ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

3 ವರ್ಷಗಳಿಂದ ವರ್ಗಾವಣೆ ಸ್ಥಗಿತ: ಉಪವಾಸಕ್ಕೆ ಮುಂದಾದ ಶಿಕ್ಷಕರು

|
Google Oneindia Kannada News

Recommended Video

ಮೂರು ವರ್ಷಗಳಿಂದ ವರ್ಗಾವಣೆ ಸ್ಥಗಿತ, ಉಪವಾಸಕ್ಕೆ ಮುಂದಾದ ಶಿಕ್ಷಕರು | Oneindia Kannada

ಬೆಂಗಳೂರು, ಸೆ.28: ಕಡ್ಡಾಯ ಮತ್ತು ಕೋರಿಕೆ ಶಿಕ್ಷಕರ ವರ್ಗಾವಣೆಯನ್ನು ಸ್ಥಗಿತಗೊಳಿಸಿರುವ ಸರ್ಕಾರದ ಕ್ರಮ ವಿರೋಧಿಸಿ ಅ.1ರಂದು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ಕರ್ನಾಟಕ ರಾಜ್ಯ ಶಿಕ್ಷಕರ ವರ್ಗಾವಣೆ ಹೋರಾಟ ಸಮಿತಿ ಮುಂದಾಗಿದೆ.

ಅ.ರಂದು ಶಿಕ್ಷಣ ಇಲಾಖೆ ಎದುರು ಹೋರಾಟ ನಡೆಸಲು ನಿರ್ಧರಿಸಿದೆ, ಅಂದು ಬೆಳಗ್ಗೆ 10 ಗಂಟೆಗೆ ಹೋರಾಟ ಆರಂಭಿಸಲಿದ್ದಾರೆ, ಎಲ್ಲಾ ಶಿಕ್ಷಕರು ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಕಾನೂನಿನ ಪ್ರಕಾರ ಶಿಕ್ಷಕರ ವರ್ಗಾವಣೆಯನ್ನು ನಡೆಸುವಲ್ಲಿ ಇಲಾಖೆ ವಿಫಲವಾಗಿದೆ.ಇದರಿಂದ ಸಿ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರಿಗೆ ಅನ್ಯಾಯವಾಗುತ್ತಿದೆ ಎಂಬುದು ಶಿಕ್ಷಕರ ವಾದ.

ಎರಡು ವರ್ಷಗಳ ನಂತರ ಸರ್ಕಾರಿ ಶಿಕ್ಷಕರಿಗೆ ವರ್ಗಾವಣೆ ಭಾಗ್ಯ! ಎರಡು ವರ್ಷಗಳ ನಂತರ ಸರ್ಕಾರಿ ಶಿಕ್ಷಕರಿಗೆ ವರ್ಗಾವಣೆ ಭಾಗ್ಯ!

ಈಗಾಗಲೇ ಕೌನ್ಸೆಲಿಂಗ್ ಪೂರ್ಣಗೊಂಡು ವರ್ಗಾವಣೆ ಆದೇಶ ಪಡೆದಿರುವ ಪ್ರೌಢಶಾಲಾ ಮುಖ್ಯಶಿಕ್ಷಕರು, ತಮ್ಮ ವರ್ಗಾವಣೆಯನ್ನು ಸ್ಥಗಿತಗೊಳಿಸುವಂತೆ ಒತ್ತಾಯಿಸಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಹೊರಡಿಸಿರುವ ಆದೇಶ ತಮಗೂ ಅನ್ವಯವಾಗಲಿದೆ.

Govt school teachers will go hunger strike before Gandhi Jayanti

ಕರ್ನಾಟಕದ ಒಂದು ಸಾವಿರ, ಭಾರತದ 13 ಸಾವಿರ ಹಳ್ಳಿಗಳಲ್ಲಿ ಶಾಲೆಗಳೇ ಇಲ್ಲ!ಕರ್ನಾಟಕದ ಒಂದು ಸಾವಿರ, ಭಾರತದ 13 ಸಾವಿರ ಹಳ್ಳಿಗಳಲ್ಲಿ ಶಾಲೆಗಳೇ ಇಲ್ಲ!

ಹಾಗಾಗಿ ತಮ್ಮ ವರ್ಗಾವಣೆಯನ್ನು ಸ್ಥಗಿತಗೊಳಿಸುವಂತೆ ಮನವಿ ಮಾಡಿದ್ದಾರೆ. ಶಿಕ್ಷಣ ಸಚಿವರು ಹೊರಡಿಸಿರುವ ಆದೇಶ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ, ಆದ್ದರಿಂದ ವರ್ಗಾವಣೆ ಆದೇಶ ಪಡೆದಿರುವ ಪ್ರೌಢಶಾಲಾ ಮುಖ್ಯ ಶಿಕ್ಷಕರು ಕಡ್ಡಾಯವಾಗಿ ಸೇವೆಯಿಂದ ಬಿಡುಗಡೆಹೊಂದಬೇಕು ಎಂದು ತಿಳಿಸಲಾಗಿದೆ.

English summary
Hundreds of primary school teachers will start indefinite hunger strike from October first opposing cancelation of transfer counseling for the consecutive third year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X