕ್ಷೇತ್ರದಲ್ಲಿಯೂ ತಂತ್ರಜ್ಞಾನ ಬಳಕೆ ಮಾಡುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬೇಕು. ದೇಶದಲ್ಲಿ ಒಂದು ವರ್ಷದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ 7 ಕೋಟಿ ಮನೆಗಳಿಗೆ ಶುದ್ದ ಕುಡಿಯುವ ನೀರು ಒದಗಿಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು.
ಸ್ಟಾರ್ಟ್ಅಪ್ ಗಳನ್ನು ಪ್ರೋತ್ಸಾಹಿಸಲು ಅನೇಕ ಕಾರ್ಯಕ್ರಮಗಳಿದ್ದು, ಸರ್ಕಾರದಿಂದ ಇನ್ನಷ್ಟು ಕಾರ್ಯಕ್ರಮ ರೂಪಿಸಲಾಗುವುದು. ಪ್ರಧಾನಿಗಳು ಬಿಐಎಎಲ್ ನ 2 ನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ. ಜಗತ್ತಿನಲ್ಲಿಯೇ ಅತ್ಯಂತ ಸುಂದರವಾದ ಟರ್ಮಿನಲ್ ಇದಾಗಿದೆ. ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಪಕ್ಷದಿಂದ ನಡೆದ ಸಮಾರಂಭದಲ್ಲಿ ಮೈಸೂರು ಸುತ್ತಮುತ್ತ ವಿವಿಧ ಉದ್ದೇಶಗಳಿಗೆ ಬಂಡವಾಳ ಹೂಡಿಕೆದಾರರು ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಇದರಿಂದ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ತಿಳಿಸಿದರು.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?










Click it and Unblock the Notifications