ಮೇಕೆದಾಟು ಯೋಜನೆ ತ್ವರಿತ ಅನುಮೋದನೆಗೆ ಕ್ರಮ ಎಂದ ಸಿಎಂ
ಬೆಂಗಳೂರು, ಮಾರ್ಚ್ 18: ಕರ್ನಾಟಕದ ಮಹತ್ವದ ಮೇಕೆದಾಟು ಯೋಜನೆಗೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹಾಗೂ ಕೇಂದ್ರ ಪರಿಸರ ಸಚಿವಾಲಯದಿಂದ ತ್ವರಿತ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಶುಕ್ರವಾರ ನಡೆದ ವಿಧಾನ ಮಂಡಲದ ಉಭಯ ಸದನಗಳ ಸಭಾ ನಾಯಕರ ಸಭೆಯಲ್ಲಿ ಮೇಕೆದಾಟು ಯೋಜನೆಗೆ ಚಾಲನೆ ನೀಡುವುದಕ್ಕೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದರ ಕುರಿತು ತೀರ್ಮಾನಿಸಲಾಯಿತು. ಅಂತರ ರಾಜ್ಯ ಜಲವಿವಾದಗಳ ಕುರಿತಂತೆ ಉಭಯ ಸದನಗಳ ಸಭಾ ನಾಯಕರ ಜೊತೆಗಿನ ಸಭೆ ನಂತರ ಸಿಎಂ ಈ ವಿಷಯ ತಿಳಿಸಿದರು.
ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆಗಳಲ್ಲಿ ಮೇಕೆದಾಟು ಯೋಜನೆಯ ಕುರಿತು ವಿಸ್ತೃತ ಚರ್ಚೆ ಆಗಿದೆ. ಈ ಕುರಿತು ನಡಾವಳಿಗಳಲ್ಲಿ ದಾಖಲಿಸದೆ ಇರುವುದು ಗಮನಕ್ಕೆ ಬಂದಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಜಲಶಕ್ತಿ ಸಚಿವರು ಹಾಗೂ ಪ್ರಾಧಿಕಾರದೊಂದಿಗೆ ಚರ್ಚೆ:
ಕೂಡಲೇ ಜಲಶಕ್ತಿ ಸಚಿವರು ಹಾಗೂ ಪ್ರಾಧಿಕಾರದವರೊಂದಿಗೆ ಚರ್ಚಿಸಿ, ನಡಾವಳಿಗಳಲ್ಲಿ ಚರ್ಚೆಯ ಅಂಶಗಳನ್ನು ದಾಖಲಿಸುವ ಕುರಿತು ಕ್ರಮ ವಹಿಸಲಾಗುವುದು. ಮುಂದಿನ ಸಭೆಯಲ್ಲಿ ಯೋಜನೆಗೆ ಅನುಮೋದನೆ ನೀಡಲು ಹಾಗೂ ಪರಿಸರ ಸಚಿವಾಲಯದ ತೀರುವಳಿ ಪಡೆಯಲು ಕ್ರಮ ವಹಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಅಧಿವೇಶನ ಮುಗಿದ ನಂತರ ದೆಹಲಿಗೆ ಸಿಎಂ:
ಮುಂದಿನ ವಾರ ಜಲಸಂಪನ್ಮೂಲ ಸಚಿವರು ದೆಹಲಿಗೆ ತೆರಳಲಿದ್ದು, ಅಧಿವೇಶನ ಮುಗಿದ ತಕ್ಷಣ ತಾವೇ ಸ್ವತಃ ದೆಹಲಿಗೆ ತೆರಳಿ ಕೇಂದ್ರ ಸಚಿವರೊಂದಿಗೆ ಈ ಬಗ್ಗೆ ಚರ್ಚಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇನ್ನು ಮಹಾದಾಯಿ ಯೋಜನೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹಂಚಿಕೆಯಾಗಿರುವ ನೀರಿನ ಬಳಕೆಗಾಗಿ ಯೋಜನೆ ಅನುಷ್ಠಾನಕ್ಕೆ ಪರಿಸರ ಇಲಾಖೆಯ ತೀರುವಳಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಸಿಎಂ ಮಾತು:
ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಕುರಿತು ಕೇಂದ್ರ ಸರ್ಕಾರ ಇನ್ನೂ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ. ಇದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನಲ್ಲಿ ರಾಜ್ಯ ಸರ್ಕಾರ ಸಲ್ಲಿಸಿದ ಮಧ್ಯಂತರ ಅರ್ಜಿ ವಿಚಾರಣೆಯ ಪೀಠದಿಂದ ಇಬ್ಬರು ನ್ಯಾಯಾಧೀಶರು ಹಿಂದೆ ಸರಿದಿದ್ದಾರೆ. ಹೊಸ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಭಾರತ ಸರ್ಕಾರದ ನದಿ ಜೋಡಣೆ ಯೋಜನೆ ಸಂಬಂಧ ರಾಜ್ಯಕ್ಕೆ ಹಂಚಿಕೆಯಾಗುವ ನೀರಿನ ಪ್ರಮಾಣವನ್ನು ಸ್ಪಷ್ಟ ಪಡಿಸುವಂತೆ ಕೇಂದ್ರವನ್ನು ಕೋರಲಾಗಿದೆ. ಈ ಯೋಜನೆ ತಾಂತ್ರಿಕ ವರದಿಯ ಮಾಹಿತಿಯನ್ನು ಒದಗಿಸುವಂತೆ ವಿರೋಧ ಪಕ್ಷಗಳು ಕೋರಿದ್ದು, ವರದಿ ಲಭ್ಯವಾದ ಕೂಡಲೇ ಒದಗಿಸಲಾಗುವುದು ಎಂದು ತಿಳಿಸಿದರು.
-
Kerala Assembly Election 2026: ಕೇರಳಂ ವಿಧಾನಸಭೆ ಚುನಾವಣೆ 2026: ಒಂದೇ ಹಂತದಲ್ಲಿ 140 ಸ್ಥಾನಗಳಿಗೆ ಚುನಾವಣೆ -
Kerala: ಕೇರಳಂ ವಿಧಾನಸಭೆ ಚುನಾವಣೆ 2026: ಎಲ್ಡಿಎಫ್–ಯುಡಿಎಫ್ ನಡುವೆ ಪೈಪೋಟಿ, ಹೇಗಿದೆ ರಾಜಕೀಯ ಕಣ -
Puducherry Election 2026: ವಿಧಾನಸಭಾ ಚುನಾವಣೆಗೆ ಸಜ್ಜಾದ ಪುದುಚೇರಿ ರಾಜಕೀಯ ಅಖಾಡ: ಏಪ್ರಿಲ್ 9ಕ್ಕೆ ಮತದಾನ -
Tamil Nadu Assembly Election: ತಮಿಳುನಾಡು ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 23ಕ್ಕೆ ಮತದಾನ, ಬಲಾಬಲ ಹೇಗಿದೆ? -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ












Click it and Unblock the Notifications