BPL ಆರೋಗ್ಯ ವಿಮೆ ಜಾರಿಗಾಗಿ ಇಂಧನ ಮೇಲೆ 'ಸೆಸ್' ವಿಧಿಸಲು ರಾಜ್ಯ ಸರ್ಕಾರ ಪ್ಲಾನ್
ಬೆಂಗಳೂರು, ಡಿಸೆಂಬರ್ 10 ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ ಎಂದು ಆರೋಪ ಹೊತ್ತಿರುವ ಕರ್ನಾಟಕ ಸರ್ಕಾರ ಇದೀಗ ಮಹತ್ವದ ಯೋಜನೆ ಹಣ ಹೊಂದಿಸುವ ಸಲುವಾಗಿ ಇಂಧನದ ಮೇಲೆ ಸೆಸ್ ವಿಧಿಸಲು ಚಿಂತನೆ ನಡೆಸಿದೆ.
ಹೌದು, ರಾಜ್ಯ ಸರ್ಕಾರ ತನ್ನ ಖಜಾನೆಯಲ್ಲಿ ಹಣ ಇದೆ, ಯಾವ ಹಣಕಾಸಿನ ತೊಂದರೆ ಇಲ್ಲ ಎಂದು ಹೇಳಿಕೊಂಡರೂ ಸಹಿತ ಹಣಕಾಸಿ ತೊಂದರೆ ಎದುರಿಸುತ್ತಿರುವುದನ್ನು ಸ್ವತಃ ಡಿಸಿಎಂ ಅವರೇ ಈ ಹಿಂದೆ ಹೇಳಿದ್ದರು. ಇದೀಗ ಬಿಪಿಎಲ್ ಕಾರ್ಡುದಾರರ (BPL) ಸಾರ್ವತ್ರಿಕ ಆರೋಗ್ಯ ಯೋಜನೆ ಒದಗಿಸುವ ದೃಷ್ಟಿಯಿಂದ ಈ ಯೋಜನೆಗೆ ಹಣ ಕ್ರೂಢೀಕರಿಸಲು ಇಂಧನೆ ಮೇಲೆ ಸೆಸ್ ವಿಧಿಸಲು ಮುಂದಾಗಿದೆ.

ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಕರ್ನಾಟಕ ಸರ್ಕಾರ 50 ಪೈಸೆಯಿಂದ 1 ರೂಪಾಯಿವರೆಗೆ ಸೆಸ್ ವಿಧಿಸಲು ಚಿಂತನೆ ನಡೆಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ತಿಳಿಸಿದ್ದಾರೆಂದು TOI ವರದಿ ಮಾಡಿದೆ.
ಆರೋಗ್ಯ ವಿಮೆಯಿಂದ 1.8 ಕೋಟಿ ಬಡವರಿಗೆ ಅನುಕೂಲ
ಬಿಪಿಎಲ್ ಕಾರ್ಡುದಾರರಿಗೆ ಸಾರ್ವತ್ರಿಕ ಆರೋಗ್ಯ ಯೋಜನೆ ಒದಗಿಸುವ ಉದ್ದೇಶದಿಂದ ಸರ್ಕಾರ ಸೆಸ್ ವಿಧಿಸುವ ಮೂಲಕ ಹಣ ಹೊಂದಿಸುವ ದಾರಿ ಕಂಡು ಕೊಳ್ಳಲಿದೆ. ಈ ಆರೋಗ್ಯ ಯೋಜನೆಯು ಸಂಪೂರ್ಣ 1.8 ಕೋಟಿ ಬಡತನ-ರೇಖೆಯ (BPL) ಕಾರ್ಡುದಾರರಿಗೆ ಉಪಯೋಗವಾಗಲಿದೆ. ಈ ಸಂಬಂಧ ಸೆಸ್ ಸಾರ್ವಜನಿಕರ ಮೇಲೆ ಹೊರೆಯಾಗುವುದಿಲ್ಲ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.
ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಯನ್ನು ಇತ್ತೀಚೆಗೆ ಪ್ರಾರಂಭಿಸಿದ ನಂತರ, ಕಾರ್ಮಿಕ ಇಲಾಖೆಯು ಈ ವ್ಯಾಪಕವಾದ ಆರೋಗ್ಯ ಯೋಜನೆಯತ್ತ ಗಮನ ಹರಿಸಿದೆ. 1.8 ಕೋಟಿ ಬಿಪಿಎಲ್ ಕಾರ್ಡುದಾರರನ್ನು ಒಳಗೊಳ್ಳುವ ಈ ಯೊಜನೆಯಡಿ ಪ್ರತಿ ವ್ಯಕ್ತಿಗೆ ಆರೋಗ್ಯ ಮತ್ತು ಅಪಘಾತದ ಕವರೇಜ್ನಲ್ಲಿ ಅಂದಾಜು 25 ಲಕ್ಷ ರೂ.ಒಳಗೊಂಡಿರುತ್ತದೆ.

ಸಾವಿರಾರು ಕೋಟಿ ರೂ.ಸಂಗ್ರಹದ ಗುರಿ
ಮೂಲಗಳ ಪ್ರಕಾರ, ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ರಾಜ್ಯ ಸರ್ಕಾರ ಉದ್ದೇಶಿಸಿತ ಆರೋಗ್ಯ ಯೋಜನೆಯ ಅನುಷ್ಠಾನಕ್ಕೆ ಸಹಾಯವಾಗುವಂತೆ ವಾರ್ಷಿಕವಾಗಿ 1,200 ಕೋಟಿ ರೂ.ನಿಂದ 1,500 ಕೋಟಿ ರೂಪಾಯಿಗಳನ್ನು ಸಂಗ್ರಹಿಸುವ ನಿರೀಕ್ಷೆ ಇದೆ.
ಇದರೊಂದಿಗೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಥವಾ ಸಾರಿಗೆ ಕಾರ್ಮಿಕರಿಗಾಗಿ ಹೊಸದಾಗಿ ರಚನೆಯಾದ ಸಾರಿಗೆ ಮಂಡಳಿಯಂತಹ ಅಸ್ತಿತ್ವದಲ್ಲಿರುವ ಮಂಡಳಿಗಳ ವ್ಯಾಪ್ತಿಗೆ ಒಳಪಡದ ಅಸಂಘಟಿತ ವಲಯಗಳ ಮೇಲೆ ಸರ್ಕಾರ ಗಮನ ಹರಿಸಲಿದೆ. ಅವರಿಗೆ ಸಾಮಾಜಿಕ ಭದ್ರತೆ ಒದಗಿಸಲು 43 ಅಸಂಘಟಿತ ವಲಯಗಳನ್ನು ಸರ್ಕಾರ ಗುರುತಿಸಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ












Click it and Unblock the Notifications