ಖಾಸಗೀಕರಣ ಮಂತ್ರ: ಹುಬ್ಬಳ್ಳಿ ಸೇರಿ 13 ವಿಮಾನ ನಿಲ್ದಾಣ ಖಾಸಗೀಕರಣಕ್ಕೆ ಪಟ್ಟಿ ರೆಡಿ
ಹುಬ್ಬಳ್ಳಿ, ಅಕ್ಟೋಬರ್ 26: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಕಾಲದಲ್ಲಿ ತಣ್ಣಗಾಗಿದ್ದ ವಿಮಾನ ನಿಲ್ದಾಣಗಳ ಖಾಸಗೀಕರಣದ ಸುದ್ದಿ ಮತ್ತೆ ಸದ್ದು ಮಾಡಿದೆ. ಕೇಂದ್ರ ಸರ್ಕಾರದ ಖಾಸಗೀಕರಣಕ್ಕೊಳಗಾದ ವಿಮಾನ ನಿಲ್ದಾಣಗಳ ಪಟ್ಟಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣವೂ ಸೇರ್ಪಡೆಯಾಗಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣ ಸೇರಿದಂತೆ ಸರ್ಕಾರಿ ಸ್ವಾಮ್ಯದ ಭಾರತೀಯ ವಿಮಾನಯಾನ ಪ್ರಾಧಿಕಾರದಡಿ ನಡೆಯುತ್ತಿರುವ 13 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರದ ಮುಂದಾಗಿದೆ. ಈ ನಿಟ್ಟಿನಲ್ಲಿ ಮಾರ್ಚ್ ತಿಂಗಳಾಂತ್ಯದ ವೇಳೆಗೆ ಪ್ರಕ್ರಿಯೆ ಪೂರ್ಣಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿದೆ.
ಪ್ರಯಾಣಿಕರ ಆದಾಯದ ಮಾದರಿಯನ್ನೇ ಬಿಡ್ಡಿಂಗ್ಗೆ ಅನುಸರಿಸಬೇಕಾಗುತ್ತದೆ. ಈ ಹಿಂದೆಯೂ ಬಳಕೆಯಾದ ಮಾದರಿ ಯಶಸ್ವಿಯಾಗಿದೆ. ಜೆವಾರ್ ವಿಮಾನ ನಿಲ್ದಾಣವನ್ನು (ಗ್ರೇಟರ್ ನೋಯ್ಡಾದಲ್ಲಿ) ಸಹ ಅದೇ ಮಾದರಿಯಲ್ಲಿ ಬಿಡ್ ಮಾಡಲಾಗಿದೆ" ಎಂದು ಭಾರತೀಯ ವಿಮಾನಯಾನ ಪ್ರಾಧಿಕಾರದ ಅಧ್ಯಕ್ಷ ಸಂಜೀವ್ ಕುಮಾರ್ ಹೇಳಿದ್ದಾರೆ.

ವಿಮಾನಯಾನ ಸಚಿವಾಲಯಕ್ಕೆ ಅಂತಿಮ ಪಟ್ಟಿ
ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿಯ ಹೊರತಾಗಿಯೂ ಈ ಯೋಜನೆಗಳನ್ನು ತೆಗೆದುಕೊಳ್ಳುವವರು ಇರುತ್ತಾರೆ. ಏಕೆಂದರೆ ಕೊರೊನಾವೈರಸ್ ರೋಗದ ಪರಿಣಾಮವು ಅಲ್ಪಾವಧಿಯದ್ದಾಗಿದೆ. ಆದರೆ ವಿಮಾನ ನಿಲ್ದಾಣಗಳು 50 ವರ್ಷಗಳವರೆಗೆ ಖಾಸಗೀಯವರಿಗೆ ನೀಡಲಾಗುತ್ತದೆ. "ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಆಧಾರದಲ್ಲಿ ಬಿಡ್ಡಿಂಗ್ ಪ್ರಕ್ರಿಯೆಯನ್ನು ನಡೆಸಬೇಕಾದ 13 ವಿಮಾನ ನಿಲ್ದಾಣಗಳ ಪಟ್ಟಿಯನ್ನು ವಿಮಾನಯಾನ ಸಚಿವಾಲಯಕ್ಕೆ ಕಳುಹಿಸಿ ಆಗಿದೆ. ಈ ಹಣಕಾಸು ವರ್ಷದ ಅಂತ್ಯದ ವೇಳೆಗೆ ಈ ವಿಮಾನ ನಿಲ್ದಾಣಗಳ ಬಿಡ್ಡಿಂಗ್ ಅನ್ನು ಪೂರ್ಣಗೊಳಿಸುವ ಯೋಜನೆ ಇದೆ" ಎಂದು ಭಾರತೀಯ ವಿಮಾನಯಾನ ಪ್ರಾಧಿಕಾರದ ಅಧ್ಯಕ್ಷ ಸಂಜೀವ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ದೇಶದ 13 ವಿಮಾನ ನಿಲ್ದಾಣಗಳ ಖಾಸಗೀಕರಣ
ಕೇಂದ್ರ ಸರ್ಕಾರವು ಖಾಸಗೀಕರಣಗೊಳಿಸಲು ಹೊರಟಿರುವ ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಜೊತೆಗೆ ಇತರೆ 12 ವಿಮಾನ ನಿಲ್ದಾಣಗಳನ್ನು ಸೇರ್ಪಡೆಗೊಳಿಸಲಾಗಿದೆ. ಒಟ್ಟು ಏಳು ಸಣ್ಣ ವಿಮಾನ ನಿಲ್ದಾಣಗಳಿದ್ದರೆ, ಅದರ ಜೊತೆಗೆ ಆರು ದೊಡ್ಡ ವಿಮಾನ ನಿಲ್ದಾಣಗಳು ಸೇರ್ಪಡೆಯಾಗಿವೆ.
* ವಾರಣಾಸಿಯೊಂದಿಗೆ ಕುಶಿನಗರ್ ಮತ್ತು ಗಯಾ(3)
* ಅಮೃತಸರ್ ಜೊತೆಗೆ ಕಾಂಗ್ರಾ(2)
* ಭುವನೇಶ್ವರ್ ಜೊತೆ ತಿರುಪತಿ(2)
* ರಾಯಪುರ್ ಜೊತೆಗೆ ಔರಂಗಬಾದ್(2)
* ಇಂದೋರ್ ಜೊತೆ ಜಬಲ್ಪುರ್(2)
* ತಿರುಚಿ ಜೊತೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣ (2)

ಒಟ್ಟು 25 ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ಯೋಜನೆ
ರಾಷ್ಟ್ರೀಯ ಹಣಗಳಿಕೆಯ ಯೋಜನೆಯ (NMP) ಭಾಗವಾಗಿ ಈಗ ಯೋಜನೆ ಹಾಕಿಕೊಂಡಿರುವ 13 ವಿಮಾನ ನಿಲ್ದಾಣಗಳೂ ಸೇರಿದಂತೆ ಮುಂದಿನ ನಾಲ್ಕು ವರ್ಷಗಳಲ್ಲಿ ಒಟ್ಟು 25 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಸರ್ಕಾರ ಯೋಜನೆ ಹಾಕಿಕೊಂಡಿದೆ. 2005-6ರಲ್ಲಿ ದೆಹಲಿ, ಮುಂಬೈ, ಬೆಂಗಳೂರು ಮತ್ತು ಹೈದ್ರಾಬಾದ್ ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲಾಯಿತು. ಇದರ ಬೆನ್ನಲ್ಲೇ 2019ರಲ್ಲಿ ದೇಶದ ಆರು ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ನಿರ್ವಹಣೆಗೆ ನೀಡಲಾಯಿತು.
ಲಾಭ ಗಳಿಸುವ ವಿಮಾನ ನಿಲ್ದಾಣಗಳ ಖಾಸಗೀಕರಣದೊಂದಿಗೆ ವಲಯವನ್ನು ಉದಾರೀಕರಣಗೊಳಿಸುವುದು ಸರ್ಕಾರದ ಯೋಜನೆಯಾಗಿದೆ. ಖಾಸಗೀಕರಣಗೊಂಡ ವಿಮಾನ ನಿಲ್ದಾಣಗಳ ಆದಾಯದ ಹಂಚಿಕೆಯ ಮೂಲಕ ಗಳಿಸಿದ ಲಾಭವನ್ನು ಮತ್ತೊಂದು ವಲಯದ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳುವ ಬಗ್ಗೆ ಭಾರತೀಯ ವಿಮಾನಯಾನ ಪ್ರಾಧಿಕಾರ ತಿಳಿಸಿದೆ.

ವಿಮಾನಯಾನ ಪ್ರಾಧಿಕಾರದ ಆದಾಯಕ್ಕೆ ಪೆಟ್ಟು!
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನಿಂದ ಭಾರತೀಯ ವಿಮಾನಯಾನ ಪ್ರಾಧಿಕಾರದ ಆದಾಯ ಗಳಿಕೆಗೆ ಹೊಡೆತ ಬಿದ್ದಿದೆ. ಇದು FY21ರಲ್ಲಿ 1,962 ಕೋಟಿ ರೂಪಾಯಿಗಳ ದಾಖಲೆಯ ನಷ್ಟವನ್ನು ಉಂಟು ಮಾಡಿದೆ. ಸಂಬಳ ಸೇರಿದಂತೆ ದುಡಿಯುವ ಬಂಡವಾಳದ ಅಗತ್ಯತೆಗಳನ್ನು ಪೂರೈಸಲು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ 1,500 ಕೋಟಿ ಸಾಲ ಪಡೆಯುವಂತೆ ಸ್ಥಿತಿ ನಿರ್ಮಾಣವಾಗಿದೆ. ಪ್ರಸ್ತುತ ಪರಿಸ್ಥಿತಿ ಸುಧಾರಣೆ ಕಂಡಿದ್ದು ಪ್ರಯಾಣಿಕರ ಸಂಖ್ಯೆಯಲ್ಲೂ ಏರಿಕೆಯಾಗಿದೆ. ಆದ್ದರಿಂದ ಈ ವರ್ಷ ಯಾವುದೇ ರೀತಿ ಸಾಲ ಪಡೆದುಕೊಳ್ಳುವ ಅಗತ್ಯತೆ ವಿಮಾನಯಾನ ಪ್ರಾಧಿಕಾರಕ್ಕಿಲ್ಲ ಎಂದು ತಿಳಿಸಿದೆ.
ಕಳೆದ ವರ್ಷ ನಷ್ಟದ ಹೊರತಾಗಿಯೂ 2,100 ಕೋಟಿ ರೂಪಾಯಿ ಹೂಡಿಕೆ ಮಾಡಲಾಗಿದ್ದು, ಈ ಪೈಕಿ 1,000 ಕೋಟಿ ರೂಪಾಯಿ ಬಂಡವಾಳವನ್ನು ಇದೇ ವರ್ಷದಲ್ಲಿ ಬಳಕೆ ಮಾಡಿಕೊಳ್ಳಲಾಗುವುದು. "ನಮ್ಮ ಬಂಡವಾಳ ವೆಚ್ಚವು ಯೋಜಿಸಿದಂತೆ ಮುಂದುವರಿಯುತ್ತದೆ. ಈ ಹಣಕಾಸು ವರ್ಷದ ಬಂಡವಾಳ ವೆಚ್ಚದ ಅವಶ್ಯಕತೆಗಳನ್ನು ಪೂರೈಸಲು, ನಾವು ರೂ 1,000 ಕೋಟಿ ಸಾಲವನ್ನು ಪಡೆದಿದ್ದೇವೆ. ಮುಂದೆ, ಭವಿಷ್ಯದ ನಿಧಿಯ ಅಗತ್ಯವನ್ನು ಆಧರಿಸಿ, ಹೆಚ್ಚುವರಿ ಸಾಲದ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲಾಗುವುದು," ಎಂದು ಕುಮಾರ್ ಹೇಳಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications