ರಾಜ್ಯಕ್ಕೆ ವಾಪಸ್ ಆಗುವ ಕನ್ನಡಿಗರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ
ಬೆಂಗಳೂರು, ಮೇ 10 : ಲಾಕ್ ಡೌನ್ ಸಮಯದಲ್ಲಿ ಕರ್ನಾಟಕಕ್ಕೆ ಮರಳುವ ಕನ್ನಡಿಗರಿಗೆ ಕರ್ನಾಟಕ ಸರ್ಕಾರ ಸಿಹಿ ಸುದಿಯನ್ನು ನೀಡಿದೆ. ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿರುವ ಕನ್ನಡಿಗರು ಶೀಘ್ರದಲ್ಲೇ ರಾಜ್ಯಕ್ಕೆ ವಾಪಸ್ ಆಗಲಿದ್ದಾರೆ.
"ಹೊರ ರಾಜ್ಯದಲ್ಲಿರುವ ನಮ್ಮವರು ಮರಳಿ ರಾಜ್ಯಕ್ಕೆ ಬರಲು, ಅವರ ಟ್ರೈನ್ ಟಿಕೆಟ್ ದರವನ್ನು ನಮ್ಮ ರಾಜ್ಯ ಸರ್ಕಾರವೇ ಬರಿಸಲಿದೆ" ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.
"ಈಗಾಗಲೇ ಮಧ್ಯಪ್ರದೇಶ, ತ್ರಿಪುರ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ರಾಜ್ಯಗಳು ಸಹ ಬೇರೆ ಬೇರೆ ರಾಜ್ಯದಲ್ಲಿ ಇರುವ ತಮ್ಮವರನ್ನು ವಾಪಸ್ ಕರೆಸಿಕೊಳ್ಳಲು 15% ಟ್ರೈನ್ ಟಿಕೆಟ್ ದರವನ್ನು ನಾವೇ ನೀಡುವುದಾಗಿ ಘೋಷಣೆ ಮಾಡಿದೆ" ಎಂದು ಸಚಿವರು ಫೇಸ್ಬುಕ್ ಪೋಸ್ಟ್ ಹಾಕಿದ್ದಾರೆ.

"ಅದರಂತೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಅದೇ ಮಾದರಿಯನ್ನು ಅನುಸರಿಸುವ ಮೂಲಕ ನಮ್ಮವರಿಗಾಗಿ ಸಹಾಯ ಹಸ್ತ ಚಾಚಿದೆ" ಎಂದು ತಿಳಿಸಿದ್ದಾರೆ.
ಉತ್ತರ ಭಾರತದ ವಿವಿಧ ರಾಜ್ಯಗಳಿಗೆ ಉದ್ಯೋಗ, ವಿದ್ಯಾಭ್ಯಾಸ, ಯಾತ್ರೆ ಹೀಗೆ ಹಲವು ಕಾರಣಗಳಿಗೆ ಹೋಗಿರುವ ಹಲವಾರು ಕನ್ನಡಿಗರು ಕರ್ನಾಟಕಕ್ಕೆ ವಾಪಸ್ ಆಗಲಿದ್ದಾರೆ. ಇವರನ್ನು ಕರೆತರಲು ದೆಹಲಿ-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ನಡೆಸಲು ಈಗಾಗಲೇ ಒಪ್ಪಿಗೆ ಸಿಕ್ಕಿದೆ.
ಭಾರತೀಯ ರೈಲ್ವೆಯ ಶ್ರಮಿಕ್ ವಿಶೇಷ ರೈಲಿನ ಮೂಲಕ ಇವರು ಸಂಚಾರ ನಡೆಸಲಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಶ್ರಮಿಕ್ ರೈಲಿನ ಶೇ 15ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರಗಳೇ ಭರಿಸಬೇಕು. ಆದ್ದರಿಂದ, ಕರ್ನಾಟಕ ಸರ್ಕಾರ ವೆಚ್ಚ ಭರಿಸುವುದಾಗಿ ಘೋಷಣೆ ಮಾಡಿದೆ.

-
ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 104 ಕೋಟಿ ರೂ. ವೆಚ್ಚದಲ್ಲಿ ಉಚಿತ ಶೂ, ಸಾಕ್ಸ್ ವಿತರಣೆಗೆ ಸರ್ಕಾರದ ಆದೇಶ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ












Click it and Unblock the Notifications